AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

ಈ ವಾರ ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ಅರವಿಂದ್ ಕೆಪಿ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​, ಪ್ರಶಾಂತ್​ ಸಂಬರಗಿ ನಾಮಿನೇಟ್​ ಲಿಸ್ಟ್​ನಲ್ಲಿದ್ದಾರೆ.

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ
ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Apr 04, 2021 | 6:06 PM

Share

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಓರ್ವ ಸದಸ್ಯ ಹೊರ ಹೋಗುವ ಸಮಯ ಸಮೀಪಿಸಿದೆ. ಭಾನುವಾರ (ಏಪ್ರಿಲ್ 4) ನಡೆಯುವ ಎಲಿಮಿನೇಷನ್​ನಲ್ಲಿ 14 ಸದಸ್ಯರ ಪೈಕಿ ಒಬ್ಬರ ಜರ್ನಿ ಅಂತ್ಯವಾಗಲಿದೆ. ಹಾಗಾದರೆ, ಈ ವಾರ ಯಾರು ಮನೆಯಿಂದ ಎಲಿಮಿನೇಟ್​ ಆಗುತ್ತಾರೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಮನೆಯ ಹಿರಿಯ ಸ್ಪರ್ಧಿ ಶಂಕರ್​ ಅಶ್ವತ್ಥ್​ಗೆ ಅತಿ ಹೆಚ್ಚು ಮತಗಳು ಬೀಳುವ ಮೂಲಕ ಅವರು ಮೊದಲು ನಾಮಿನೇಟ್​ ಆಗಿದ್ದರು. ಅವರು ಅಷ್ಟಾಗಿ ಮಾತನಾಡುತ್ತಿಲ್ಲ, ಟಾಸ್ಕ್​ ಚೆನ್ನಾಗಿ ಆಡ್ತಾರೆ ಆದರೆ, ಜಾಸ್ತಿ ಬೆರೆಯುವುದಿಲ್ಲ, ನಾಟಕ ಮಾಡುತ್ತಾರೆ, ಅವರ ಆರೋಗ್ಯ ಸರಿಯಿಲ್ಲ ಎನ್ನುವ ಕಾರಣ ನೀಡಿ ಮನೆ ಮಂದಿ ಅವರ ಹೆಸರನ್ನು ತೆಗೆದುಕೊಂಡಿದ್ದರು. ಶಮಂತ್​ ಕೂಡ ಈ ವಾರ ನಾಮಿನೇಟ್​ ಆಗಿದ್ದರು. ಅವರು ಎಲ್ಲರೊಡನೆ ಬೆರೆಯುತ್ತಿಲ್ಲ ಎನ್ನುವ ಆರೋಪವನ್ನು ಮಾಡಿದರು. ಪ್ರಶಾಂತ್​ ಸಂಬರಗಿ ಎಲ್ಲರ ಜತೆ ಮನಸ್ತಾಪ ಮಾಡಿಕೊಳ್ಳುತ್ತಾರೆ, ಅವರು ಕೆಲಸ ಮಾಡುವುದಿಲ್ಲ, ಬಿಗ್​ ಬಾಸ್​ ಮನೆಗೆ ಮುಳ್ಳು ಎನ್ನುವ ಆರೋಪವನ್ನು ಮನೆ ಮಂದಿ ಮಾಡಿದ್ದರು. ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ ಎನಿಸಿರುವ ಅರವಿಂದ್​ ಕೆಪಿ ಮೇಲೂ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಕೂಡ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ.

ಹೀಗಾಗಿ ಈ ವಾರ ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ಅರವಿಂದ್ ಕೆಪಿ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​, ಪ್ರಶಾಂತ್​ ಸಂಬರಗಿ ನಾಮಿನೇಟ್​ ಲಿಸ್ಟ್​ನಲ್ಲಿದ್ದಾರೆ. ಪ್ರಶಾಂತ್​ ಸಂಬರಗಿ, ಅರವಿಂದ್ ಕೆಪಿ ಮನೆಯಲ್ಲಿರುವ ಸ್ಟ್ರಾಂಗ್ ಕಂಟೆಸ್ಟೆಂಟ್​ಗಳು. ಇವರು ಆಟದಲ್ಲಿ ನೂರಕ್ಕೆ ನೂರು ಪರ್ಸೆಂಟ್ ಎಫರ್ಟ್​ ಹಾಕುತ್ತಿದ್ದಾರೆ. ಶುಭಾ, ನಿಧಿ ಕೂಡ ಮನೆಯಲ್ಲಿ ಒಳ್ಳೆಯ ಟಿಆರ್​ಪಿ ಹೊಂದಿದ್ದಾರೆ. ಹೀಗಾಗಿ ಈ ನಾಲ್ವರು ಸೇಫ್​ ಆಗೋದು ಬಹುತೇಕ ಖಚಿತ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.

ಇನ್ನು ಉಳಿದವರು ಶಮಂತ್​ ಹಾಗೂ ಶಂಕರ್​ ಅಶ್ವತ್ಥ್​. ಈ ಬಾರಿ ಇಬ್ಬರೂ ಟಾಸ್ಕ್​ಗಳಲ್ಲಿ ಅಷ್ಟಾಗಿ ಉತ್ತಮ ಕಾಂಪಿಟೇಷನ್​ ನೀಡಿಲ್ಲ. ಶಂಕರ್​ ಅಶ್ವತ್ಥ್​ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಅವರದೇ ತಂಡದವರು ಬೇಸರ ಹೊರ ಹಾಕಿದ್ದರು. ಹೀಗಾಗಿ, ಈ ವಾರ ಶಮಂತ್​ ಜಸ್ಟ್​ ಸೇಫ್​ ಆಗಿದ್ದು, ಶಂಕರ್​ ಮನೆಯಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Bigg Boss Kannada: ದಿವ್ಯಾ ಎದುರಲ್ಲೇ ಕಳಚಿತು ಬಿಗ್ ಬಾಸ್ ಸ್ಪರ್ಧಿಗಳ ಮುಖವಾಡ! ಇವರೆಲ್ಲ ಮಾಡಿದ್ದು ಸರಿಯೇ?

ವೈಲ್ಡ್​ ಕಾರ್ಡ್​ ಎಂಟ್ರಿ ಬೇಡ; ಬಿಗ್​ ಬಾಸ್​ ಮನೆಯಲ್ಲಿ ಹೊಸ ಬೇಡಿಕೆ ಇಟ್ಟ ಸ್ಪರ್ಧಿಗಳು

Published On - 3:19 pm, Sat, 3 April 21

Follow Us
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ