Kichcha Sudeep: ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ನಿರೂಪಣೆ ತಪ್ಪಿಸಿಕೊಳ್ಳುತ್ತಿರುವ ಕಿಚ್ಚ ಸುದೀಪ್​?

Bigg Boss Kannada: ಬಿಗ್​ ಬಾಸ್​ ಕನ್ನಡದಲ್ಲಿ ಏಳನೇ ವಾರದ ವೀಕೆಂಡ್​ ಎಪಿಸೋಡ್​ಗಳನ್ನು ಸಮರ್ಥವಾಗಿ ನಡೆಸಿಕೊಡಬಲ್ಲ ನಿರೂಪಕರಿಗಾಗಿ ವಾಹಿನಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.

Kichcha Sudeep: ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ನಿರೂಪಣೆ ತಪ್ಪಿಸಿಕೊಳ್ಳುತ್ತಿರುವ ಕಿಚ್ಚ ಸುದೀಪ್​?
ಕಿಚ್ಚ ಸುದೀಪ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Apr 16, 2021 | 2:51 PM

8 ಸೀಸನ್​ಗಳಿಂದ ಯಶಸ್ವಿಯಾಗಿ ಬಿಗ್​ ಬಾಸ್​ ನಿರೂಪಣೆ ಮಾಡಿಕೊಂಡು ಬಂದಿರುವ ಕೀರ್ತಿ ಕಿಚ್ಚ ಸುದೀಪ್​ ಅವರಿಗೆ ಸಲ್ಲುತ್ತದೆ. ಒಮ್ಮೆಯೂ ಅವರು ಈ ಶೋ ತಪ್ಪಿಸಿಕೊಂಡಿಲ್ಲ. ಆದರೆ ಇದೇ ಮೊದಲ ಬಾರಿಗೆ ವೀಕೆಂಡ್​ನಲ್ಲಿ ಅವರ ಅನುಪಸ್ಥಿತಿ ಕಾಡುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಸುದೀಪ್​ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ವಿಶ್ರಾಂತಿ ಪಡೆಯುವ ಅನಿವಾರ್ಯತೆ ಇದೆ. ಹಾಗಾಗಿ ಅವರು ಈ ವಾರ ಬಿಗ್​ ಬಾಸ್​ ನಡೆಸಿಕೊಡುವುದು ಅನುಮಾನ ಎನ್ನಲಾಗಿದೆ.

ಸಿನಿಮಾ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಸುದೀಪ್​ ಪ್ರತಿ ವೀಕೆಂಡ್​ನಲ್ಲಿ ಬಿಗ್ ಬಾಸ್​ಗಾಗಿ ಸಮಯ ಮಾಡಿಕೊಳ್ಳುತ್ತಿದ್ದರು. ಶೂಟಿಂಗ್​ ಸಲುವಾಗಿ ಎಷ್ಟೇ ದೂರ ಹೋಗಿದ್ದರೂ ಶನಿವಾರ ಮತ್ತು ಭಾನುವಾರ ಬೆಂಗಳೂರಿಗೆ ವಾಪಸ್​ ಬಂದುಬಿಡುತ್ತಿದ್ದರು. ಅಷ್ಟರಮಟ್ಟಿಗೆ ಅವರು ಬಿಗ್​ ಬಾಸ್​ ನಿರೂಪಣೆಯನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಬಂದಿದ್ದಾರೆ. ಆದರೆ ಈ ಬಾರಿ ಅನಾರೋಗ್ಯದ ಕಾರಣದಿಂದ ಅವರು ನಿರೂಪಣೆ ಮಾಡಲಾಗುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಒಂದು ವೇಳೆ ಸುದೀಪ್​ ಈ ವಾರ ಶೋ ನಡೆಸಿಕೊಡಲು ಸಾಧ್ಯವಾಗದೇ ಇದ್ದರೆ ಅವರ ಸ್ಥಾನವನ್ನು ಯಾರು ತುಂಬಲಿದ್ದಾರೆ? ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಏಳನೇ ವಾರದ ವೀಕೆಂಡ್​ ಎಪಿಸೋಡ್​ಗಳನ್ನು ಸಮರ್ಥವಾಗಿ ನಡೆಸಿಕೊಡಬಲ್ಲ ನಿರೂಪಕರಿಗಾಗಿ ವಾಹಿನಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.

ಬೇರೆ ಭಾಷೆಯ ಬಿಗ್​ ಬಾಸ್​ ಕಾರ್ಯಕ್ರಮಗಳಲ್ಲಿ ಇಂಥ ಪರಿಸ್ಥಿತಿ ಈ ಹಿಂದೆ ಎದುರಾಗಿತ್ತು. ಅಕ್ಕಿನೇನಿ ನಾಗಾರ್ಜುನ ಅವರ ಅನುಪಸ್ಥಿತಿಯಲ್ಲಿ ಅವರ ಸೊಸೆ ಸಮಂತಾ ಅವರು ತೆಲುಗು ಬಿಗ್​ ಬಾಸ್​ ನಿರೂಪಣೆ ಮಾಡಿದ್ದರು. ಹಿರಿಯ ನಟಿ ರಮ್ಯಾ ಕೃಷ್ಣ ಅವರ ಹೆಗಲಿಗೂ ಒಮ್ಮೆ ಈ ಜವಾಬ್ದಾರಿ ಹೋಗಿತ್ತು. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಬದಲಿಗೆ ಬಿಗ್​ ಬಾಸ್​ 13ನೇ ಸೀಸನ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ನಡೆಸಿಕೊಟ್ಟಿದ್ದರು. ಕನ್ನಡದಲ್ಲಿ ಯಾರಿಗೆ ಈ ಚಾನ್ಸ್​ ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ 7ನೇ ವಾರ ಬಿಗ್​ ಫೈಟ್​! ಘಟಾನುಘಟಿಗಳೆಲ್ಲ ನಾಮಿನೇಟ್​

ವೈಷ್ಣವಿಗೆ ತುರ್ತಾಗಿ ಗಂಡ ಬೇಕಂತೆ! ಬಿಗ್​ ಬಾಸ್​ ಮನೆಯಲ್ಲಿ ಸನ್ನಿಧಿಯ ಹೊಸ ಬೇಡಿಕೆ

Published On - 8:12 am, Fri, 16 April 21

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ