AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8: ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಬಗ್ಗೆ ಬಿಗ್​ ಅಪ್​ಡೇಟ್​; ಇನ್ನೂ ಮುಗಿದಿಲ್ಲ ಶೋ?

ನಿತ್ಯ 20 ಸಾವಿರಕ್ಕೂ ಅಧಿಕ ಪ್ರಕರಣಗಳು ಬರುತ್ತಿದ್ದ ಬೆಂಗಳೂರಿನಲ್ಲಿ ಈಗ ಕೊವಿಡ್ ನಿಯಂತ್ರಣಕ್ಕೆ ಬಂದಿದೆ. ಈ ಕಾರಣಕ್ಕೆ ಬೆಂಗಳೂರು ಕೂಡ ಸೋಮವಾರದಿಂದ (ಜೂನ್​ 14) ಅನ್​ಲಾಕ್​ ಆಗಲಿದೆ.

Bigg Boss Kannada 8: ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಬಗ್ಗೆ ಬಿಗ್​ ಅಪ್​ಡೇಟ್​; ಇನ್ನೂ ಮುಗಿದಿಲ್ಲ ಶೋ?
ಸುದೀಪ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Jun 11, 2021 | 4:25 PM

Share

ಕೊವಿಡ್​ ಎರಡನೇ ಅಲೆ ನಿಯಂತ್ರಣಕ್ಕಾಗಿ ಹೇರಿದ ಲಾಕ್​ಡೌನ್​ನಿಂದ ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಅರ್ಧಕ್ಕೆ ನಿಂತಿತ್ತು. ಈ ವಿಚಾರದ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಅಧಿಕೃತ ಘೋಷಣೆ ಮಾಡುತ್ತಿದ್ದಂತೆಯೇ ಸ್ಪರ್ಧಿಗಳು ಹಾಗೂ ವೀಕ್ಷಕರಿಗೆ ಬಹಳಷ್ಟು ಬೇಸರವಾಗಿತ್ತು. ಈಗ ಕನ್ನಡ ‘ಬಿಗ್​ ಬಾಸ್ ಸೀಸನ್​ 8’ ಬಗ್ಗೆ ಹೊಸ ಅಪ್​ಡೇಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೊರೊನಾ ವೈರಸ್ ಎರಡನೇ ಅಲೆ ನಿಧಾನವಾಗಿ ಕಡಿಮೆ ಆಗುತ್ತಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಮಾತ್ರ ಲಾಕ್​ಡೌನ್​ ಮುಂದುವರಿಯುತ್ತಿದ್ದು, ಉಳಿದ ಕಡೆಗಳಲ್ಲಿ ಜೂನ್​ 14ರಿಂದ ಲಾಕ್​ಡೌನ್​ ತೆರವಾಗಲಿದೆ. ನಿತ್ಯ 20 ಸಾವಿರಕ್ಕೂ ಅಧಿಕ ಪ್ರಕರಣಗಳು ಬರುತ್ತಿದ್ದ ಬೆಂಗಳೂರಿನಲ್ಲಿ ಕೊವಿಡ್ ನಿಯಂತ್ರಣಕ್ಕೆ ಬಂದಿದೆ. ಈ ಕಾರಣಕ್ಕೆ ಬೆಂಗಳೂರು ಕೂಡ ಸೋಮವಾರದಿಂದ (ಜೂನ್​ 14) ಅನ್​ಲಾಕ್​ ಆಗಲಿದೆ.

ಈಗ ‘ಬಿಗ್​ ಬಾಸ್ ಸೀಸನ್​ 8’ ಬಗ್ಗೆ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಶೀಘ್ರವೇ ಬಿಗ್​ ಬಾಸ್​ ಪುನರಾರಂಭಗೊಳ್ಳಲಿದೆಯಂತೆ. ಹೌದು, ಕೊವಿಡ್​ ಇನ್ನೊಂದು ತಿಂಗಳಲ್ಲಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವ ನಿರೀಕ್ಷೆ ಇದೆ. ನಂತರ ಶೂಟಿಂಗ್​ಗೂ ಅವಕಾಶ ಸಿಗಲಿದೆ. ಹೀಗಾಗಿ, ಜೂನ್​ ಅಂತ್ಯಕ್ಕೆ ಬಿಗ್​ ಬಾಸ್​ ಮತ್ತೆ ಆರಂಭಗೊಳ್ಳಲಿದೆ ಎನ್ನುವ ಮಾತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಈಗಾಗಲೇ ಕನ್ನಡ ಬಿಗ್​ ಬಾಸ್​ 70 ದಿನಗಳನ್ನು ಪೂರ್ಣಗೊಳಿಸಿದೆ. ಇನ್ನೂ ಒಂದು ತಿಂಗಳು ಬಾಕಿ ಇರುವಾಗಲೇ ಶೋ ನಿಂತಿದೆ. ಮೂಲಗಳ ಪ್ರಕಾರ, ಜೂನ್​ ಕೊನೆಯಲ್ಲಿ ಬಿಗ್​ ಬಾಸ್ ಆರಂಭವಾಗಲಿದ್ದು, ಹೊಸ ರೀತಿಯಲ್ಲಿ ಶೋ ಮುಂದುವರಿಯಲಿದೆಯಂತೆ. ಈ ವಿಚಾರ ಸದ್ಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಇನ್ನು, ಬಿಗ್​ ಬಾಸ್ ಮತ್ತೆ ಆರಂಭವಾದರೆ, 30 ದಿನಕ್ಕೆ ಪೂರ್ಣಗೊಳಿಸದೆ ಇನ್ನೂ ವಿಸ್ತರಣೆ ಮಾಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.

ಬಿಗ್​ ಬಾಸ್​ ಕೊನೆಯ ದಿನ ಎಲ್ಲಾ ಸ್ಪರ್ಧಿಗಳಿಗೆ ಸಂದೇಶವೊಂದು ಬಂದಿತ್ತು. ‘ಈಗ ಅರ್ಧಕ್ಕೆ ನಿಂತ ಪ್ರಯಾಣ ಯಾವಾಗ ಬೇಕಾದರೂ ಮುಂದುವರಿಬಹುದು’ ಎನ್ನುವ ಮಾತನ್ನು ಬಿಗ್​ ಬಾಸ್​ ಹೇಳಿದ್ದರು. ಆಗಲೇ ಬಿಗ್​ ಬಾಸ್ ಮತ್ತೆ ಆರಂಭವಾಗಲಿದೆ ಎನ್ನುವ ಗುಸುಗುಸು ಆರಂಭವಾಗಿತ್ತು. ಈಗ ಅದು ನಿಜವಾಗುವ ಕಾಲ ಸಮೀಪವಾಗಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಹೊಸ ಸೀಸನ್​ನಲ್ಲಿ ರವಿಚಂದ್ರನ್​ ಸಿನಿಮಾ ನಾಯಕಿ? ಕೇಳಿಬರ್ತಿದೆ ಸ್ಟಾರ್ ನಟಿ ಹೆಸರು

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ