AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಪ್ರಸಂಗ ನಂಗೆ ಇಷ್ಟ ಆಗಲ್ಲ; ತಮ್ಮದೇ ಟೀಂನವರಿಗೆ ಎಚ್ಚರಿಕೆ ಕೊಟ್ಟ ನಿಧಿ ಸುಬ್ಬಯ್ಯ

ಮೊದಲ ಗೇಮ್​ನಲ್ಲಿ ಎದುರಾಳಿಯಾಗಿ ರಘು ಅವರನ್ನು ಬಿಳಿ ತಂಡದವರು ಆಯ್ಕೆ ಮಾಡಿಕೊಂಡಿದ್ದರು. ರಘುಗೆ ದೈಹಿಕ ಸಾಮರ್ಥ್ಯದ ಟಾಸ್ಕ್​ ನೀಡಲಾಗಿತ್ತು. ಈ ವೇಳೆ ರಘು ಸೋತು ಬಿಟ್ಟರು.

ಅಧಿಕಪ್ರಸಂಗ ನಂಗೆ ಇಷ್ಟ ಆಗಲ್ಲ; ತಮ್ಮದೇ ಟೀಂನವರಿಗೆ ಎಚ್ಚರಿಕೆ ಕೊಟ್ಟ ನಿಧಿ ಸುಬ್ಬಯ್ಯ
ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
| Edited By: |

Updated on:Mar 23, 2021 | 7:06 AM

Share

ಬಿಗ್​ ಬಾಸ್ ಮನೆಯಲ್ಲಿ ನಾಲ್ಕನೇ ವಾರ ಚದುರಂಗದಾಟ ಎನ್ನುವ ಹೊಸ ಟಾಸ್ಕ್​ ನೀಡಲಾಗಿದೆ. ಈ ಟಾಸ್ಕ್​ನಲ್ಲಿ ಎರಡು ತಂಡವನ್ನು ಬಿಗ್​ ಬಾಸ್ ಆಯ್ಕೆ ಮಾಡಿತ್ತು. ಸಾಮಾನ್ಯವಾಗಿ ಸ್ಪರ್ಧಿಗಳು ವಿರೋಧಿ ತಂಡದವರ ಮೇಲೆ ತಿರುಗಿ ಬೀಳೋದು ಸಾಮಾನ್ಯ. ಆದರೆ, ನಿಧಿ ತಮ್ಮದೇ ಟೀಂ ವಿರುದ್ಧ ತಿರುಗಿ ಬಿದ್ದಿದೆ. ಆಟದ ನಿಯಮದ ಪ್ರಕಾರ ಎರಡು ತಂಡಗಳಿರುತ್ತವೆ. ಒಂದು ತಂಡದ ಬಣ್ಣ ಕಪ್ಪು, ಮತ್ತೊಂದು ತಂಡದ ಬಣ್ಣ ಬಿಳಿ. ಪ್ರತೀ ತಂಡದಲ್ಲೂ ರಾಜ, ರಾಣಿ, ಕುದುರೆ, ಆನೆ, ಸೈನಿಕ, ಇರುತ್ತಾರೆ. ಅಷ್ಟೇ ಅಲ್ಲ ಪ್ರತಿ ತಂಡದ ರಾಜ ಎದುರಾಳಿಯನ್ನು ಆಯ್ಕೆ ಮಾಡಿಕೊಂಡು ಅವರಿಗೆ ಟಾಸ್ಕ್​ ನೀಡಬೇಕು.

ಮೊದಲ ಗೇಮ್​ನಲ್ಲಿ ಎದುರಾಳಿಯಾಗಿ ರಘು ಅವರನ್ನು ಬಿಳಿ ತಂಡದವರು ಆಯ್ಕೆ ಮಾಡಿಕೊಂಡಿದ್ದರು. ರಘುಗೆ ದೈಹಿಕ ಸಾಮರ್ಥ್ಯದ ಟಾಸ್ಕ್​ ನೀಡಲಾಗಿತ್ತು. ಈ ವೇಳೆ ರಘು ಸೋತು ಬಿಟ್ಟರು.

ಮುಂದಿನ ಟಾಸ್ಕ್​ ವಿಚಾರದ ಬಗ್ಗೆ ಬಿಳಿ ತಂಡದವರು ಚರ್ಚೆ ಮಾಡುತ್ತಿದ್ದರು. ಎದುರಾಳಿಗಳು ನಮ್ಮ ಟೀಂನಲ್ಲಿ ನಿಧಿ ಅವರನ್ನು ಆಯ್ಕೆ ಮಾಡಿಕೊಳ್ಳಬಹುದು. ಅವರು ನಮ್ಮ ಟೀಂನಲ್ಲಿ ಸ್ವಲ್ಪ ವೀಕ್​ ಎಂದು ಪ್ರಶಾಂತ್​ ಸಂಬರಗಿ ಅಭಿಪ್ರಾಯಪಟ್ಟರು. ಅಷ್ಟೇ ಅಲ್ಲ, ಟಾಸ್ಕ್​ ಬಂದಾಗ ಏನೇನು ಮಾಡಬೇಕು ಎಂಬುದನ್ನೂ ಬಿಳಿ ತಂಡದ ಸದಸ್ಯರೆಲ್ಲರೂ ಚರ್ಚಿಸಿದ್ದರು. ಈ ವಿಚಾರ ನಿಧಿಗೆ ಇಷ್ಟವಾಗಿಲ್ಲ.

ಎಲ್ಲರೂ ತಮ್ಮನ್ನು ದಡ್ಡನಂತೆ ನೋಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ ಅಂತ ನಿಧಿ ಎಂದುಕೊಂಡರು. ಅಷ್ಟೇ ಅಲ್ಲ, ಚಿಕ್ಕ ವಿಚಾರವನ್ನು ದೊಡ್ಡದು ಮಾಡಿ ಹೇಳುವ ಅಗತ್ಯವಾದರೂ ಏನಿತ್ತು ಎನ್ನುವ ಪ್ರಶ್ನೆಯನ್ನು ತಮಗೆ ತಾವೇ ಕೇಳಿಕೊಂಡು ಒಮ್ಮೆಲೇ ಸಿಟ್ಟಾದರು.

ನಾನು ದಡ್ಡಿಯಲ್ಲ. ಅಧಿಕಪ್ರಸಂಗ ಮಾಡುವುದು ನಂಗೆ ಇಷ್ಟ ಆಗುವುದೇ ಇಲ್ಲ. ಇಷ್ಟು ಸಣ್ಣ ಸಣ್ಣ ವಿಚಾರ ಹೇಳಿ ನಂಗೆ ಇರಿಟೇಟ್​ ಮಾಡಬೇಡಿ ಎಂದು ಸಿಟ್ಟಾದರು ನಿಧಿ. ಅಷ್ಟೇ ಅಲ್ಲ, ತಮ್ಮದೇ ಟೀಂಗೆ ಆವಾಜ್​ ಹಾಕಿ ಹೋದರು. ಇದು ಬಿಳಿ ಟೀಂನ ಕೆಲ ಸದಸ್ಯರಿಗೆ ಇಷ್ಟವಾಗಿಲ್ಲ.

ಇದನ್ನೂ ಓದಿ: ಈ ಸಲ ಕಪ್​ ನಮ್ಮದೇ ಎಂದ ಬಿಗ್​ ಬಾಸ್​ ಸ್ಪರ್ಧಿಗೆ ಕಾದಿತ್ತು ಶಿಕ್ಷೆ!

Published On - 7:05 am, Tue, 23 March 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!