ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಹೊತ್ತಿಕೊಂಡಿತು ದ್ವೇಷದ ಬೆಂಕಿ; ಪ್ರಶಾಂತ್ ಸಂಬರಗಿ ಫೋಟೋ ಸುಟ್ಟ ಸ್ಪರ್ಧಿಗಳು

ಕ್ಯಾಮೆರಾ ಎದುರು ಒಂದು ರೀತಿ ಮಾತನಾಡುತ್ತಿದ್ದ ಅನೇಕರು ಕ್ಯಾಮೆರಾ ಹಿಂದೆ ಮತ್ತೊಂದು ರೀತಿಯಲ್ಲಿ ಇರುತ್ತಿದ್ದರು. ಈಗ ಮನೆ ಸೇರಿರುವ ಎಲ್ಲರಿಗೂ ಯಾರು ಹೇಗೆ ಅನ್ನೋದು ಗೊತ್ತಾಗಿದೆ.

ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಹೊತ್ತಿಕೊಂಡಿತು ದ್ವೇಷದ ಬೆಂಕಿ; ಪ್ರಶಾಂತ್ ಸಂಬರಗಿ ಫೋಟೋ ಸುಟ್ಟ ಸ್ಪರ್ಧಿಗಳು
ಬಿಗ್ ಬಾಸ್ ಮನೆಯಲ್ಲಿ ಹೊತ್ತಿಕೊಂಡಿತು ದ್ವೇಷದ ಬೆಂಕಿ; ಪ್ರಶಾಂತ್ ಸಂಬರಗಿ ಫೋಟೋ ಸುಟ್ಟ ಸ್ಪರ್ಧಿಗಳು
Follow us
|

Updated on:Jun 23, 2021 | 12:30 PM

ಬಿಗ್​ ಬಾಸ್​ ಸ್ಪರ್ಧಿಗಳು ಏನೇ ಮಾತನಾಡಿಕೊಂಡರೂ ಅದು ಕ್ಯಾಮೆರಾ ಹಾಗೂ ಪ್ರೇಕ್ಷಕರ ನಡುವೆ ಮಾತ್ರ ಇರುತ್ತದೆ. ಸ್ಪರ್ಧಿಗಳು ಸೀಕ್ರೆಟ್​ ಆಗಿ ಏನೇ ಮಾತನಾಡಿಕೊಂಡರು ಮತ್ತೊಂದು ಸ್ಪರ್ಧಿಗೆ ಅದು ತಿಳಿಯುವುದಿಲ್ಲ. ಇದು ಬಿಗ್​ ಬಾಸ್​ ಮನೆಯ ಅಲಿಖಿತ ನಿಯಮ. ಆದರೆ, ಇದೇ ಮೊದಲ ಬಾರಿಗೆ ಈ ನಿಯಮ ಮುರಿಯಲ್ಪಟ್ಟಿದೆ. ಎಲ್ಲಾ ಸ್ಪರ್ಧಿಗಳು 70 ದಿನದ ಎಪಿಸೋಡ್​ಗಳನ್ನು ನೋಡಿ ಮತ್ತೆ ಬಿಗ್​ ಬಾಸ್​ ಮನೆ ಒಳಗೆ ಹೋಗಿದ್ದಾರೆ. ಪರಿಣಾಮ ಮನೆಯಲ್ಲಿ ಮೊದಲ ದಿನವೇ ದೊಡ್ಡ ಬೆಂಕಿ ಹೊತ್ತಿಕೊಂಡಿದೆ.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದಿದ್ದಾರೆ. ಈ ಸಂಚಿಕೆ ಇಂದು (ಜೂನ್​ 23) ಪ್ರಸಾರವಾಗಲಿದೆ. ವಿಶೇಷ ಎಂದರೆ, ಮೊದಲ ದಿನವೇ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಷನ್​ ನಡೆದಿದೆ. ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

ಕ್ಯಾಮೆರಾ ಎದುರು ಒಂದು ರೀತಿ ಮಾತನಾಡುತ್ತಿದ್ದ ಅನೇಕರು ಕ್ಯಾಮೆರಾ ಹಿಂದೆ ಮತ್ತೊಂದು ರೀತಿಯಲ್ಲಿ ಇರುತ್ತಿದ್ದರು. ಈಗ ಮನೆ ಸೇರಿರುವ ಎಲ್ಲರಿಗೂ ಯಾರು ಹೇಗೆ ಅನ್ನೋದು ಗೊತ್ತಾಗಿದೆ. ಈ ಕಾರಣಕ್ಕೆ ಮೊದಲ ದಿನ ನಡೆದ ಎಲಿಮಿನೇಷನ್​ನಲ್ಲಿ ಒಬ್ಬರಿಗೊಬ್ಬರು ಸಿಟ್ಟು ಕಾರಿದ್ದಾರೆ.

ಪ್ರಶಾಂತ್​ ಸಂಬರಗಿ ಎದುರು ಒಂದು ರೀತಿ ನಡೆದುಕೊಂಡು, ಹಿಂದಿನಿಂದ ಎಲ್ಲರಿಗೂ ಬಯ್ಯುತ್ತಿದ್ದರು. ಇದು ಅನೇಕರ ಕೋಪಕ್ಕೆ ಕಾರಣವಾಗಿದೆ. ನಿಧಿ, ರಘು ಸೇರಿ ಅನೇಕರು ಪ್ರಶಾಂತ್​ ಸಂಬರಗಿ ಫೋಟೋವನ್ನು ಬೆಂಕಿಗೆ ಹಾಕಿದ್ದಾರೆ. ಇನ್ನು, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ಮಂಜು ಪಾವಗಡ ವಿರುದ್ಧವೂ ಅನೇಕರು ಸಿಟ್ಟು ಮಾಡಿಕೊಂಡಿದ್ದಾರೆ. ಈ ಸಂಚಿಕೆ ಇಂದು ಪ್ರಸಾರವಾಗಲಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಬಗ್ಗೆ ಕಿಚ್ಚ ಸುದೀಪ್​ ಉತ್ಸಾಹದ ಮಾತು; ಹೆಚ್ಚು ಖುಷಿ ಆಗಿದ್ದು ನಟಿ ಜೆನಿಲಿಯಾ

Published On - 12:28 pm, Wed, 23 June 21

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್