AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Elimination: ತಲೆಕೆಳಗಾದ ಬಿಗ್ ಬಾಸ್ ಲೆಕ್ಕಾಚಾರ? ಅಂದುಕೊಂಡಿದ್ದೇ ಒಬ್ರು, ಹೋಗಿದ್ದೇ ಇನ್ನೊಬ್ರು! ‌ಸುದೀಪ್ ಬಿಗ್ ಟ್ವಿಸ್ಟ್

Bigg Boss Kannada: ಕೇವಲ ನಾಲ್ಕು ದಿನದ ಹಿಂದೆ ನಟಿ ವೈಜಯಂತಿ ಅಡಿಗ ಅವರು ಬಿಗ್​ ಬಾಸ್​ ಮನೆಗೆ ಕಾಲಿಟ್ಟಿದ್ದರು. ವೈಲ್ಡ್​ ಕಾರ್ಡ್​ ಎಂಟ್ರಿ ಮೂಲಕ ಅವರಿಗೆ ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿತ್ತು.

Bigg Boss Elimination: ತಲೆಕೆಳಗಾದ ಬಿಗ್ ಬಾಸ್ ಲೆಕ್ಕಾಚಾರ? ಅಂದುಕೊಂಡಿದ್ದೇ ಒಬ್ರು, ಹೋಗಿದ್ದೇ ಇನ್ನೊಬ್ರು! ‌ಸುದೀಪ್ ಬಿಗ್ ಟ್ವಿಸ್ಟ್
ವೈಜಯಂತಿ ಅಡಿಗ
ಮದನ್​ ಕುಮಾರ್​
|

Updated on: Apr 11, 2021 | 10:57 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ದಿನಕ್ಕೊಂದು ರೋಚಕ ಟ್ವಿಸ್ಟ್​ಗಳು ಸಿಗುತ್ತಿವೆ. ಈ ಮೂಲಕ ಸ್ಪರ್ಧಿಗಳಿಗೆ ಮಾತ್ರವಲ್ಲದೆ ವೀಕ್ಷಕರಿಗೂ ಕೂಡ ಬಿಗ್​ ಬಾಸ್​ ಶಾಕ್​ ನೀಡುತ್ತಿದ್ದಾರೆ. ಈ ವಾರ ಎಲಿಮಿನೇಷನ್​ನಲ್ಲಿ ಯಾರ ಆಟ ಕೊನೆ ಆಗಬಹುದು ಎಂಬುದನ್ನು ತಿಳಿದುಕೊಳ್ಳಲು ವೀಕ್ಷಕರು ಕಾಯುತ್ತಿದ್ದಾರೆ. ಅಷ್ಟರಲ್ಲೇ ಒಂದು ಅಚ್ಚರಿಯ ಸುದ್ದಿ ಕೇಳಿಬಂದಿದೆ. ನಟಿ ವೈಜಯಂತಿ ಅಡಿಗ ಅವರು ಬಿಗ್​ ಬಾಸ್​ನಿಂದ ಹೊರಬಂದಿದ್ದಾರೆ ಎನ್ನಲಾಗುತ್ತಿದೆ.

ಕೇವಲ ನಾಲ್ಕು ದಿನದ ಹಿಂದೆ ವೈಜಯಂತಿ ಅಡಿಗ ಅವರು ಬಿಗ್​ ಬಾಸ್​ ಮನೆಗೆ ಕಾಲಿಟ್ಟಿದ್ದರು. ವೈಲ್ಡ್​ ಕಾರ್ಡ್​ ಎಂಟ್ರಿ ಮೂಲಕ ಅವರಿಗೆ ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿತ್ತು. ಅವರ ಆಗಮನದಿಂದ ಮನೆಯಲ್ಲಿ ಹೆಚ್ಚೇನೂ ಬದಲಾವಣೆ ಆಗಿರಲಿಲ್ಲ. ಎಲ್ಲರೊಂದಿಗೂ ನಗುನಗುತ್ತಲೇ ಮಾತನಾಡುತ್ತಿದ್ದ ಅವರಿಗೆ ಈಗ ಗೇಟ್​ ಪಾಸ್​ ನೀಡಲಾಗಿದೆ.

ವೈಜಯಂತಿ ಅಡಿಗ ಅವರು ಸ್ಪರ್ಧಿಯಾಗಿ ಮನೆಯೊಳಗೆ ಕಾಲಿಟ್ಟಿರಲಿಲ್ಲ. ಅವರು ಕೇವಲ ಅತಿಥಿಯಾಗಿ ಬಂದಿದ್ದರು ಎಂಬ ಮಾಹಿತಿ ಕೂಡ ಕೇಳಿಬರುತ್ತಿದೆ. ಹಾಗಾಗಿ ಅವರು ಕೇವಲ ನಾಲ್ಕೇ ದಿನಕ್ಕೆ ಬಿಗ್​ ಬಾಸ್​ ಮನೆಯಿಂದ ಹೊರಬರುವಂತಾಗಿದೆ. ಈ ಬೆಳವಣಿಗೆಯಿಂದ ಸಹಜವಾಗಿಯೇ ಮನೆಯೊಳಗಿನ ಇತರೆ ಸದಸ್ಯರಿಗೆ ಅಚ್ಚರಿ ಆಗಿದೆ. ಈ ಮನೆಯಲ್ಲಿ ಇರುವುದು ಕಷ್ಟ ಆಗುತ್ತದೆ ಎಂದು ಶನಿವಾರದ (ಏ.10) ಎಪಿಸೋಡ್​ನಲ್ಲಿ ವೈಜಯಂತಿ ಹೇಳಿದ್ದರು.

ವೈಜಯಂತಿ ಮಾತ್ರವಲ್ಲದೆ ನಟಿ ಪ್ರಿಯಾಂಕಾ ತಿಮ್ಮೇಶ್​ ಹಾಗೂ ಪತ್ರಕರ್ತ ಚಕ್ರವತ್ರಿ ಚಂದ್ರಚೂಡ್​ ಅವರು ಅವರು ಸಹ ವೈಲ್ಡ್​ ಕಾರ್ಡ್​ ಮೂಲಕ ಮನೆಯೊಳಗೆ ಬಂದಿದ್ದರು. ಸದ್ಯ ಅವರು ಆಟ ಮುಂದುವರಿಸಿದ್ದಾರೆ. ಶಮಂತ್​ ಬ್ರೋ ಗೌಡ, ಅರವಿಂದ್ ಕೆ.ಪಿ, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ರಾಜೀವ್​ ಈ ವಾರ ನಾಮಿನೇಟ್​ ಆಗಿದ್ದರು. ಆ ಪೈಕಿ ಶನಿವಾರವೇ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ಸೇಫ್​ ಆದರು. ಇನ್ನುಳಿದವರ ಕಥೆ ಏನಾಗಿದೆ ಎಂಬ ಕೌತುಕ ಮನೆ ಮಾಡಿದೆ.

ಇದನ್ನೂ ಓದಿ: ಇಲ್ಲಿ ಇರೋಕೆ ತುಂಬಾನೇ ಕಷ್ಟ ಆಗ್ತಿದೆ; ಎರಡೇ ದಿನಕ್ಕೆ ಸುಸ್ತಾದ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು

(Bigg Boss Kannada 8 Elimination: Vaijayanti Adiga reportedly gets eliminated from BBK8)

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು