AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಹೊತ್ತಿಕೊಂಡಿತು ದ್ವೇಷದ ಬೆಂಕಿ; ಪ್ರಶಾಂತ್ ಸಂಬರಗಿ ಫೋಟೋ ಸುಟ್ಟ ಸ್ಪರ್ಧಿಗಳು

ಕ್ಯಾಮೆರಾ ಎದುರು ಒಂದು ರೀತಿ ಮಾತನಾಡುತ್ತಿದ್ದ ಅನೇಕರು ಕ್ಯಾಮೆರಾ ಹಿಂದೆ ಮತ್ತೊಂದು ರೀತಿಯಲ್ಲಿ ಇರುತ್ತಿದ್ದರು. ಈಗ ಮನೆ ಸೇರಿರುವ ಎಲ್ಲರಿಗೂ ಯಾರು ಹೇಗೆ ಅನ್ನೋದು ಗೊತ್ತಾಗಿದೆ.

ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಹೊತ್ತಿಕೊಂಡಿತು ದ್ವೇಷದ ಬೆಂಕಿ; ಪ್ರಶಾಂತ್ ಸಂಬರಗಿ ಫೋಟೋ ಸುಟ್ಟ ಸ್ಪರ್ಧಿಗಳು
ಬಿಗ್ ಬಾಸ್ ಮನೆಯಲ್ಲಿ ಹೊತ್ತಿಕೊಂಡಿತು ದ್ವೇಷದ ಬೆಂಕಿ; ಪ್ರಶಾಂತ್ ಸಂಬರಗಿ ಫೋಟೋ ಸುಟ್ಟ ಸ್ಪರ್ಧಿಗಳು
ರಾಜೇಶ್ ದುಗ್ಗುಮನೆ
|

Updated on:Jun 23, 2021 | 12:30 PM

Share

ಬಿಗ್​ ಬಾಸ್​ ಸ್ಪರ್ಧಿಗಳು ಏನೇ ಮಾತನಾಡಿಕೊಂಡರೂ ಅದು ಕ್ಯಾಮೆರಾ ಹಾಗೂ ಪ್ರೇಕ್ಷಕರ ನಡುವೆ ಮಾತ್ರ ಇರುತ್ತದೆ. ಸ್ಪರ್ಧಿಗಳು ಸೀಕ್ರೆಟ್​ ಆಗಿ ಏನೇ ಮಾತನಾಡಿಕೊಂಡರು ಮತ್ತೊಂದು ಸ್ಪರ್ಧಿಗೆ ಅದು ತಿಳಿಯುವುದಿಲ್ಲ. ಇದು ಬಿಗ್​ ಬಾಸ್​ ಮನೆಯ ಅಲಿಖಿತ ನಿಯಮ. ಆದರೆ, ಇದೇ ಮೊದಲ ಬಾರಿಗೆ ಈ ನಿಯಮ ಮುರಿಯಲ್ಪಟ್ಟಿದೆ. ಎಲ್ಲಾ ಸ್ಪರ್ಧಿಗಳು 70 ದಿನದ ಎಪಿಸೋಡ್​ಗಳನ್ನು ನೋಡಿ ಮತ್ತೆ ಬಿಗ್​ ಬಾಸ್​ ಮನೆ ಒಳಗೆ ಹೋಗಿದ್ದಾರೆ. ಪರಿಣಾಮ ಮನೆಯಲ್ಲಿ ಮೊದಲ ದಿನವೇ ದೊಡ್ಡ ಬೆಂಕಿ ಹೊತ್ತಿಕೊಂಡಿದೆ.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದಿದ್ದಾರೆ. ಈ ಸಂಚಿಕೆ ಇಂದು (ಜೂನ್​ 23) ಪ್ರಸಾರವಾಗಲಿದೆ. ವಿಶೇಷ ಎಂದರೆ, ಮೊದಲ ದಿನವೇ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಷನ್​ ನಡೆದಿದೆ. ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

ಕ್ಯಾಮೆರಾ ಎದುರು ಒಂದು ರೀತಿ ಮಾತನಾಡುತ್ತಿದ್ದ ಅನೇಕರು ಕ್ಯಾಮೆರಾ ಹಿಂದೆ ಮತ್ತೊಂದು ರೀತಿಯಲ್ಲಿ ಇರುತ್ತಿದ್ದರು. ಈಗ ಮನೆ ಸೇರಿರುವ ಎಲ್ಲರಿಗೂ ಯಾರು ಹೇಗೆ ಅನ್ನೋದು ಗೊತ್ತಾಗಿದೆ. ಈ ಕಾರಣಕ್ಕೆ ಮೊದಲ ದಿನ ನಡೆದ ಎಲಿಮಿನೇಷನ್​ನಲ್ಲಿ ಒಬ್ಬರಿಗೊಬ್ಬರು ಸಿಟ್ಟು ಕಾರಿದ್ದಾರೆ.

ಪ್ರಶಾಂತ್​ ಸಂಬರಗಿ ಎದುರು ಒಂದು ರೀತಿ ನಡೆದುಕೊಂಡು, ಹಿಂದಿನಿಂದ ಎಲ್ಲರಿಗೂ ಬಯ್ಯುತ್ತಿದ್ದರು. ಇದು ಅನೇಕರ ಕೋಪಕ್ಕೆ ಕಾರಣವಾಗಿದೆ. ನಿಧಿ, ರಘು ಸೇರಿ ಅನೇಕರು ಪ್ರಶಾಂತ್​ ಸಂಬರಗಿ ಫೋಟೋವನ್ನು ಬೆಂಕಿಗೆ ಹಾಕಿದ್ದಾರೆ. ಇನ್ನು, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ಮಂಜು ಪಾವಗಡ ವಿರುದ್ಧವೂ ಅನೇಕರು ಸಿಟ್ಟು ಮಾಡಿಕೊಂಡಿದ್ದಾರೆ. ಈ ಸಂಚಿಕೆ ಇಂದು ಪ್ರಸಾರವಾಗಲಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಬಗ್ಗೆ ಕಿಚ್ಚ ಸುದೀಪ್​ ಉತ್ಸಾಹದ ಮಾತು; ಹೆಚ್ಚು ಖುಷಿ ಆಗಿದ್ದು ನಟಿ ಜೆನಿಲಿಯಾ

Published On - 12:28 pm, Wed, 23 June 21

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ