AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ತಿಮ್ಮೇಶ್​ ಎಲಿಮಿನೇಟ್ ಆಗೋಕೆ ಕಾರಣವಾಗಿದ್ದು ಈ ಮೂರು ಸ್ಪರ್ಧಿಗಳು

Priyanka Timmesh Eliminated: 4 ದಿನಗಳ ಕಾಲ ನಡೆದ ಟಾಸ್ಕ್​ನಲ್ಲಿ ಸೋತ ತಂಡದ ಸದಸ್ಯರು ನಾಮಿನೇಟ್​ ಆಗಿದ್ದರು. ಈ ಬಾರಿ ಸೋತ ತಂಡದಲ್ಲಿದ್ದ ಪ್ರಶಾಂತ್ ಸಂಬರಗಿ​, ಪ್ರಿಯಾಂಕಾ ತಿಮ್ಮೇಶ್​, ವೈಷ್ಣವಿ ಗೌಡ, ಶುಭಾ ಪೂಂಜಾ ನಾಮಿನೇಷನ್​ ಪಟ್ಟಿಯಲ್ಲಿದ್ದರು.

ಪ್ರಿಯಾಂಕಾ ತಿಮ್ಮೇಶ್​ ಎಲಿಮಿನೇಟ್ ಆಗೋಕೆ ಕಾರಣವಾಗಿದ್ದು ಈ ಮೂರು ಸ್ಪರ್ಧಿಗಳು
ಪ್ರಿಯಾಂಕಾ ತಿಮ್ಮೇಶ್​
TV9 Web
| Edited By: |

Updated on:Jul 19, 2021 | 9:34 AM

Share

Priyanka Timmesh: ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಎರಡನೇ ಇನ್ನಿಂಗ್ಸ್​ನ ಮೂರನೇ ಎಲಿಮಿನೇಷನ್​ ಈ ವಾರ ನಡೆದಿದೆ. ನಾಲ್ಕು ಸ್ಪರ್ಧಿಗಳು ಈ ವಾರದ ನಾಮಿನೇಷನ್​ ಲಿಸ್ಟ್​ನಲ್ಲಿದ್ದರು. ಈ ಪೈಕಿ ಪ್ರಿಯಾಂಕಾ ತಿಮ್ಮೇಶ್​ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ಮನೆಯ ಸ್ಪರ್ಧಿಗಳ ಸಂಖ್ಯೆ ಒಂಭತ್ತಕ್ಕೆ ಇಳಿಕೆ ಆಗಿದೆ.

ಈ ವಾರ ಬಿಗ್​ ಬಾಸ್​ ನಾಮಿನೇಷನ್​ಗೆ ಬೇರೆ ರೀತಿಯ ಮಾರ್ಗ ಅನುಸರಿಸಲಾಗಿತ್ತು. ಪ್ರತಿವಾರ ಸ್ಪರ್ಧಿಗಳಿಗೆ ನಾಮಿನೇಷನ್​ ಮಾಡುವ ಆಯ್ಕೆಯನ್ನು ನೀಡಲಾಗುತ್ತದೆ. ಯಾರಿಗೆ ಯಾವ ಸ್ಪರ್ಧಿ ಇಷ್ಟವಿಲ್ಲವೋ ಅವರನ್ನು ನಾಮಿನೇಟ್​ ಮಾಡುತ್ತಾರೆ. ಈ ಬಾರಿ ಬಿಗ್​ ಬಾಸ್​ ಮನೆಯಲ್ಲಿ ಆ ರೀತಿ ಇರಲಿಲ್ಲ. ಮನೆಯಲ್ಲಿ ಎರಡು ಟೀಂ ಮಾಡಿ 10 ಟಾಸ್ಕ್​ಗಳನ್ನು ನೀಡಲಾಗಿತ್ತು. 4  ದಿನಗಳ ಕಾಲ ನಡೆದ ಟಾಸ್ಕ್​ನಲ್ಲಿ ಸೋತ ತಂಡದ ಸದಸ್ಯರು ನಾಮಿನೇಟ್​ ಆಗಿದ್ದರು. ಈ ಬಾರಿ ಸೋತ ತಂಡದಲ್ಲಿದ್ದ ಪ್ರಶಾಂತ್ ಸಂಬರಗಿ​, ಪ್ರಿಯಾಂಕಾ ತಿಮ್ಮೇಶ್​, ವೈಷ್ಣವಿ ಗೌಡ, ಶುಭಾ ಪೂಂಜಾ ನಾಮಿನೇಷನ್​ ಪಟ್ಟಿಯಲ್ಲಿದ್ದರು. ಕಡಿಮೆ ವೋಟ್ ಪಡೆದು ಪ್ರಿಯಾಂಕಾ ಔಟ್ ಆಗಿದ್ದಾರೆ.

ಅಂದಹಾಗೆ, ಈ ವಾರ ಪ್ರಿಯಾಂಕಾ ಮನೆಯಿಂದ ಹೊರಹೋಗೋಕೆ ಉಳಿದ ಸ್ಪರ್ಧಿಗಳು ಸ್ಟ್ರಾಂಗ್​ ಆಗಿದ್ದಿದ್ದೇ ಕಾರಣ. ಈ ವಾರ ಬಿಗ್​ ಬಾಸ್​ ಮನೆಯಲ್ಲಿ ಪ್ರಿಯಾಂಕಾ ಉತ್ತಮವಾಗಿಯೇ ಆಡಿದ್ದರು. ಆದರೆ, ಉಳಿದ ಮೂರು ಸ್ಪರ್ಧಿಗಳು ತುಂಬಾನೇ  ಸ್ಟ್ರಾಂಗ್​ ಆಗಿದ್ದ ಕಾರಣ ಪ್ರಿಯಾಂಕಾ ಔಟ್​ ಆಗಿದ್ದಾರೆ.

ವೈಷ್ಣವಿ ಗೌಡ ಬಿಗ್ ಬಾಸ್​ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಟಾಪ್​ 5 ಲಿಸ್ಟ್​ನಲ್ಲಿ ಅವರನ್ನು ನೋಡಬೇಕು ಎನ್ನುವುದು ಅಭಿಮಾನಿಗಳ ಇಚ್ಛೆ. ಹೀಗಾಗಿ, ಅವರಿಗೆ ಹೆಚ್ಚು ವೋಟ್​ ಬಿದ್ದಿದೆ. ಇನ್ನು, ಶುಭಾ ಪೂಂಜಾ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಕಾರಣಕ್ಕೆ ಅವರಿಗೆ ಹೆಚ್ಚಿನ ವೋಟ್​ ಬಿದ್ದಿದೆ. ಪ್ರಶಾಂತ್​ ಸಂಬರಗಿ ಇತ್ತೀಚೆಗೆ ತುಂಬಾನೇ ಬದಲಾಗಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳ ಜತೆ ಬೆರೆಯುತ್ತಿದ್ದಾರೆ. ಹೀಗಾಗಿ, ಅವರು ಈ ವಾರ ಸೇವ್​ ಆಗಿದ್ದಾರೆ. ಹೀಗಾಗಿ ಈ ಮೂವರು ಸ್ಟ್ರಾಂಗ್​ ಸ್ಪರ್ಧಿಗಳಿಂದಾಗಿ, ಪ್ರಿಯಾಂಕಾ ಈಗ ಮನೆಯಿಂದ ಹೊರ ಹೋಗುವಂತಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಹಾರಿತು ಕಪ್ಪು ಬಾವುಟ; ಏಕಾಂಗಿಯಾದ ಚಕ್ರವರ್ತಿ ಚಂದ್ರಚೂಡ್​?

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಾಕಿದ್ದಾರೆ ಕೀಟ; ಸುದೀಪ್​ ಎದುರು ಹೇಳಿಕೊಂಡ ಸಂಬರಗಿ

Published On - 9:43 pm, Sun, 18 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್