AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Elimination: ತಲೆಕೆಳಗಾದ ಬಿಗ್ ಬಾಸ್ ಲೆಕ್ಕಾಚಾರ? ಅಂದುಕೊಂಡಿದ್ದೇ ಒಬ್ರು, ಹೋಗಿದ್ದೇ ಇನ್ನೊಬ್ರು! ‌ಸುದೀಪ್ ಬಿಗ್ ಟ್ವಿಸ್ಟ್

Bigg Boss Kannada: ಕೇವಲ ನಾಲ್ಕು ದಿನದ ಹಿಂದೆ ನಟಿ ವೈಜಯಂತಿ ಅಡಿಗ ಅವರು ಬಿಗ್​ ಬಾಸ್​ ಮನೆಗೆ ಕಾಲಿಟ್ಟಿದ್ದರು. ವೈಲ್ಡ್​ ಕಾರ್ಡ್​ ಎಂಟ್ರಿ ಮೂಲಕ ಅವರಿಗೆ ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿತ್ತು.

Bigg Boss Elimination: ತಲೆಕೆಳಗಾದ ಬಿಗ್ ಬಾಸ್ ಲೆಕ್ಕಾಚಾರ? ಅಂದುಕೊಂಡಿದ್ದೇ ಒಬ್ರು, ಹೋಗಿದ್ದೇ ಇನ್ನೊಬ್ರು! ‌ಸುದೀಪ್ ಬಿಗ್ ಟ್ವಿಸ್ಟ್
ವೈಜಯಂತಿ ಅಡಿಗ
ಮದನ್​ ಕುಮಾರ್​
|

Updated on: Apr 11, 2021 | 10:57 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ದಿನಕ್ಕೊಂದು ರೋಚಕ ಟ್ವಿಸ್ಟ್​ಗಳು ಸಿಗುತ್ತಿವೆ. ಈ ಮೂಲಕ ಸ್ಪರ್ಧಿಗಳಿಗೆ ಮಾತ್ರವಲ್ಲದೆ ವೀಕ್ಷಕರಿಗೂ ಕೂಡ ಬಿಗ್​ ಬಾಸ್​ ಶಾಕ್​ ನೀಡುತ್ತಿದ್ದಾರೆ. ಈ ವಾರ ಎಲಿಮಿನೇಷನ್​ನಲ್ಲಿ ಯಾರ ಆಟ ಕೊನೆ ಆಗಬಹುದು ಎಂಬುದನ್ನು ತಿಳಿದುಕೊಳ್ಳಲು ವೀಕ್ಷಕರು ಕಾಯುತ್ತಿದ್ದಾರೆ. ಅಷ್ಟರಲ್ಲೇ ಒಂದು ಅಚ್ಚರಿಯ ಸುದ್ದಿ ಕೇಳಿಬಂದಿದೆ. ನಟಿ ವೈಜಯಂತಿ ಅಡಿಗ ಅವರು ಬಿಗ್​ ಬಾಸ್​ನಿಂದ ಹೊರಬಂದಿದ್ದಾರೆ ಎನ್ನಲಾಗುತ್ತಿದೆ.

ಕೇವಲ ನಾಲ್ಕು ದಿನದ ಹಿಂದೆ ವೈಜಯಂತಿ ಅಡಿಗ ಅವರು ಬಿಗ್​ ಬಾಸ್​ ಮನೆಗೆ ಕಾಲಿಟ್ಟಿದ್ದರು. ವೈಲ್ಡ್​ ಕಾರ್ಡ್​ ಎಂಟ್ರಿ ಮೂಲಕ ಅವರಿಗೆ ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿತ್ತು. ಅವರ ಆಗಮನದಿಂದ ಮನೆಯಲ್ಲಿ ಹೆಚ್ಚೇನೂ ಬದಲಾವಣೆ ಆಗಿರಲಿಲ್ಲ. ಎಲ್ಲರೊಂದಿಗೂ ನಗುನಗುತ್ತಲೇ ಮಾತನಾಡುತ್ತಿದ್ದ ಅವರಿಗೆ ಈಗ ಗೇಟ್​ ಪಾಸ್​ ನೀಡಲಾಗಿದೆ.

ವೈಜಯಂತಿ ಅಡಿಗ ಅವರು ಸ್ಪರ್ಧಿಯಾಗಿ ಮನೆಯೊಳಗೆ ಕಾಲಿಟ್ಟಿರಲಿಲ್ಲ. ಅವರು ಕೇವಲ ಅತಿಥಿಯಾಗಿ ಬಂದಿದ್ದರು ಎಂಬ ಮಾಹಿತಿ ಕೂಡ ಕೇಳಿಬರುತ್ತಿದೆ. ಹಾಗಾಗಿ ಅವರು ಕೇವಲ ನಾಲ್ಕೇ ದಿನಕ್ಕೆ ಬಿಗ್​ ಬಾಸ್​ ಮನೆಯಿಂದ ಹೊರಬರುವಂತಾಗಿದೆ. ಈ ಬೆಳವಣಿಗೆಯಿಂದ ಸಹಜವಾಗಿಯೇ ಮನೆಯೊಳಗಿನ ಇತರೆ ಸದಸ್ಯರಿಗೆ ಅಚ್ಚರಿ ಆಗಿದೆ. ಈ ಮನೆಯಲ್ಲಿ ಇರುವುದು ಕಷ್ಟ ಆಗುತ್ತದೆ ಎಂದು ಶನಿವಾರದ (ಏ.10) ಎಪಿಸೋಡ್​ನಲ್ಲಿ ವೈಜಯಂತಿ ಹೇಳಿದ್ದರು.

ವೈಜಯಂತಿ ಮಾತ್ರವಲ್ಲದೆ ನಟಿ ಪ್ರಿಯಾಂಕಾ ತಿಮ್ಮೇಶ್​ ಹಾಗೂ ಪತ್ರಕರ್ತ ಚಕ್ರವತ್ರಿ ಚಂದ್ರಚೂಡ್​ ಅವರು ಅವರು ಸಹ ವೈಲ್ಡ್​ ಕಾರ್ಡ್​ ಮೂಲಕ ಮನೆಯೊಳಗೆ ಬಂದಿದ್ದರು. ಸದ್ಯ ಅವರು ಆಟ ಮುಂದುವರಿಸಿದ್ದಾರೆ. ಶಮಂತ್​ ಬ್ರೋ ಗೌಡ, ಅರವಿಂದ್ ಕೆ.ಪಿ, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ರಾಜೀವ್​ ಈ ವಾರ ನಾಮಿನೇಟ್​ ಆಗಿದ್ದರು. ಆ ಪೈಕಿ ಶನಿವಾರವೇ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ಸೇಫ್​ ಆದರು. ಇನ್ನುಳಿದವರ ಕಥೆ ಏನಾಗಿದೆ ಎಂಬ ಕೌತುಕ ಮನೆ ಮಾಡಿದೆ.

ಇದನ್ನೂ ಓದಿ: ಇಲ್ಲಿ ಇರೋಕೆ ತುಂಬಾನೇ ಕಷ್ಟ ಆಗ್ತಿದೆ; ಎರಡೇ ದಿನಕ್ಕೆ ಸುಸ್ತಾದ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು

(Bigg Boss Kannada 8 Elimination: Vaijayanti Adiga reportedly gets eliminated from BBK8)

Follow Us
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ