AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ನಿರೂಪಣೆ ತಪ್ಪಿಸಿಕೊಳ್ಳುತ್ತಿರುವ ಕಿಚ್ಚ ಸುದೀಪ್​?

Bigg Boss Kannada: ಬಿಗ್​ ಬಾಸ್​ ಕನ್ನಡದಲ್ಲಿ ಏಳನೇ ವಾರದ ವೀಕೆಂಡ್​ ಎಪಿಸೋಡ್​ಗಳನ್ನು ಸಮರ್ಥವಾಗಿ ನಡೆಸಿಕೊಡಬಲ್ಲ ನಿರೂಪಕರಿಗಾಗಿ ವಾಹಿನಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.

Kichcha Sudeep: ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ನಿರೂಪಣೆ ತಪ್ಪಿಸಿಕೊಳ್ಳುತ್ತಿರುವ ಕಿಚ್ಚ ಸುದೀಪ್​?
ಕಿಚ್ಚ ಸುದೀಪ್​
ಮದನ್​ ಕುಮಾರ್​
| Edited By: |

Updated on:Apr 16, 2021 | 2:51 PM

Share

8 ಸೀಸನ್​ಗಳಿಂದ ಯಶಸ್ವಿಯಾಗಿ ಬಿಗ್​ ಬಾಸ್​ ನಿರೂಪಣೆ ಮಾಡಿಕೊಂಡು ಬಂದಿರುವ ಕೀರ್ತಿ ಕಿಚ್ಚ ಸುದೀಪ್​ ಅವರಿಗೆ ಸಲ್ಲುತ್ತದೆ. ಒಮ್ಮೆಯೂ ಅವರು ಈ ಶೋ ತಪ್ಪಿಸಿಕೊಂಡಿಲ್ಲ. ಆದರೆ ಇದೇ ಮೊದಲ ಬಾರಿಗೆ ವೀಕೆಂಡ್​ನಲ್ಲಿ ಅವರ ಅನುಪಸ್ಥಿತಿ ಕಾಡುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಸುದೀಪ್​ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ವಿಶ್ರಾಂತಿ ಪಡೆಯುವ ಅನಿವಾರ್ಯತೆ ಇದೆ. ಹಾಗಾಗಿ ಅವರು ಈ ವಾರ ಬಿಗ್​ ಬಾಸ್​ ನಡೆಸಿಕೊಡುವುದು ಅನುಮಾನ ಎನ್ನಲಾಗಿದೆ.

ಸಿನಿಮಾ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಸುದೀಪ್​ ಪ್ರತಿ ವೀಕೆಂಡ್​ನಲ್ಲಿ ಬಿಗ್ ಬಾಸ್​ಗಾಗಿ ಸಮಯ ಮಾಡಿಕೊಳ್ಳುತ್ತಿದ್ದರು. ಶೂಟಿಂಗ್​ ಸಲುವಾಗಿ ಎಷ್ಟೇ ದೂರ ಹೋಗಿದ್ದರೂ ಶನಿವಾರ ಮತ್ತು ಭಾನುವಾರ ಬೆಂಗಳೂರಿಗೆ ವಾಪಸ್​ ಬಂದುಬಿಡುತ್ತಿದ್ದರು. ಅಷ್ಟರಮಟ್ಟಿಗೆ ಅವರು ಬಿಗ್​ ಬಾಸ್​ ನಿರೂಪಣೆಯನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಬಂದಿದ್ದಾರೆ. ಆದರೆ ಈ ಬಾರಿ ಅನಾರೋಗ್ಯದ ಕಾರಣದಿಂದ ಅವರು ನಿರೂಪಣೆ ಮಾಡಲಾಗುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಒಂದು ವೇಳೆ ಸುದೀಪ್​ ಈ ವಾರ ಶೋ ನಡೆಸಿಕೊಡಲು ಸಾಧ್ಯವಾಗದೇ ಇದ್ದರೆ ಅವರ ಸ್ಥಾನವನ್ನು ಯಾರು ತುಂಬಲಿದ್ದಾರೆ? ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಏಳನೇ ವಾರದ ವೀಕೆಂಡ್​ ಎಪಿಸೋಡ್​ಗಳನ್ನು ಸಮರ್ಥವಾಗಿ ನಡೆಸಿಕೊಡಬಲ್ಲ ನಿರೂಪಕರಿಗಾಗಿ ವಾಹಿನಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.

ಬೇರೆ ಭಾಷೆಯ ಬಿಗ್​ ಬಾಸ್​ ಕಾರ್ಯಕ್ರಮಗಳಲ್ಲಿ ಇಂಥ ಪರಿಸ್ಥಿತಿ ಈ ಹಿಂದೆ ಎದುರಾಗಿತ್ತು. ಅಕ್ಕಿನೇನಿ ನಾಗಾರ್ಜುನ ಅವರ ಅನುಪಸ್ಥಿತಿಯಲ್ಲಿ ಅವರ ಸೊಸೆ ಸಮಂತಾ ಅವರು ತೆಲುಗು ಬಿಗ್​ ಬಾಸ್​ ನಿರೂಪಣೆ ಮಾಡಿದ್ದರು. ಹಿರಿಯ ನಟಿ ರಮ್ಯಾ ಕೃಷ್ಣ ಅವರ ಹೆಗಲಿಗೂ ಒಮ್ಮೆ ಈ ಜವಾಬ್ದಾರಿ ಹೋಗಿತ್ತು. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಬದಲಿಗೆ ಬಿಗ್​ ಬಾಸ್​ 13ನೇ ಸೀಸನ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ನಡೆಸಿಕೊಟ್ಟಿದ್ದರು. ಕನ್ನಡದಲ್ಲಿ ಯಾರಿಗೆ ಈ ಚಾನ್ಸ್​ ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ 7ನೇ ವಾರ ಬಿಗ್​ ಫೈಟ್​! ಘಟಾನುಘಟಿಗಳೆಲ್ಲ ನಾಮಿನೇಟ್​

ವೈಷ್ಣವಿಗೆ ತುರ್ತಾಗಿ ಗಂಡ ಬೇಕಂತೆ! ಬಿಗ್​ ಬಾಸ್​ ಮನೆಯಲ್ಲಿ ಸನ್ನಿಧಿಯ ಹೊಸ ಬೇಡಿಕೆ

Published On - 8:12 am, Fri, 16 April 21

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ