BBK8 Finale: ಬಿಗ್ ಬಾಸ್ ಫಿನಾಲೆ ವೇದಿಕೆಯಲ್ಲಿ ನಾನು, ಅರವಿಂದ್ ಇದ್ದಿದ್ರೆ ಚೆನ್ನಾಗಿರುತ್ತಿತ್ತು; ಭಾವುಕರಾದ ದಿವ್ಯಾ ಉರುಡುಗ

BBK 8 Finale Winner: ಬಿಗ್ ಬಾಸ್ ವೇದಿಕೆಯಲ್ಲಿ ನಿಮ್ಮ ಎಡಕ್ಕೆ ನಾನು, ಬಲಕ್ಕೆ ಅರವಿಂದ್ ನಿಂತಿದ್ದರೆ ಅದಕ್ಕಿಂತ ದೊಡ್ಡ ಖುಷಿ ಮತ್ಯಾವುದೂ ಇರುತ್ತಿರಲಿಲ್ಲ. ಆ ಕಲ್ಪನೆಯೇ ಬಹಳ ಚೆನ್ನಾಗಿದೆ ಎಂದು ಕಿಚ್ಚ ಸುದೀಪ್ ಅವರ ಮುಂದೆ ದಿವ್ಯಾ ಉರುಡುಗ ಭಾವುಕರಾಗಿದ್ದಾರೆ.

BBK8 Finale: ಬಿಗ್ ಬಾಸ್ ಫಿನಾಲೆ ವೇದಿಕೆಯಲ್ಲಿ ನಾನು, ಅರವಿಂದ್ ಇದ್ದಿದ್ರೆ ಚೆನ್ನಾಗಿರುತ್ತಿತ್ತು; ಭಾವುಕರಾದ ದಿವ್ಯಾ ಉರುಡುಗ
ದಿವ್ಯ ಉರುಡುಗ
Follow us
| Updated By: ಸುಷ್ಮಾ ಚಕ್ರೆ

Updated on:Aug 08, 2021 | 11:11 PM

ಬಿಗ್ ಬಾಸ್​ ಕನ್ನಡ ಸೀಸನ್ 8ರ ವಿನ್ನರ್ ಯಾರೆಂದು ಗೊತ್ತಾಗಲು ಕೆಲವೇ ಕ್ಷಣಗಳು ಬಾಕಿ ಇವೆ. ಎರಡನೇ ರನ್ನರ್ ಆಗಿ 11,61,205 ಮತಗಳನ್ನು ಪಡೆಯುವ ಮೂಲಕ ದಿವ್ಯಾ ಉರುಡುಗ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಈ ಬಾರಿ ಬಿಗ್ ಬಾಸ್​ ಕನ್ನಡ ಸೀಸನ್​ನ ಇತಿಹಾಸದಲ್ಲೇ ಅತಿ ಹೆಚ್ಚು ವೋಟಿಂಗ್ ನಡೆದಿದ್ದು, ವಿನ್ನರ್​ಗೆ ಬರೋಬ್ಬರಿ 45 ಲಕ್ಷ ಮತಗಳು ಲಭಿಸಿವೆ. ಅವರಿಗಿಂತ 2 ಲಕ್ಷ ಕಡಿಮೆ ಮತಗಳನ್ನು ಪಡೆದರು ರನ್ನರ್ ಅಪ್ ಆಗಿದ್ದಾರೆ. ಆ ಇಬ್ಬರು ಯಾರೆಂಬ ಕುತೂಹಲಕ್ಕೆ ಇನ್ನೇನು ತೆರೆ ಬೀಳಲಿದೆ.

ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿರುವ ದಿವ್ಯಾ ಉರುಡುಗ ಭಾವುಕರಾಗಿ ಅಳುತ್ತಲೇ ಮನೆಯಿಂದ ಹೊರಗೆ ಬಂದಿದ್ದಾರೆ. ನನಗಿಂತ ಅರವಿಂದ್ ಬಹಳ ಅತ್ಯುತ್ತಮ ಸ್ಪರ್ಧಿಯಾಗಿದ್ದರಿಂದ ಅವರು ಗೆದ್ದರೆ ನನಗೆ ಖುಷಿಯಿದೆ. ಬಿಗ್ ಬಾಸ್ ವೇದಿಕೆಯಲ್ಲಿ ನಿಮ್ಮ ಎಡಕ್ಕೆ ನಾನು, ಬಲಕ್ಕೆ ಅರವಿಂದ್ ನಿಂತಿದ್ದರೆ ಅದಕ್ಕಿಂತ ದೊಡ್ಡ ಖುಷಿ ಮತ್ಯಾವುದೂ ಇರುತ್ತಿರಲಿಲ್ಲ. ಆ ಕಲ್ಪನೆಯೇ ಬಹಳ ಚೆನ್ನಾಗಿದೆ ಎಂದು ಕಿಚ್ಚ ಸುದೀಪ್ ಅವರ ಮುಂದೆ ಭಾವುಕರಾಗಿದ್ದಾರೆ.

ನನಗೆ ಮೊದಲು ಬಿಗ್​ ಬಾಸ್​ಗೆ ಬಂದಾಗ ಕಾಲ್ ಬಂದಾಗ ಟಾಪ್ 3ಯಲ್ಲಿ ಇರುತ್ತೇನೆಂದುಕೊಂಡಿರಲಿಲ್ಲ. ಗೆಲ್ಲಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ, ನಾನು ಇಲ್ಲಿಯವರೆಗಾದರೂ ಉಳಿದಿರುವ ಬಗ್ಗೆ ಬಹಳ ತೃಪ್ತಿಯಿದೆ. ನಾನು ಕೊನೆಯವರೆಗೂ ನನ್ನ ಪ್ರಯತ್ನ ಬಿಡದೇ ಆಡಿದ್ದೇನೆ. ಅಲ್ಲಿ ಎಲ್ಲರೂ ಬಹಳ ಚೆನ್ನಾಗಿ ಆಡುತ್ತಿದ್ದರು ಎಂದು ದಿವ್ಯಾ ಉರುಡುಗ ಹೇಳಿದ್ದಾರೆ.

ಬಿಗ್ ಬಾಸ್​ ಕನ್ನಡ 8ನೇ ಸೀಸನ್​ನ 2ನೇ ರನ್ನರ್ ಅಪ್ ಆಗಿರುವ ದಿವ್ಯಾ ಉರುಡುಗ ಅವರಿಗೆ 6 ಲಕ್ಷ ರೂ. ಬಹುಮಾನ ಸಿಕ್ಕಿದೆ. ಕೆ.ಪಿ. ಅರವಿಂದ್ ಹಾಗೂ ಮಂಜು ಪಾವಗಡ ಇಬ್ಬರಲ್ಲಿ ವಿನ್ನರ್ ಯಾರಾಗಲಿದ್ದಾರೆ ಎಂಬುದು ಇನ್ನೇನು ಗೊತ್ತಾಗಲಿದೆ.

ಇದನ್ನೂ ಓದಿ: Bigg Boss Kannada Finale: ಬಿಗ್ ಬಾಸ್ ಫಿನಾಲೆ ಎಪಿಸೋಡ್​ನಲ್ಲಾದ ತಪ್ಪಿನ ಕಾರಣ ಬಿಚ್ಚಿಟ್ಟ ಕಿಚ್ಚ ಸುದೀಪ್

ಬಿಗ್ ಬಾಸ್ ಫಿನಾಲೆಯಲ್ಲಿ ಅರವಿಂದ್​ ಕೆಪಿ ಗೆಲುವಿಗೂ, ಸೋಲಿಗೂ ಕಾರಣವಾಗಬಹುದು ಈ ಅಂಶಗಳು

(Bigg Boss Kannada 8 Finale Divya Uruduga emotional Speech with Kiccha Sudeep after Eliminated from BBK 8)

Published On - 11:09 pm, Sun, 8 August 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ