AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ನಿರೂಪಣೆ ತಪ್ಪಿಸಿಕೊಳ್ಳುತ್ತಿರುವ ಕಿಚ್ಚ ಸುದೀಪ್​?

Bigg Boss Kannada: ಬಿಗ್​ ಬಾಸ್​ ಕನ್ನಡದಲ್ಲಿ ಏಳನೇ ವಾರದ ವೀಕೆಂಡ್​ ಎಪಿಸೋಡ್​ಗಳನ್ನು ಸಮರ್ಥವಾಗಿ ನಡೆಸಿಕೊಡಬಲ್ಲ ನಿರೂಪಕರಿಗಾಗಿ ವಾಹಿನಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.

Kichcha Sudeep: ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ನಿರೂಪಣೆ ತಪ್ಪಿಸಿಕೊಳ್ಳುತ್ತಿರುವ ಕಿಚ್ಚ ಸುದೀಪ್​?
ಕಿಚ್ಚ ಸುದೀಪ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on:Apr 16, 2021 | 2:51 PM

8 ಸೀಸನ್​ಗಳಿಂದ ಯಶಸ್ವಿಯಾಗಿ ಬಿಗ್​ ಬಾಸ್​ ನಿರೂಪಣೆ ಮಾಡಿಕೊಂಡು ಬಂದಿರುವ ಕೀರ್ತಿ ಕಿಚ್ಚ ಸುದೀಪ್​ ಅವರಿಗೆ ಸಲ್ಲುತ್ತದೆ. ಒಮ್ಮೆಯೂ ಅವರು ಈ ಶೋ ತಪ್ಪಿಸಿಕೊಂಡಿಲ್ಲ. ಆದರೆ ಇದೇ ಮೊದಲ ಬಾರಿಗೆ ವೀಕೆಂಡ್​ನಲ್ಲಿ ಅವರ ಅನುಪಸ್ಥಿತಿ ಕಾಡುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಸುದೀಪ್​ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ವಿಶ್ರಾಂತಿ ಪಡೆಯುವ ಅನಿವಾರ್ಯತೆ ಇದೆ. ಹಾಗಾಗಿ ಅವರು ಈ ವಾರ ಬಿಗ್​ ಬಾಸ್​ ನಡೆಸಿಕೊಡುವುದು ಅನುಮಾನ ಎನ್ನಲಾಗಿದೆ.

ಸಿನಿಮಾ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಸುದೀಪ್​ ಪ್ರತಿ ವೀಕೆಂಡ್​ನಲ್ಲಿ ಬಿಗ್ ಬಾಸ್​ಗಾಗಿ ಸಮಯ ಮಾಡಿಕೊಳ್ಳುತ್ತಿದ್ದರು. ಶೂಟಿಂಗ್​ ಸಲುವಾಗಿ ಎಷ್ಟೇ ದೂರ ಹೋಗಿದ್ದರೂ ಶನಿವಾರ ಮತ್ತು ಭಾನುವಾರ ಬೆಂಗಳೂರಿಗೆ ವಾಪಸ್​ ಬಂದುಬಿಡುತ್ತಿದ್ದರು. ಅಷ್ಟರಮಟ್ಟಿಗೆ ಅವರು ಬಿಗ್​ ಬಾಸ್​ ನಿರೂಪಣೆಯನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಬಂದಿದ್ದಾರೆ. ಆದರೆ ಈ ಬಾರಿ ಅನಾರೋಗ್ಯದ ಕಾರಣದಿಂದ ಅವರು ನಿರೂಪಣೆ ಮಾಡಲಾಗುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಒಂದು ವೇಳೆ ಸುದೀಪ್​ ಈ ವಾರ ಶೋ ನಡೆಸಿಕೊಡಲು ಸಾಧ್ಯವಾಗದೇ ಇದ್ದರೆ ಅವರ ಸ್ಥಾನವನ್ನು ಯಾರು ತುಂಬಲಿದ್ದಾರೆ? ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಏಳನೇ ವಾರದ ವೀಕೆಂಡ್​ ಎಪಿಸೋಡ್​ಗಳನ್ನು ಸಮರ್ಥವಾಗಿ ನಡೆಸಿಕೊಡಬಲ್ಲ ನಿರೂಪಕರಿಗಾಗಿ ವಾಹಿನಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.

ಬೇರೆ ಭಾಷೆಯ ಬಿಗ್​ ಬಾಸ್​ ಕಾರ್ಯಕ್ರಮಗಳಲ್ಲಿ ಇಂಥ ಪರಿಸ್ಥಿತಿ ಈ ಹಿಂದೆ ಎದುರಾಗಿತ್ತು. ಅಕ್ಕಿನೇನಿ ನಾಗಾರ್ಜುನ ಅವರ ಅನುಪಸ್ಥಿತಿಯಲ್ಲಿ ಅವರ ಸೊಸೆ ಸಮಂತಾ ಅವರು ತೆಲುಗು ಬಿಗ್​ ಬಾಸ್​ ನಿರೂಪಣೆ ಮಾಡಿದ್ದರು. ಹಿರಿಯ ನಟಿ ರಮ್ಯಾ ಕೃಷ್ಣ ಅವರ ಹೆಗಲಿಗೂ ಒಮ್ಮೆ ಈ ಜವಾಬ್ದಾರಿ ಹೋಗಿತ್ತು. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಬದಲಿಗೆ ಬಿಗ್​ ಬಾಸ್​ 13ನೇ ಸೀಸನ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ನಡೆಸಿಕೊಟ್ಟಿದ್ದರು. ಕನ್ನಡದಲ್ಲಿ ಯಾರಿಗೆ ಈ ಚಾನ್ಸ್​ ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ 7ನೇ ವಾರ ಬಿಗ್​ ಫೈಟ್​! ಘಟಾನುಘಟಿಗಳೆಲ್ಲ ನಾಮಿನೇಟ್​

ವೈಷ್ಣವಿಗೆ ತುರ್ತಾಗಿ ಗಂಡ ಬೇಕಂತೆ! ಬಿಗ್​ ಬಾಸ್​ ಮನೆಯಲ್ಲಿ ಸನ್ನಿಧಿಯ ಹೊಸ ಬೇಡಿಕೆ

Published On - 8:12 am, Fri, 16 April 21

ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್