ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

ಈ ವಾರ ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ಅರವಿಂದ್ ಕೆಪಿ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​, ಪ್ರಶಾಂತ್​ ಸಂಬರಗಿ ನಾಮಿನೇಟ್​ ಲಿಸ್ಟ್​ನಲ್ಲಿದ್ದಾರೆ.

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ
ಸುದೀಪ್​
Follow us
|

Updated on:Apr 04, 2021 | 6:06 PM

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಓರ್ವ ಸದಸ್ಯ ಹೊರ ಹೋಗುವ ಸಮಯ ಸಮೀಪಿಸಿದೆ. ಭಾನುವಾರ (ಏಪ್ರಿಲ್ 4) ನಡೆಯುವ ಎಲಿಮಿನೇಷನ್​ನಲ್ಲಿ 14 ಸದಸ್ಯರ ಪೈಕಿ ಒಬ್ಬರ ಜರ್ನಿ ಅಂತ್ಯವಾಗಲಿದೆ. ಹಾಗಾದರೆ, ಈ ವಾರ ಯಾರು ಮನೆಯಿಂದ ಎಲಿಮಿನೇಟ್​ ಆಗುತ್ತಾರೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಮನೆಯ ಹಿರಿಯ ಸ್ಪರ್ಧಿ ಶಂಕರ್​ ಅಶ್ವತ್ಥ್​ಗೆ ಅತಿ ಹೆಚ್ಚು ಮತಗಳು ಬೀಳುವ ಮೂಲಕ ಅವರು ಮೊದಲು ನಾಮಿನೇಟ್​ ಆಗಿದ್ದರು. ಅವರು ಅಷ್ಟಾಗಿ ಮಾತನಾಡುತ್ತಿಲ್ಲ, ಟಾಸ್ಕ್​ ಚೆನ್ನಾಗಿ ಆಡ್ತಾರೆ ಆದರೆ, ಜಾಸ್ತಿ ಬೆರೆಯುವುದಿಲ್ಲ, ನಾಟಕ ಮಾಡುತ್ತಾರೆ, ಅವರ ಆರೋಗ್ಯ ಸರಿಯಿಲ್ಲ ಎನ್ನುವ ಕಾರಣ ನೀಡಿ ಮನೆ ಮಂದಿ ಅವರ ಹೆಸರನ್ನು ತೆಗೆದುಕೊಂಡಿದ್ದರು. ಶಮಂತ್​ ಕೂಡ ಈ ವಾರ ನಾಮಿನೇಟ್​ ಆಗಿದ್ದರು. ಅವರು ಎಲ್ಲರೊಡನೆ ಬೆರೆಯುತ್ತಿಲ್ಲ ಎನ್ನುವ ಆರೋಪವನ್ನು ಮಾಡಿದರು. ಪ್ರಶಾಂತ್​ ಸಂಬರಗಿ ಎಲ್ಲರ ಜತೆ ಮನಸ್ತಾಪ ಮಾಡಿಕೊಳ್ಳುತ್ತಾರೆ, ಅವರು ಕೆಲಸ ಮಾಡುವುದಿಲ್ಲ, ಬಿಗ್​ ಬಾಸ್​ ಮನೆಗೆ ಮುಳ್ಳು ಎನ್ನುವ ಆರೋಪವನ್ನು ಮನೆ ಮಂದಿ ಮಾಡಿದ್ದರು. ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ ಎನಿಸಿರುವ ಅರವಿಂದ್​ ಕೆಪಿ ಮೇಲೂ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಕೂಡ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ.

ಹೀಗಾಗಿ ಈ ವಾರ ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ಅರವಿಂದ್ ಕೆಪಿ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​, ಪ್ರಶಾಂತ್​ ಸಂಬರಗಿ ನಾಮಿನೇಟ್​ ಲಿಸ್ಟ್​ನಲ್ಲಿದ್ದಾರೆ. ಪ್ರಶಾಂತ್​ ಸಂಬರಗಿ, ಅರವಿಂದ್ ಕೆಪಿ ಮನೆಯಲ್ಲಿರುವ ಸ್ಟ್ರಾಂಗ್ ಕಂಟೆಸ್ಟೆಂಟ್​ಗಳು. ಇವರು ಆಟದಲ್ಲಿ ನೂರಕ್ಕೆ ನೂರು ಪರ್ಸೆಂಟ್ ಎಫರ್ಟ್​ ಹಾಕುತ್ತಿದ್ದಾರೆ. ಶುಭಾ, ನಿಧಿ ಕೂಡ ಮನೆಯಲ್ಲಿ ಒಳ್ಳೆಯ ಟಿಆರ್​ಪಿ ಹೊಂದಿದ್ದಾರೆ. ಹೀಗಾಗಿ ಈ ನಾಲ್ವರು ಸೇಫ್​ ಆಗೋದು ಬಹುತೇಕ ಖಚಿತ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.

ಇನ್ನು ಉಳಿದವರು ಶಮಂತ್​ ಹಾಗೂ ಶಂಕರ್​ ಅಶ್ವತ್ಥ್​. ಈ ಬಾರಿ ಇಬ್ಬರೂ ಟಾಸ್ಕ್​ಗಳಲ್ಲಿ ಅಷ್ಟಾಗಿ ಉತ್ತಮ ಕಾಂಪಿಟೇಷನ್​ ನೀಡಿಲ್ಲ. ಶಂಕರ್​ ಅಶ್ವತ್ಥ್​ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಅವರದೇ ತಂಡದವರು ಬೇಸರ ಹೊರ ಹಾಕಿದ್ದರು. ಹೀಗಾಗಿ, ಈ ವಾರ ಶಮಂತ್​ ಜಸ್ಟ್​ ಸೇಫ್​ ಆಗಿದ್ದು, ಶಂಕರ್​ ಮನೆಯಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Bigg Boss Kannada: ದಿವ್ಯಾ ಎದುರಲ್ಲೇ ಕಳಚಿತು ಬಿಗ್ ಬಾಸ್ ಸ್ಪರ್ಧಿಗಳ ಮುಖವಾಡ! ಇವರೆಲ್ಲ ಮಾಡಿದ್ದು ಸರಿಯೇ?

ವೈಲ್ಡ್​ ಕಾರ್ಡ್​ ಎಂಟ್ರಿ ಬೇಡ; ಬಿಗ್​ ಬಾಸ್​ ಮನೆಯಲ್ಲಿ ಹೊಸ ಬೇಡಿಕೆ ಇಟ್ಟ ಸ್ಪರ್ಧಿಗಳು

Published On - 3:19 pm, Sat, 3 April 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ