AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ 7ನೇ ವಾರ ಬಿಗ್​ ಫೈಟ್​! ಘಟಾನುಘಟಿಗಳೆಲ್ಲ ನಾಮಿನೇಟ್​

Bigg Boss Kannada: ಈ ವಾರ ನಾಮಿನೇಟ್​ ಆಗಿರುವ ಸ್ಪರ್ಧಿಗಳೆಲ್ಲರೂ ತುಂಬ ಸ್ಟ್ರಾಂಗ್​ ಆಗಿದ್ದಾರೆ. ಮುಂದಿನ ವಾರಕ್ಕೆ ತಮ್ಮ ಜರ್ನಿ ಮುಂದುವರಿಯಬೇಕು ಎಂದರೆ ಅವರು ಪರಸ್ಪರ ತೀವ್ರ ಪೈಪೋಟಿ ನೀಡಬೇಕಾಗುತ್ತದೆ.

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ 7ನೇ ವಾರ ಬಿಗ್​ ಫೈಟ್​! ಘಟಾನುಘಟಿಗಳೆಲ್ಲ ನಾಮಿನೇಟ್​
ಬಿಗ್ ಬಾಸ್​ ಕನ್ನಡ ಸೀಸನ್​ 8
ಮದನ್​ ಕುಮಾರ್​
| Edited By: |

Updated on:Apr 13, 2021 | 4:00 PM

Share

8ನೇ ಸೀಸನ್​ನ ಕನ್ನಡ ಬಿಗ್​ ಬಾಸ್​ನಲ್ಲಿ ಪೈಪೋಟಿ ಜೋರಾಗುತ್ತಿದೆ. ಸ್ಪರ್ಧಿಗಳೆಲ್ಲ ಈಗ 7ನೇ ವಾರಕ್ಕೆ ಕಾಲಿಟ್ಟಿದ್ದಾರೆ. ದುರ್ಬಲ ಸ್ಪರ್ಧಿಗಳೆಲ್ಲ ಈಗಾಗಲೇ ಎಲಿಮಿನೇಟ್​ ಆಗಿದ್ದಾರೆ. ಇನ್ನೇನಿದ್ದರೂ ಬಲಾಢ್ಯರ ನಡುವಿನ ಹಣಾಹಣಿ. ವಾರದಿಂದ ವಾರಕ್ಕೆ ನಾಮಿನೇಷನ್​ ಪ್ರಕ್ರಿಯೆಯಲ್ಲಿ ಬಿಸಿ ಏರುತ್ತಿದೆ. ಪ್ರತಿ ಸೋಮವಾರ ಬಂದರೆ ನಾಮಿನೇಷನ್​ ಘಂಟೆ ಬಾರಿಸುತ್ತದೆ. ಏಳನೇ ವಾರಕ್ಕೆ ನಾಮಿನೇಷನ್​ ಆಗಿರುವವರ ಹೆಸರುಗಳನ್ನು ಏ.12ರ ಸಂಚಿಕೆಯಲ್ಲಿ ಅಂತಿಮಗೊಳಿಸಲಾಗಿದೆ.

ಕಳೆದ ವಾರ ಅದೃಷ್ಟದ ಬಲದಿಂದ ಎಲಿಮಿನೇಷನ್​ನಿಂದ​ ತಪ್ಪಿಸಿಕೊಂಡ ಶಮಂತ್​ ಈ ವಾರ ನೇರವಾಗಿ ನಾಮಿನೇಟ್​ ಆಗಿದ್ದಾರೆ. ಉಳಿದಂತೆ ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆ.ಪಿ, ದಿವ್ಯಾ ಉರುಡುಗ, ರಾಜೀವ್​, ಚಕ್ರವರ್ತಿ ಚಂದ್ರಚೂಡ್​, ವಿಶ್ವನಾಥ್​ ಈ ಬಾರಿ ನಾಮಿನೇಟ್​ ಆಗಿದ್ದಾರೆ. ಮಂಜು ಒಬ್ಬ ಟಫ್​ ಸ್ಪರ್ಧಿ ಹಾಗೂ ಅವರು ಕಂಫರ್ಟ್​ ಜೋನ್​ನಿಂದ ಹೊರಬರಲಿ ಎಂಬ ಉದ್ದೇಶದಿಂದ ಅವರನ್ನು ನಾಮಿನೇಟ್​ ಮಾಡಲಾಗಿದೆ. ಹೆಣ್ಣು ಮಕ್ಕಳ ವಿಚಾರದಲ್ಲಿ ಯಾವುದು ತಮಾಷೆ, ಯಾವುದು ಸೂಕ್ಷ್ಮ ಎಂಬುದು ರಾಜೀವ್​ ಗೊತ್ತಿಲ್ಲ ಎಂದು ಚಕ್ರವರ್ತಿ ಚಂದ್ರಚೂಡ್​ ಹೇಳಿದ್ದಾರೆ. ಅದೇ ಕಾರಣ ನೀಡಿ ರಾಜೀವ್​ ಅವರನ್ನು ಚಕ್ರವರ್ತಿ ನಾಮಿನೇಟ್​ ಮಾಡಿದ್ದಾರೆ.

ವಿಶ್ವನಾಥ್​ ಯಾವುದರಲ್ಲೂ ಹೆಚ್ಚಾಗಿ ಭಾಗವಹಿಸುತ್ತಿಲ್ಲ. ತಮಗಿರುವ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂಬ ಆರೋಪ ಹೊರಿಸಿ ವಿಶ್ವನಾಥ್​ ಅವರನ್ನು ನಾಮಿನೇಟ್​ ಮಾಡಲಾಗಿದೆ. ಚಕ್ರವರ್ತಿ ಚಂದ್ರಚೂಡ್​ ಗೇಮ್​ ಆಡುತ್ತಿರುವ ರೀತಿ ಸರಿಯಿಲ್ಲ. ಕಳೆದ ವಾರ ಅವರ ವರ್ತನೆಯಿಂದ ನಮಗೆಲ್ಲ ಬೇಜಾರಾಗಿದೆ. ಮನೆಯನ್ನು ಒಡೆದು ಆಳಲು ಪ್ರಯತ್ನಿಸುತ್ತಿದ್ದಾರೆ ಎಂಬ ಕಾರಣಗಳನ್ನು ನೀಡಿ ಮನೆಯ ಇತರೆ ಸದಸ್ಯರು ಚಕ್ರವರ್ತಿ ಚಂದ್ರಚೂಡ್​ ಹೆಸರನ್ನು ನಾಮಿನೇಷನ್​ಗೆ ಸೂಚಿಸಿದ್ದಾರೆ.

ಈ ವಾರ ನಾಮಿನೇಟ್​ ಆಗಿರುವ ಸ್ಪರ್ಧಿಗಳೆಲ್ಲರೂ ತುಂಬ ಸ್ಟ್ರಾಂಗ್​ ಆಗಿದ್ದಾರೆ. ಮುಂದಿನ ವಾರಕ್ಕೆ ತಮ್ಮ ಜರ್ನಿ ಮುಂದುವರಿಯಬೇಕು ಎಂದರೆ ಅವರು ಪರಸ್ಪರ ತೀವ್ರ ಪೈಪೋಟಿ ನೀಡಬೇಕಾಗುತ್ತದೆ. ಹಾಗಾಗಿ ಬಿಗ್​ ಬಾಸ್​ ಮನೆಯಲ್ಲಿ ಬಿಗ್​ ಫೈಟ್​ ನಡೆಯುವ ಸಾಧ್ಯತೆ ಇದೆ. ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ನೀಡಿರುವ ನಟಿ ಪ್ರಿಯಾಂಕಾ ತಿಮ್ಮೇಶ್​ ಮತ್ತು ಕ್ಯಾಪ್ಟನ್​ ಆಗಿರುವ ಪ್ರಶಾಂತ್​ ಸಂಬರಗಿ ಅವರ ಹೆಸರನ್ನು ಈ ವಾರದ ಎಲಿಮಿನೇಷನ್​ಗೆ ಯಾರೂ ಸೂಚಿಸುವಂತಿರಲಿಲ್ಲ.

ಇದನ್ನೂ ಓದಿ: ವೈಷ್ಣವಿಗೆ ತುರ್ತಾಗಿ ಗಂಡ ಬೇಕಂತೆ! ಬಿಗ್​ ಬಾಸ್​ ಮನೆಯಲ್ಲಿ ಸನ್ನಿಧಿಯ ಹೊಸ ಬೇಡಿಕೆ

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

(Bigg Boss Kannada 8 : Manju Pavagada Rajeev Divya Suresh Shamanth Aravind KP Divya Uruduga Chakravarthy Chandrachud Vishwanath nominated in BBK8 7th week)

Published On - 10:27 am, Tue, 13 April 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!