AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8: ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಬಗ್ಗೆ ಬಿಗ್​ ಅಪ್​ಡೇಟ್​; ಇನ್ನೂ ಮುಗಿದಿಲ್ಲ ಶೋ?

ನಿತ್ಯ 20 ಸಾವಿರಕ್ಕೂ ಅಧಿಕ ಪ್ರಕರಣಗಳು ಬರುತ್ತಿದ್ದ ಬೆಂಗಳೂರಿನಲ್ಲಿ ಈಗ ಕೊವಿಡ್ ನಿಯಂತ್ರಣಕ್ಕೆ ಬಂದಿದೆ. ಈ ಕಾರಣಕ್ಕೆ ಬೆಂಗಳೂರು ಕೂಡ ಸೋಮವಾರದಿಂದ (ಜೂನ್​ 14) ಅನ್​ಲಾಕ್​ ಆಗಲಿದೆ.

Bigg Boss Kannada 8: ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಬಗ್ಗೆ ಬಿಗ್​ ಅಪ್​ಡೇಟ್​; ಇನ್ನೂ ಮುಗಿದಿಲ್ಲ ಶೋ?
ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 11, 2021 | 4:25 PM

Share

ಕೊವಿಡ್​ ಎರಡನೇ ಅಲೆ ನಿಯಂತ್ರಣಕ್ಕಾಗಿ ಹೇರಿದ ಲಾಕ್​ಡೌನ್​ನಿಂದ ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಅರ್ಧಕ್ಕೆ ನಿಂತಿತ್ತು. ಈ ವಿಚಾರದ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಅಧಿಕೃತ ಘೋಷಣೆ ಮಾಡುತ್ತಿದ್ದಂತೆಯೇ ಸ್ಪರ್ಧಿಗಳು ಹಾಗೂ ವೀಕ್ಷಕರಿಗೆ ಬಹಳಷ್ಟು ಬೇಸರವಾಗಿತ್ತು. ಈಗ ಕನ್ನಡ ‘ಬಿಗ್​ ಬಾಸ್ ಸೀಸನ್​ 8’ ಬಗ್ಗೆ ಹೊಸ ಅಪ್​ಡೇಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೊರೊನಾ ವೈರಸ್ ಎರಡನೇ ಅಲೆ ನಿಧಾನವಾಗಿ ಕಡಿಮೆ ಆಗುತ್ತಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಮಾತ್ರ ಲಾಕ್​ಡೌನ್​ ಮುಂದುವರಿಯುತ್ತಿದ್ದು, ಉಳಿದ ಕಡೆಗಳಲ್ಲಿ ಜೂನ್​ 14ರಿಂದ ಲಾಕ್​ಡೌನ್​ ತೆರವಾಗಲಿದೆ. ನಿತ್ಯ 20 ಸಾವಿರಕ್ಕೂ ಅಧಿಕ ಪ್ರಕರಣಗಳು ಬರುತ್ತಿದ್ದ ಬೆಂಗಳೂರಿನಲ್ಲಿ ಕೊವಿಡ್ ನಿಯಂತ್ರಣಕ್ಕೆ ಬಂದಿದೆ. ಈ ಕಾರಣಕ್ಕೆ ಬೆಂಗಳೂರು ಕೂಡ ಸೋಮವಾರದಿಂದ (ಜೂನ್​ 14) ಅನ್​ಲಾಕ್​ ಆಗಲಿದೆ.

ಈಗ ‘ಬಿಗ್​ ಬಾಸ್ ಸೀಸನ್​ 8’ ಬಗ್ಗೆ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಶೀಘ್ರವೇ ಬಿಗ್​ ಬಾಸ್​ ಪುನರಾರಂಭಗೊಳ್ಳಲಿದೆಯಂತೆ. ಹೌದು, ಕೊವಿಡ್​ ಇನ್ನೊಂದು ತಿಂಗಳಲ್ಲಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವ ನಿರೀಕ್ಷೆ ಇದೆ. ನಂತರ ಶೂಟಿಂಗ್​ಗೂ ಅವಕಾಶ ಸಿಗಲಿದೆ. ಹೀಗಾಗಿ, ಜೂನ್​ ಅಂತ್ಯಕ್ಕೆ ಬಿಗ್​ ಬಾಸ್​ ಮತ್ತೆ ಆರಂಭಗೊಳ್ಳಲಿದೆ ಎನ್ನುವ ಮಾತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಈಗಾಗಲೇ ಕನ್ನಡ ಬಿಗ್​ ಬಾಸ್​ 70 ದಿನಗಳನ್ನು ಪೂರ್ಣಗೊಳಿಸಿದೆ. ಇನ್ನೂ ಒಂದು ತಿಂಗಳು ಬಾಕಿ ಇರುವಾಗಲೇ ಶೋ ನಿಂತಿದೆ. ಮೂಲಗಳ ಪ್ರಕಾರ, ಜೂನ್​ ಕೊನೆಯಲ್ಲಿ ಬಿಗ್​ ಬಾಸ್ ಆರಂಭವಾಗಲಿದ್ದು, ಹೊಸ ರೀತಿಯಲ್ಲಿ ಶೋ ಮುಂದುವರಿಯಲಿದೆಯಂತೆ. ಈ ವಿಚಾರ ಸದ್ಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಇನ್ನು, ಬಿಗ್​ ಬಾಸ್ ಮತ್ತೆ ಆರಂಭವಾದರೆ, 30 ದಿನಕ್ಕೆ ಪೂರ್ಣಗೊಳಿಸದೆ ಇನ್ನೂ ವಿಸ್ತರಣೆ ಮಾಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.

ಬಿಗ್​ ಬಾಸ್​ ಕೊನೆಯ ದಿನ ಎಲ್ಲಾ ಸ್ಪರ್ಧಿಗಳಿಗೆ ಸಂದೇಶವೊಂದು ಬಂದಿತ್ತು. ‘ಈಗ ಅರ್ಧಕ್ಕೆ ನಿಂತ ಪ್ರಯಾಣ ಯಾವಾಗ ಬೇಕಾದರೂ ಮುಂದುವರಿಬಹುದು’ ಎನ್ನುವ ಮಾತನ್ನು ಬಿಗ್​ ಬಾಸ್​ ಹೇಳಿದ್ದರು. ಆಗಲೇ ಬಿಗ್​ ಬಾಸ್ ಮತ್ತೆ ಆರಂಭವಾಗಲಿದೆ ಎನ್ನುವ ಗುಸುಗುಸು ಆರಂಭವಾಗಿತ್ತು. ಈಗ ಅದು ನಿಜವಾಗುವ ಕಾಲ ಸಮೀಪವಾಗಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಹೊಸ ಸೀಸನ್​ನಲ್ಲಿ ರವಿಚಂದ್ರನ್​ ಸಿನಿಮಾ ನಾಯಕಿ? ಕೇಳಿಬರ್ತಿದೆ ಸ್ಟಾರ್ ನಟಿ ಹೆಸರು

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ