AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಕೋಪಕ್ಕೆ ಬೆಚ್ಚಿದ ಬಿಗ್​ ಬಾಸ್​ ಮಂದಿ; ಚಂದ್ರಚೂಡ್​ಗೆ ಖಡಕ್​ ವಾರ್ನಿಂಗ್​

Priyanka Thimmesh: ಪ್ರಿಯಾಂಕಾ ತಿಮ್ಮೇಶ್​ ಅವರ ಕೋಪವನ್ನು ಕಂಡು ಬಿಗ್​ ಬಾಸ್​ ಮನೆಯ ಸದಸ್ಯರಿಗೆ ನಿಜಕ್ಕೂ ಶಾಕ್​ ಆಗಿದೆ. ಇದೇ ಮೊದಲ ಬಾರಿಗೆ ಅವರು ಉಗ್ರಾವತಾರ ತಾಳಿದ್ದಾರೆ.

ಪ್ರಿಯಾಂಕಾ ಕೋಪಕ್ಕೆ ಬೆಚ್ಚಿದ ಬಿಗ್​ ಬಾಸ್​ ಮಂದಿ; ಚಂದ್ರಚೂಡ್​ಗೆ ಖಡಕ್​ ವಾರ್ನಿಂಗ್​
ಪ್ರಿಯಾಂಕಾ ತಿಮ್ಮೇಶ್​
TV9 Web
| Updated By: ಮದನ್​ ಕುಮಾರ್​|

Updated on: Jul 04, 2021 | 2:09 PM

Share

ಇಷ್ಟು ದಿನಗಳ ಕಾಲ ನಟಿ ಪ್ರಿಯಾಂಕಾ ತಿಮ್ಮೇಶ್​ ಅವರು ಬಿಗ್​ ಬಾಸ್​ ಮನೆಯಲ್ಲಿ ಸಾಧ್ಯವಾದಷ್ಟು ಸೈಲೆಂಟ್​ ಆಗಿದ್ದರು. ಯಾರು ಏನೇ ಹೇಳಿದರೂ ಅದನ್ನು ತಾಳ್ಮೆಯಿಂದ ನಿಭಾಯಿಸಿಕೊಂಡು ಸಾಗುತ್ತಿದ್ದರು. ಆದರೆ ಅವರ ತಾಳ್ಮೆಗೂ ಒಂದು ಮಿತಿ ಇದೆ. ಇದೇ ಮೊದಲ ಬಾರಿಗೆ ಪ್ರಿಯಾಂಕಾ ತಿಮ್ಮೇಶ್​ ಅವರು ದೊಡ್ಮನೆಯೊಳಗೆ ಉಗ್ರಾವತಾರ ತೋರಿದ್ದಾರೆ. ಸಿಟ್ಟಿನಿಂದ ಇಡೀ ಮನೆಯನ್ನೇ ಬೆಚ್ಚಿಬೀಳಿಸಿದ್ದಾರೆ. ತಮ್ಮ ಬಗ್ಗೆ ಇಲ್ಲಸಲ್ಲದ ಮಾತನಾಡಿದ ಚಕ್ರವರ್ತಿ ಚಂದ್ರಚೂಡ್​ಗೆ ಖಡಕ್​ ಆಗಿ ವಾರ್ನಿಂಗ್​ ನೀಡಿದ್ದಾರೆ.

ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿರುವ ಹೊಸ ಪ್ರೋಮೋದಲ್ಲಿ ಈ ಎಲ್ಲ ಅಂಶಗಳು ಬಯಲಾಗಿವೆ. ಇಂದು (ಜು.4) ಪ್ರಸಾರ ಆಗಲಿರುವ ಎಪಿಸೋಡ್​ನಲ್ಲಿ ಅದರ ವಿವರಣೆ ಸಿಗಲಿದೆ. ಅಷ್ಟಕ್ಕೂ ಹೀಗೆ ಪ್ರಿಯಾಂಕಾ ತಿಮ್ಮೇಶ್​ ಕೋಪಗೊಳ್ಳಲು ಕಾರಣವೇನು? ಚಕ್ರವರ್ತಿ ಚಂದ್ರಚೂಡ್​ ಮಾತು! ಹೌದು, ಬಿಗ್​ ಬಾಸ್​ನಲ್ಲಿ ಇರುವ ಎಲ್ಲರ ಬಗ್ಗೆಯೂ ಚಂದ್ರಚೂಡ್​ ಕಮೆಂಟ್​ ಮಾಡುತ್ತಾರೆ. ಇತ್ತೀಚೆಗೆ ಪ್ರಿಯಾಂಕಾ ಬಗ್ಗೆಯೂ ಅವರು ಮಾತನಾಡಿದ್ದಾರೆ. ಅದರಿಂದ ಪ್ರಿಯಾಂಕಾಗೆ ವಿಪರೀತ ಕೋಪ ಬಂದಿದೆ.

ಚಂದ್ರಚೂಡ್​ ಅವರ ಮಾತುಗಳಿಂದ ಮೊದಲಿಗೆ ಪ್ರಿಯಾಂಕಾ ಕಣ್ಣೀರು ಹಾಕಿದರು. ‘ನಾನು ಮತ್ತು ಶಮಂತ್​ ಏನೇ ಮಾಡಿದರೂ ಅದನ್ನು ಕೇಳೋಕೆ ಇವರು ಯಾರು’ ಎಂದು ಅಳುತ್ತಲೇ ತಮ್ಮ ನೋವು ತೋಡಿಕೊಂಡರು. ಆದರೆ ಅವರ ಮಾತಿಗೆ ಚಂದ್ರಚೂಡ್​ ಮತ್ತೆ ಪ್ರತ್ಯುತ್ತರ ನೀಡಲು ಬಂದಾಗ ಅವರ ತಾಳ್ಮೆಯ ಕಟ್ಟೆ ಒಡೆದಿದೆ.

‘ಕಣ್ಣಲ್ಲಿ ನೀರು ಹಾಕಿಕೊಂಡು ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಅದೆಲ್ಲ ನಿಜವಾಗುವುದಿಲ್ಲ’ ಎಂದು ಚಕ್ರವರ್ತಿ ಏರು ಧ್ವನಿಯಲ್ಲಿ ಮಾತನಾಡಿದರು. ಅದಕ್ಕೆ ತಿರುಗೇಟು ನೀಡಿದ ಪ್ರಿಯಾಂಕಾ, ‘ನಾನು ಕಣ್ಣೀರು ಹಾಕಿಕೊಂಡು ನಾಟಕ ಮಾಡುತ್ತಿಲ್ಲ. ಬಾಯಿ ಮುಚ್ಚಿದರೆ ಸರಿ’ ಎಂದು ಕಿರುಚಾಡಿದರು.

ಅವರ ಕೋಪವನ್ನು ಕಂಡು ಬಿಗ್​ ಬಾಸ್​ ಮನೆಯ ಸದಸ್ಯರಿಗೆ ನಿಜಕ್ಕೂ ಶಾಕ್​ ಆಗಿದೆ. ಇದೇ ಮೊದಲ ಬಾರಿಗೆ ಅವರು ಉಗ್ರಾವತಾರ ತಾಳಿದ್ದಾರೆ.

ಇದನ್ನೂ ಓದಿ:

‘ಪತ್ರವಳ್ಳಿ ಪದಕ್ಕೆ ನೀವು ಹೇಳಿದ ಅರ್ಥ ಯಾವ ಡಿಕ್ಷನರಿಯಲ್ಲೂ ಸಿಕ್ಕಿಲ್ಲ’; ಚಕ್ರವರ್ತಿಗೆ ಸುದೀಪ್​ ತಿರುಗೇಟು

ಹೆಗಲಮೇಲೆ ಕೈ ಹಾಕಲು ಬಂದ ಪ್ರಶಾಂತ್​ರನ್ನು ಸಿಟ್ಟಿನಿಂದ ತಳ್ಳಿದ ಚಕ್ರವರ್ತಿ; ಇಬ್ಬರ ನಡುವೆ ಮೂಡಿತು ವೈಮನಸ್ಸು

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ