AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ತಿಮ್ಮೇಶ್​ ಎಲಿಮಿನೇಟ್ ಆಗೋಕೆ ಕಾರಣವಾಗಿದ್ದು ಈ ಮೂರು ಸ್ಪರ್ಧಿಗಳು

Priyanka Timmesh Eliminated: 4 ದಿನಗಳ ಕಾಲ ನಡೆದ ಟಾಸ್ಕ್​ನಲ್ಲಿ ಸೋತ ತಂಡದ ಸದಸ್ಯರು ನಾಮಿನೇಟ್​ ಆಗಿದ್ದರು. ಈ ಬಾರಿ ಸೋತ ತಂಡದಲ್ಲಿದ್ದ ಪ್ರಶಾಂತ್ ಸಂಬರಗಿ​, ಪ್ರಿಯಾಂಕಾ ತಿಮ್ಮೇಶ್​, ವೈಷ್ಣವಿ ಗೌಡ, ಶುಭಾ ಪೂಂಜಾ ನಾಮಿನೇಷನ್​ ಪಟ್ಟಿಯಲ್ಲಿದ್ದರು.

ಪ್ರಿಯಾಂಕಾ ತಿಮ್ಮೇಶ್​ ಎಲಿಮಿನೇಟ್ ಆಗೋಕೆ ಕಾರಣವಾಗಿದ್ದು ಈ ಮೂರು ಸ್ಪರ್ಧಿಗಳು
ಪ್ರಿಯಾಂಕಾ ತಿಮ್ಮೇಶ್​
TV9 Web
| Updated By: Digi Tech Desk|

Updated on:Jul 19, 2021 | 9:34 AM

Share

Priyanka Timmesh: ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಎರಡನೇ ಇನ್ನಿಂಗ್ಸ್​ನ ಮೂರನೇ ಎಲಿಮಿನೇಷನ್​ ಈ ವಾರ ನಡೆದಿದೆ. ನಾಲ್ಕು ಸ್ಪರ್ಧಿಗಳು ಈ ವಾರದ ನಾಮಿನೇಷನ್​ ಲಿಸ್ಟ್​ನಲ್ಲಿದ್ದರು. ಈ ಪೈಕಿ ಪ್ರಿಯಾಂಕಾ ತಿಮ್ಮೇಶ್​ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ಮನೆಯ ಸ್ಪರ್ಧಿಗಳ ಸಂಖ್ಯೆ ಒಂಭತ್ತಕ್ಕೆ ಇಳಿಕೆ ಆಗಿದೆ.

ಈ ವಾರ ಬಿಗ್​ ಬಾಸ್​ ನಾಮಿನೇಷನ್​ಗೆ ಬೇರೆ ರೀತಿಯ ಮಾರ್ಗ ಅನುಸರಿಸಲಾಗಿತ್ತು. ಪ್ರತಿವಾರ ಸ್ಪರ್ಧಿಗಳಿಗೆ ನಾಮಿನೇಷನ್​ ಮಾಡುವ ಆಯ್ಕೆಯನ್ನು ನೀಡಲಾಗುತ್ತದೆ. ಯಾರಿಗೆ ಯಾವ ಸ್ಪರ್ಧಿ ಇಷ್ಟವಿಲ್ಲವೋ ಅವರನ್ನು ನಾಮಿನೇಟ್​ ಮಾಡುತ್ತಾರೆ. ಈ ಬಾರಿ ಬಿಗ್​ ಬಾಸ್​ ಮನೆಯಲ್ಲಿ ಆ ರೀತಿ ಇರಲಿಲ್ಲ. ಮನೆಯಲ್ಲಿ ಎರಡು ಟೀಂ ಮಾಡಿ 10 ಟಾಸ್ಕ್​ಗಳನ್ನು ನೀಡಲಾಗಿತ್ತು. 4  ದಿನಗಳ ಕಾಲ ನಡೆದ ಟಾಸ್ಕ್​ನಲ್ಲಿ ಸೋತ ತಂಡದ ಸದಸ್ಯರು ನಾಮಿನೇಟ್​ ಆಗಿದ್ದರು. ಈ ಬಾರಿ ಸೋತ ತಂಡದಲ್ಲಿದ್ದ ಪ್ರಶಾಂತ್ ಸಂಬರಗಿ​, ಪ್ರಿಯಾಂಕಾ ತಿಮ್ಮೇಶ್​, ವೈಷ್ಣವಿ ಗೌಡ, ಶುಭಾ ಪೂಂಜಾ ನಾಮಿನೇಷನ್​ ಪಟ್ಟಿಯಲ್ಲಿದ್ದರು. ಕಡಿಮೆ ವೋಟ್ ಪಡೆದು ಪ್ರಿಯಾಂಕಾ ಔಟ್ ಆಗಿದ್ದಾರೆ.

ಅಂದಹಾಗೆ, ಈ ವಾರ ಪ್ರಿಯಾಂಕಾ ಮನೆಯಿಂದ ಹೊರಹೋಗೋಕೆ ಉಳಿದ ಸ್ಪರ್ಧಿಗಳು ಸ್ಟ್ರಾಂಗ್​ ಆಗಿದ್ದಿದ್ದೇ ಕಾರಣ. ಈ ವಾರ ಬಿಗ್​ ಬಾಸ್​ ಮನೆಯಲ್ಲಿ ಪ್ರಿಯಾಂಕಾ ಉತ್ತಮವಾಗಿಯೇ ಆಡಿದ್ದರು. ಆದರೆ, ಉಳಿದ ಮೂರು ಸ್ಪರ್ಧಿಗಳು ತುಂಬಾನೇ  ಸ್ಟ್ರಾಂಗ್​ ಆಗಿದ್ದ ಕಾರಣ ಪ್ರಿಯಾಂಕಾ ಔಟ್​ ಆಗಿದ್ದಾರೆ.

ವೈಷ್ಣವಿ ಗೌಡ ಬಿಗ್ ಬಾಸ್​ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಟಾಪ್​ 5 ಲಿಸ್ಟ್​ನಲ್ಲಿ ಅವರನ್ನು ನೋಡಬೇಕು ಎನ್ನುವುದು ಅಭಿಮಾನಿಗಳ ಇಚ್ಛೆ. ಹೀಗಾಗಿ, ಅವರಿಗೆ ಹೆಚ್ಚು ವೋಟ್​ ಬಿದ್ದಿದೆ. ಇನ್ನು, ಶುಭಾ ಪೂಂಜಾ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಕಾರಣಕ್ಕೆ ಅವರಿಗೆ ಹೆಚ್ಚಿನ ವೋಟ್​ ಬಿದ್ದಿದೆ. ಪ್ರಶಾಂತ್​ ಸಂಬರಗಿ ಇತ್ತೀಚೆಗೆ ತುಂಬಾನೇ ಬದಲಾಗಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳ ಜತೆ ಬೆರೆಯುತ್ತಿದ್ದಾರೆ. ಹೀಗಾಗಿ, ಅವರು ಈ ವಾರ ಸೇವ್​ ಆಗಿದ್ದಾರೆ. ಹೀಗಾಗಿ ಈ ಮೂವರು ಸ್ಟ್ರಾಂಗ್​ ಸ್ಪರ್ಧಿಗಳಿಂದಾಗಿ, ಪ್ರಿಯಾಂಕಾ ಈಗ ಮನೆಯಿಂದ ಹೊರ ಹೋಗುವಂತಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಹಾರಿತು ಕಪ್ಪು ಬಾವುಟ; ಏಕಾಂಗಿಯಾದ ಚಕ್ರವರ್ತಿ ಚಂದ್ರಚೂಡ್​?

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಾಕಿದ್ದಾರೆ ಕೀಟ; ಸುದೀಪ್​ ಎದುರು ಹೇಳಿಕೊಂಡ ಸಂಬರಗಿ

Published On - 9:43 pm, Sun, 18 July 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ