AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೊದಲಿನಂತೆ ಇರೋಕೆ ಸಾಧ್ಯವಿಲ್ಲ, ನನ್ನ ಬಳಿ ಮಾತನಾಡಬೇಡ’; ದಿವ್ಯಾಗೆ ಕಟು ಮಾತಿನಿಂದ ಎಚ್ಚರಿಕೆ ನೀಡಿದ ಮಂಜು

ಇತ್ತೀಚೆಗೆ ಬಿಗ್​ ಬಾಸ್​ ಮನೆ ರಣರಂಗವಾಗಿತ್ತು. ಚಕ್ರವರ್ತಿ ಚಂದ್ರಚೂಡ್​ ಅವರು ತಮ್ಮ ಮಾತಿನ ಮೂಲಕ ಮಂಜು ಹಾಗೂ ದಿವ್ಯಾರನ್ನು ತಿವಿದಿದ್ದರು. ಇದರಿಂದ ಇಬ್ಬರೂ ಮಂಕಾಗಿದ್ದಾರೆ.

‘ಮೊದಲಿನಂತೆ ಇರೋಕೆ ಸಾಧ್ಯವಿಲ್ಲ, ನನ್ನ ಬಳಿ ಮಾತನಾಡಬೇಡ’; ದಿವ್ಯಾಗೆ ಕಟು ಮಾತಿನಿಂದ ಎಚ್ಚರಿಕೆ ನೀಡಿದ ಮಂಜು
ಮಂಜು ಪಾವಗಡ - ದಿವ್ಯಾ ಸುರೇಶ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jun 30, 2021 | 2:54 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಮೊದಲ ಇನ್ನಿಂಗ್ಸ್​ನಲ್ಲಿ ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಪ್ರೀತಿಯ ನಾಟಕವಾಡಿದ್ದರು. ಇದರಿಂದ ಮಂಜು ವೈಯಕ್ತಿಕವಾಗಿ ಡಲ್​ ಆದಂತೆ ಕಂಡುಬಂತು. ಈ ಕಾರಣಕ್ಕೆ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಅವರು ಬದಲಾಗಿದ್ದು, ಮೊದಲಾದ ತಪ್ಪನ್ನು ತಿದ್ದುಕೊಂಡಿದ್ದಾರೆ. ಇದು ದಿವ್ಯಾ ಸುರೇಶ್​ಗೆ ಆಘಾತ ನೀಡಿದೆ.

ಇತ್ತೀಚೆಗೆ ಬಿಗ್​ ಬಾಸ್​ ಮನೆ ರಣರಂಗವಾಗಿತ್ತು. ಚಕ್ರವರ್ತಿ ಚಂದ್ರಚೂಡ್​ ಅವರು ತಮ್ಮ ಮಾತಿನ ಮೂಲಕ ಮಂಜು ಹಾಗೂ ದಿವ್ಯಾರನ್ನು ತಿವಿದಿದ್ದರು. ಇದರಿಂದ ಇಬ್ಬರೂ ಮಂಕಾಗಿದ್ದಾರೆ. ಇನ್ನು, ಪ್ರಶಾಂತ್​ ಸಂಬರಗಿ ಮಾತಿನ ಮೂಲಕ ಪದೇಪದೇ ದಿವ್ಯಾ ಅವರನ್ನು ಚುಚ್ಚುತ್ತಿದ್ದಾರೆ. ಹೀಗಾಗಿ, ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾಗೆ ಗೆಳೆಯರ ಸಂಖ್ಯೆ ಕಡಿಮೆ ಆಗುತ್ತಿದೆ. ಈಗ ಮಂಜು ಕೂಡ ದಿವ್ಯಾ ಜತೆ ಮಾತನಾಡದಿರಲು ನಿರ್ಧರಿಸಿದ್ದಾರೆ.

ಕಲರ್ಸ್​ ಕನ್ನಡ ವಾಹಿನಿ ಸೋಶಿಯಲ್​ ಮೀಡಿಯಾದಲ್ಲಿ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಮಂಜು ಹಾಗೂ ದಿವ್ಯಾ ಮಧ್ಯೆ ಶಮಂತ್​ ವಿಚಾರ ಚರ್ಚೆ ಆಗಿದೆ. ‘ನೀನು ಅವನಿಗೆ ಆ ರೀತಿ ಮಾಡಿದಾಗ ನನಗೆ ಹೇಗಾಗಬೇಡ’ ಎಂದು ಮಂಜು ಪ್ರಶ್ನೆ ಮಾಡಿದ್ದಾರೆ. ‘ಶಮಂತ್​ ಬದಲು ಪ್ರಿಯಾಂಕಾ ಇಂದ ಶುರುವಾದರೂ ನಾನು ಅದೇ ರೀತಿ ಮಾಡುತ್ತಿದ್ದೆ’ ಎಂದು ದಿವ್ಯಾ ಸಮಜಾಯಿಶಿ ನೀಡಿದ್ದಾರೆ.

ಈ ವಿಚಾರಕ್ಕೆ ಇಬ್ಬರಿಗೂ ಮಾತಿಗೆ ಮಾತು ಬೆಳೆದಿದೆ. ಕೊನೆಯಲ್ಲಿ ದಿವ್ಯಾ, ‘ನೀನು ಮೊದಲಿನಂತೆ ಇಲ್ಲ ಎಂದು ಮಂಜುಗೆ ನೇರವಾಗಿ’ ಹೇಳಿದ್ದಾರೆ. ‘ನಾನು ಮೊದಲಿನಂತೆ ಇರೋಕೆ ಸಾಧ್ಯವೇ ಇಲ್ಲ. ನನ್ನ ಜತೆ ಮಾತನಾಡುವುದೇ ಬೇಡ’ ಎಂದು ಕಠೋರವಾಗಿಯೇ ಮಂಜು ಹೇಳಿದ್ದಾರೆ. ಇದು ದಿವ್ಯಾಗೆ ಮತ್ತಷ್ಟು ನೋವು ತರಿಸಿದೆ. ಅಷ್ಟಕ್ಕೂ ಇಬ್ಬರ ಮಧ್ಯೆ ಈ ಜಗಳ ಏರ್ಪಡೋಕೆ ಕಾರಣ ಏನು ಎಂದು ತಿಳಿದುಕೊಳ್ಳಲು ಇಂದಿನ (ಜೂನ್​ 30) ಎಪಿಸೋಡ್​ ನೋಡಬೇಕು.

ಬಿಗ್​ ಬಾಸ್​ ಮನೆ ಒಳ ಸೇರುವಾಗಲೇ ಮಂಜು ಪಾವಗಡ ಒಂದು ಕಠಿಣ ನಿರ್ಧಾರ ಮಾಡಿದ್ದರು. ತಾವು ಬಿಗ್​ ಬಾಸ್​ ಮನೆಗೆ ಬಂದಿರೋದು ಎಂಟರ್​ಟೇನ್​ ಮಾಡೋಕೆ. ಹೀಗಾಗಿ, ಅದನ್ನು ಮಾಡಿಯೇ ಮಾಡುತ್ತೇನೆ. ಈ ಮನೆಯಲ್ಲಿ ನನ್ನದು ಸಿಂಗಲ್​ ರೈಡಿಂಗ್​ ಎಂದಿದ್ದರು. ಈಗ ಅವರು ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಗೆ ಹಿರಿಯ ನಟ ಅವಿನಾಶ್​? ಈಡೇರುತ್ತಾ ಸ್ಪರ್ಧಿಗಳ ಬೇಡಿಕೆ?

ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ

‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ