AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಹೊತ್ತಿಕೊಂಡಿತು ದ್ವೇಷದ ಬೆಂಕಿ; ಪ್ರಶಾಂತ್ ಸಂಬರಗಿ ಫೋಟೋ ಸುಟ್ಟ ಸ್ಪರ್ಧಿಗಳು

ಕ್ಯಾಮೆರಾ ಎದುರು ಒಂದು ರೀತಿ ಮಾತನಾಡುತ್ತಿದ್ದ ಅನೇಕರು ಕ್ಯಾಮೆರಾ ಹಿಂದೆ ಮತ್ತೊಂದು ರೀತಿಯಲ್ಲಿ ಇರುತ್ತಿದ್ದರು. ಈಗ ಮನೆ ಸೇರಿರುವ ಎಲ್ಲರಿಗೂ ಯಾರು ಹೇಗೆ ಅನ್ನೋದು ಗೊತ್ತಾಗಿದೆ.

ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಹೊತ್ತಿಕೊಂಡಿತು ದ್ವೇಷದ ಬೆಂಕಿ; ಪ್ರಶಾಂತ್ ಸಂಬರಗಿ ಫೋಟೋ ಸುಟ್ಟ ಸ್ಪರ್ಧಿಗಳು
ಬಿಗ್ ಬಾಸ್ ಮನೆಯಲ್ಲಿ ಹೊತ್ತಿಕೊಂಡಿತು ದ್ವೇಷದ ಬೆಂಕಿ; ಪ್ರಶಾಂತ್ ಸಂಬರಗಿ ಫೋಟೋ ಸುಟ್ಟ ಸ್ಪರ್ಧಿಗಳು
ರಾಜೇಶ್ ದುಗ್ಗುಮನೆ
|

Updated on:Jun 23, 2021 | 12:30 PM

Share

ಬಿಗ್​ ಬಾಸ್​ ಸ್ಪರ್ಧಿಗಳು ಏನೇ ಮಾತನಾಡಿಕೊಂಡರೂ ಅದು ಕ್ಯಾಮೆರಾ ಹಾಗೂ ಪ್ರೇಕ್ಷಕರ ನಡುವೆ ಮಾತ್ರ ಇರುತ್ತದೆ. ಸ್ಪರ್ಧಿಗಳು ಸೀಕ್ರೆಟ್​ ಆಗಿ ಏನೇ ಮಾತನಾಡಿಕೊಂಡರು ಮತ್ತೊಂದು ಸ್ಪರ್ಧಿಗೆ ಅದು ತಿಳಿಯುವುದಿಲ್ಲ. ಇದು ಬಿಗ್​ ಬಾಸ್​ ಮನೆಯ ಅಲಿಖಿತ ನಿಯಮ. ಆದರೆ, ಇದೇ ಮೊದಲ ಬಾರಿಗೆ ಈ ನಿಯಮ ಮುರಿಯಲ್ಪಟ್ಟಿದೆ. ಎಲ್ಲಾ ಸ್ಪರ್ಧಿಗಳು 70 ದಿನದ ಎಪಿಸೋಡ್​ಗಳನ್ನು ನೋಡಿ ಮತ್ತೆ ಬಿಗ್​ ಬಾಸ್​ ಮನೆ ಒಳಗೆ ಹೋಗಿದ್ದಾರೆ. ಪರಿಣಾಮ ಮನೆಯಲ್ಲಿ ಮೊದಲ ದಿನವೇ ದೊಡ್ಡ ಬೆಂಕಿ ಹೊತ್ತಿಕೊಂಡಿದೆ.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದಿದ್ದಾರೆ. ಈ ಸಂಚಿಕೆ ಇಂದು (ಜೂನ್​ 23) ಪ್ರಸಾರವಾಗಲಿದೆ. ವಿಶೇಷ ಎಂದರೆ, ಮೊದಲ ದಿನವೇ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಷನ್​ ನಡೆದಿದೆ. ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

ಕ್ಯಾಮೆರಾ ಎದುರು ಒಂದು ರೀತಿ ಮಾತನಾಡುತ್ತಿದ್ದ ಅನೇಕರು ಕ್ಯಾಮೆರಾ ಹಿಂದೆ ಮತ್ತೊಂದು ರೀತಿಯಲ್ಲಿ ಇರುತ್ತಿದ್ದರು. ಈಗ ಮನೆ ಸೇರಿರುವ ಎಲ್ಲರಿಗೂ ಯಾರು ಹೇಗೆ ಅನ್ನೋದು ಗೊತ್ತಾಗಿದೆ. ಈ ಕಾರಣಕ್ಕೆ ಮೊದಲ ದಿನ ನಡೆದ ಎಲಿಮಿನೇಷನ್​ನಲ್ಲಿ ಒಬ್ಬರಿಗೊಬ್ಬರು ಸಿಟ್ಟು ಕಾರಿದ್ದಾರೆ.

ಪ್ರಶಾಂತ್​ ಸಂಬರಗಿ ಎದುರು ಒಂದು ರೀತಿ ನಡೆದುಕೊಂಡು, ಹಿಂದಿನಿಂದ ಎಲ್ಲರಿಗೂ ಬಯ್ಯುತ್ತಿದ್ದರು. ಇದು ಅನೇಕರ ಕೋಪಕ್ಕೆ ಕಾರಣವಾಗಿದೆ. ನಿಧಿ, ರಘು ಸೇರಿ ಅನೇಕರು ಪ್ರಶಾಂತ್​ ಸಂಬರಗಿ ಫೋಟೋವನ್ನು ಬೆಂಕಿಗೆ ಹಾಕಿದ್ದಾರೆ. ಇನ್ನು, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ಮಂಜು ಪಾವಗಡ ವಿರುದ್ಧವೂ ಅನೇಕರು ಸಿಟ್ಟು ಮಾಡಿಕೊಂಡಿದ್ದಾರೆ. ಈ ಸಂಚಿಕೆ ಇಂದು ಪ್ರಸಾರವಾಗಲಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಬಗ್ಗೆ ಕಿಚ್ಚ ಸುದೀಪ್​ ಉತ್ಸಾಹದ ಮಾತು; ಹೆಚ್ಚು ಖುಷಿ ಆಗಿದ್ದು ನಟಿ ಜೆನಿಲಿಯಾ

Published On - 12:28 pm, Wed, 23 June 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ