AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ 7ನೇ ವಾರ ಬಿಗ್​ ಫೈಟ್​! ಘಟಾನುಘಟಿಗಳೆಲ್ಲ ನಾಮಿನೇಟ್​

Bigg Boss Kannada: ಈ ವಾರ ನಾಮಿನೇಟ್​ ಆಗಿರುವ ಸ್ಪರ್ಧಿಗಳೆಲ್ಲರೂ ತುಂಬ ಸ್ಟ್ರಾಂಗ್​ ಆಗಿದ್ದಾರೆ. ಮುಂದಿನ ವಾರಕ್ಕೆ ತಮ್ಮ ಜರ್ನಿ ಮುಂದುವರಿಯಬೇಕು ಎಂದರೆ ಅವರು ಪರಸ್ಪರ ತೀವ್ರ ಪೈಪೋಟಿ ನೀಡಬೇಕಾಗುತ್ತದೆ.

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ 7ನೇ ವಾರ ಬಿಗ್​ ಫೈಟ್​! ಘಟಾನುಘಟಿಗಳೆಲ್ಲ ನಾಮಿನೇಟ್​
ಬಿಗ್ ಬಾಸ್​ ಕನ್ನಡ ಸೀಸನ್​ 8
ಮದನ್​ ಕುಮಾರ್​
| Edited By: |

Updated on:Apr 13, 2021 | 4:00 PM

Share

8ನೇ ಸೀಸನ್​ನ ಕನ್ನಡ ಬಿಗ್​ ಬಾಸ್​ನಲ್ಲಿ ಪೈಪೋಟಿ ಜೋರಾಗುತ್ತಿದೆ. ಸ್ಪರ್ಧಿಗಳೆಲ್ಲ ಈಗ 7ನೇ ವಾರಕ್ಕೆ ಕಾಲಿಟ್ಟಿದ್ದಾರೆ. ದುರ್ಬಲ ಸ್ಪರ್ಧಿಗಳೆಲ್ಲ ಈಗಾಗಲೇ ಎಲಿಮಿನೇಟ್​ ಆಗಿದ್ದಾರೆ. ಇನ್ನೇನಿದ್ದರೂ ಬಲಾಢ್ಯರ ನಡುವಿನ ಹಣಾಹಣಿ. ವಾರದಿಂದ ವಾರಕ್ಕೆ ನಾಮಿನೇಷನ್​ ಪ್ರಕ್ರಿಯೆಯಲ್ಲಿ ಬಿಸಿ ಏರುತ್ತಿದೆ. ಪ್ರತಿ ಸೋಮವಾರ ಬಂದರೆ ನಾಮಿನೇಷನ್​ ಘಂಟೆ ಬಾರಿಸುತ್ತದೆ. ಏಳನೇ ವಾರಕ್ಕೆ ನಾಮಿನೇಷನ್​ ಆಗಿರುವವರ ಹೆಸರುಗಳನ್ನು ಏ.12ರ ಸಂಚಿಕೆಯಲ್ಲಿ ಅಂತಿಮಗೊಳಿಸಲಾಗಿದೆ.

ಕಳೆದ ವಾರ ಅದೃಷ್ಟದ ಬಲದಿಂದ ಎಲಿಮಿನೇಷನ್​ನಿಂದ​ ತಪ್ಪಿಸಿಕೊಂಡ ಶಮಂತ್​ ಈ ವಾರ ನೇರವಾಗಿ ನಾಮಿನೇಟ್​ ಆಗಿದ್ದಾರೆ. ಉಳಿದಂತೆ ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆ.ಪಿ, ದಿವ್ಯಾ ಉರುಡುಗ, ರಾಜೀವ್​, ಚಕ್ರವರ್ತಿ ಚಂದ್ರಚೂಡ್​, ವಿಶ್ವನಾಥ್​ ಈ ಬಾರಿ ನಾಮಿನೇಟ್​ ಆಗಿದ್ದಾರೆ. ಮಂಜು ಒಬ್ಬ ಟಫ್​ ಸ್ಪರ್ಧಿ ಹಾಗೂ ಅವರು ಕಂಫರ್ಟ್​ ಜೋನ್​ನಿಂದ ಹೊರಬರಲಿ ಎಂಬ ಉದ್ದೇಶದಿಂದ ಅವರನ್ನು ನಾಮಿನೇಟ್​ ಮಾಡಲಾಗಿದೆ. ಹೆಣ್ಣು ಮಕ್ಕಳ ವಿಚಾರದಲ್ಲಿ ಯಾವುದು ತಮಾಷೆ, ಯಾವುದು ಸೂಕ್ಷ್ಮ ಎಂಬುದು ರಾಜೀವ್​ ಗೊತ್ತಿಲ್ಲ ಎಂದು ಚಕ್ರವರ್ತಿ ಚಂದ್ರಚೂಡ್​ ಹೇಳಿದ್ದಾರೆ. ಅದೇ ಕಾರಣ ನೀಡಿ ರಾಜೀವ್​ ಅವರನ್ನು ಚಕ್ರವರ್ತಿ ನಾಮಿನೇಟ್​ ಮಾಡಿದ್ದಾರೆ.

ವಿಶ್ವನಾಥ್​ ಯಾವುದರಲ್ಲೂ ಹೆಚ್ಚಾಗಿ ಭಾಗವಹಿಸುತ್ತಿಲ್ಲ. ತಮಗಿರುವ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂಬ ಆರೋಪ ಹೊರಿಸಿ ವಿಶ್ವನಾಥ್​ ಅವರನ್ನು ನಾಮಿನೇಟ್​ ಮಾಡಲಾಗಿದೆ. ಚಕ್ರವರ್ತಿ ಚಂದ್ರಚೂಡ್​ ಗೇಮ್​ ಆಡುತ್ತಿರುವ ರೀತಿ ಸರಿಯಿಲ್ಲ. ಕಳೆದ ವಾರ ಅವರ ವರ್ತನೆಯಿಂದ ನಮಗೆಲ್ಲ ಬೇಜಾರಾಗಿದೆ. ಮನೆಯನ್ನು ಒಡೆದು ಆಳಲು ಪ್ರಯತ್ನಿಸುತ್ತಿದ್ದಾರೆ ಎಂಬ ಕಾರಣಗಳನ್ನು ನೀಡಿ ಮನೆಯ ಇತರೆ ಸದಸ್ಯರು ಚಕ್ರವರ್ತಿ ಚಂದ್ರಚೂಡ್​ ಹೆಸರನ್ನು ನಾಮಿನೇಷನ್​ಗೆ ಸೂಚಿಸಿದ್ದಾರೆ.

ಈ ವಾರ ನಾಮಿನೇಟ್​ ಆಗಿರುವ ಸ್ಪರ್ಧಿಗಳೆಲ್ಲರೂ ತುಂಬ ಸ್ಟ್ರಾಂಗ್​ ಆಗಿದ್ದಾರೆ. ಮುಂದಿನ ವಾರಕ್ಕೆ ತಮ್ಮ ಜರ್ನಿ ಮುಂದುವರಿಯಬೇಕು ಎಂದರೆ ಅವರು ಪರಸ್ಪರ ತೀವ್ರ ಪೈಪೋಟಿ ನೀಡಬೇಕಾಗುತ್ತದೆ. ಹಾಗಾಗಿ ಬಿಗ್​ ಬಾಸ್​ ಮನೆಯಲ್ಲಿ ಬಿಗ್​ ಫೈಟ್​ ನಡೆಯುವ ಸಾಧ್ಯತೆ ಇದೆ. ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ನೀಡಿರುವ ನಟಿ ಪ್ರಿಯಾಂಕಾ ತಿಮ್ಮೇಶ್​ ಮತ್ತು ಕ್ಯಾಪ್ಟನ್​ ಆಗಿರುವ ಪ್ರಶಾಂತ್​ ಸಂಬರಗಿ ಅವರ ಹೆಸರನ್ನು ಈ ವಾರದ ಎಲಿಮಿನೇಷನ್​ಗೆ ಯಾರೂ ಸೂಚಿಸುವಂತಿರಲಿಲ್ಲ.

ಇದನ್ನೂ ಓದಿ: ವೈಷ್ಣವಿಗೆ ತುರ್ತಾಗಿ ಗಂಡ ಬೇಕಂತೆ! ಬಿಗ್​ ಬಾಸ್​ ಮನೆಯಲ್ಲಿ ಸನ್ನಿಧಿಯ ಹೊಸ ಬೇಡಿಕೆ

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

(Bigg Boss Kannada 8 : Manju Pavagada Rajeev Divya Suresh Shamanth Aravind KP Divya Uruduga Chakravarthy Chandrachud Vishwanath nominated in BBK8 7th week)

Published On - 10:27 am, Tue, 13 April 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?