‘ಮೊದಲಿನಂತೆ ಇರೋಕೆ ಸಾಧ್ಯವಿಲ್ಲ, ನನ್ನ ಬಳಿ ಮಾತನಾಡಬೇಡ’; ದಿವ್ಯಾಗೆ ಕಟು ಮಾತಿನಿಂದ ಎಚ್ಚರಿಕೆ ನೀಡಿದ ಮಂಜು

ಇತ್ತೀಚೆಗೆ ಬಿಗ್​ ಬಾಸ್​ ಮನೆ ರಣರಂಗವಾಗಿತ್ತು. ಚಕ್ರವರ್ತಿ ಚಂದ್ರಚೂಡ್​ ಅವರು ತಮ್ಮ ಮಾತಿನ ಮೂಲಕ ಮಂಜು ಹಾಗೂ ದಿವ್ಯಾರನ್ನು ತಿವಿದಿದ್ದರು. ಇದರಿಂದ ಇಬ್ಬರೂ ಮಂಕಾಗಿದ್ದಾರೆ.

‘ಮೊದಲಿನಂತೆ ಇರೋಕೆ ಸಾಧ್ಯವಿಲ್ಲ, ನನ್ನ ಬಳಿ ಮಾತನಾಡಬೇಡ’; ದಿವ್ಯಾಗೆ ಕಟು ಮಾತಿನಿಂದ ಎಚ್ಚರಿಕೆ ನೀಡಿದ ಮಂಜು
ಮಂಜು ಪಾವಗಡ - ದಿವ್ಯಾ ಸುರೇಶ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 30, 2021 | 2:54 PM

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಮೊದಲ ಇನ್ನಿಂಗ್ಸ್​ನಲ್ಲಿ ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಪ್ರೀತಿಯ ನಾಟಕವಾಡಿದ್ದರು. ಇದರಿಂದ ಮಂಜು ವೈಯಕ್ತಿಕವಾಗಿ ಡಲ್​ ಆದಂತೆ ಕಂಡುಬಂತು. ಈ ಕಾರಣಕ್ಕೆ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಅವರು ಬದಲಾಗಿದ್ದು, ಮೊದಲಾದ ತಪ್ಪನ್ನು ತಿದ್ದುಕೊಂಡಿದ್ದಾರೆ. ಇದು ದಿವ್ಯಾ ಸುರೇಶ್​ಗೆ ಆಘಾತ ನೀಡಿದೆ.

ಇತ್ತೀಚೆಗೆ ಬಿಗ್​ ಬಾಸ್​ ಮನೆ ರಣರಂಗವಾಗಿತ್ತು. ಚಕ್ರವರ್ತಿ ಚಂದ್ರಚೂಡ್​ ಅವರು ತಮ್ಮ ಮಾತಿನ ಮೂಲಕ ಮಂಜು ಹಾಗೂ ದಿವ್ಯಾರನ್ನು ತಿವಿದಿದ್ದರು. ಇದರಿಂದ ಇಬ್ಬರೂ ಮಂಕಾಗಿದ್ದಾರೆ. ಇನ್ನು, ಪ್ರಶಾಂತ್​ ಸಂಬರಗಿ ಮಾತಿನ ಮೂಲಕ ಪದೇಪದೇ ದಿವ್ಯಾ ಅವರನ್ನು ಚುಚ್ಚುತ್ತಿದ್ದಾರೆ. ಹೀಗಾಗಿ, ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾಗೆ ಗೆಳೆಯರ ಸಂಖ್ಯೆ ಕಡಿಮೆ ಆಗುತ್ತಿದೆ. ಈಗ ಮಂಜು ಕೂಡ ದಿವ್ಯಾ ಜತೆ ಮಾತನಾಡದಿರಲು ನಿರ್ಧರಿಸಿದ್ದಾರೆ.

ಕಲರ್ಸ್​ ಕನ್ನಡ ವಾಹಿನಿ ಸೋಶಿಯಲ್​ ಮೀಡಿಯಾದಲ್ಲಿ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಮಂಜು ಹಾಗೂ ದಿವ್ಯಾ ಮಧ್ಯೆ ಶಮಂತ್​ ವಿಚಾರ ಚರ್ಚೆ ಆಗಿದೆ. ‘ನೀನು ಅವನಿಗೆ ಆ ರೀತಿ ಮಾಡಿದಾಗ ನನಗೆ ಹೇಗಾಗಬೇಡ’ ಎಂದು ಮಂಜು ಪ್ರಶ್ನೆ ಮಾಡಿದ್ದಾರೆ. ‘ಶಮಂತ್​ ಬದಲು ಪ್ರಿಯಾಂಕಾ ಇಂದ ಶುರುವಾದರೂ ನಾನು ಅದೇ ರೀತಿ ಮಾಡುತ್ತಿದ್ದೆ’ ಎಂದು ದಿವ್ಯಾ ಸಮಜಾಯಿಶಿ ನೀಡಿದ್ದಾರೆ.

ಈ ವಿಚಾರಕ್ಕೆ ಇಬ್ಬರಿಗೂ ಮಾತಿಗೆ ಮಾತು ಬೆಳೆದಿದೆ. ಕೊನೆಯಲ್ಲಿ ದಿವ್ಯಾ, ‘ನೀನು ಮೊದಲಿನಂತೆ ಇಲ್ಲ ಎಂದು ಮಂಜುಗೆ ನೇರವಾಗಿ’ ಹೇಳಿದ್ದಾರೆ. ‘ನಾನು ಮೊದಲಿನಂತೆ ಇರೋಕೆ ಸಾಧ್ಯವೇ ಇಲ್ಲ. ನನ್ನ ಜತೆ ಮಾತನಾಡುವುದೇ ಬೇಡ’ ಎಂದು ಕಠೋರವಾಗಿಯೇ ಮಂಜು ಹೇಳಿದ್ದಾರೆ. ಇದು ದಿವ್ಯಾಗೆ ಮತ್ತಷ್ಟು ನೋವು ತರಿಸಿದೆ. ಅಷ್ಟಕ್ಕೂ ಇಬ್ಬರ ಮಧ್ಯೆ ಈ ಜಗಳ ಏರ್ಪಡೋಕೆ ಕಾರಣ ಏನು ಎಂದು ತಿಳಿದುಕೊಳ್ಳಲು ಇಂದಿನ (ಜೂನ್​ 30) ಎಪಿಸೋಡ್​ ನೋಡಬೇಕು.

ಬಿಗ್​ ಬಾಸ್​ ಮನೆ ಒಳ ಸೇರುವಾಗಲೇ ಮಂಜು ಪಾವಗಡ ಒಂದು ಕಠಿಣ ನಿರ್ಧಾರ ಮಾಡಿದ್ದರು. ತಾವು ಬಿಗ್​ ಬಾಸ್​ ಮನೆಗೆ ಬಂದಿರೋದು ಎಂಟರ್​ಟೇನ್​ ಮಾಡೋಕೆ. ಹೀಗಾಗಿ, ಅದನ್ನು ಮಾಡಿಯೇ ಮಾಡುತ್ತೇನೆ. ಈ ಮನೆಯಲ್ಲಿ ನನ್ನದು ಸಿಂಗಲ್​ ರೈಡಿಂಗ್​ ಎಂದಿದ್ದರು. ಈಗ ಅವರು ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಗೆ ಹಿರಿಯ ನಟ ಅವಿನಾಶ್​? ಈಡೇರುತ್ತಾ ಸ್ಪರ್ಧಿಗಳ ಬೇಡಿಕೆ?

ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ

ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!