AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ರಘುಗೆ ವೋಟ್​ ಹಾಕಿ ಅಂತಿದ್ದಾರಾ ದ್ರಾವಿಡ್​, ಶಿವಣ್ಣ, ಪುನೀತ್​, ಡಾಲಿ? ಇದಪ್ಪಾ ಕ್ರಿಯೇಟಿವಿಟಿ ಅಂದ್ರೆ!

BBK8: ಬಿಗ್​ ಬಾಸ್​ ಮನೆಯೊಳಗೆ ಕೀಳರಿಮೆ ಕಾಡುತ್ತಿದೆ ಎಂದು ಹೇಳಿದ್ದ ರಘು ಪರವಾಗಿ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಮಾತನಾಡುತ್ತಿರುವ ರೀತಿಯ ಒಂದು ವಿಡಿಯೋ ವೈರಲ್​ ಆಗಿದೆ. ಇದರ ಹಿಂದಿನ ಗುಟ್ಟೇನು?

Bigg Boss Kannada: ರಘುಗೆ ವೋಟ್​ ಹಾಕಿ ಅಂತಿದ್ದಾರಾ ದ್ರಾವಿಡ್​, ಶಿವಣ್ಣ, ಪುನೀತ್​, ಡಾಲಿ? ಇದಪ್ಪಾ ಕ್ರಿಯೇಟಿವಿಟಿ ಅಂದ್ರೆ!
ರಘು - ಬಿಗ್​ ಬಾಸ್​ ಕನ್ನಡ ಸೀಸನ್​ 8
ಮದನ್​ ಕುಮಾರ್​
|

Updated on: Mar 18, 2021 | 1:20 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಾತಾವರಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸ್ಪರ್ಧಿಗಳ ನಡುವಿನ ಪೈಪೋಟಿಯೂ ಜೋರಾಗಿದೆ. ಮನೆಯೊಳಗೆ ಒಂದು ಹಣಾಹಣಿ ನಡೆದಿದ್ದರೆ, ಮನೆಯ ಹೊರಗೂ ಕೂಡ ಬೇರೊಂದು ರೀತಿಯ ಜಟಾಪಟಿ ಏರ್ಪಟ್ಟಿದೆ. ಅದರಲ್ಲಿ ರಘು ಒಂದು ಹೆಜ್ಜೆ ಮುಂದೆ ಇದ್ದಾರೆ!

ಹೌದು, ಬಿಗ್​ ಬಾಸ್​ ಮನೆಯೊಳಗೆ ಇರುವ ಸ್ಪರ್ಧಿಗಳಿಗೆ ವೋಟ್​ ಮಾಡಿ ಎಂದು ಸೋಶಿಯಲ್​ ಮೀಡಿಯಾದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಸ್ಪರ್ಧಿಗಳ ಫೇಸ್​ಬುಕ್​, ಇನ್​ಸ್ಟಾಗ್ರಾಮ್​, ಟ್ವಿಟರ್​ ಖಾತೆಗಳನ್ನು ಅವರ ಆಪ್ತರು ಹ್ಯಾಂಡಲ್​ ಮಾಡುತ್ತಿದ್ದು, ಅವುಗಳ ಮೂಲಕ ವೋಟ್​ ಮಾಡುವಂತೆ ಜನರ ಮನವೊಲಿಸಲಾಗುತ್ತಿದೆ. ಅಚ್ಚರಿ ಎಂದರೆ ರಘು ಪರವಾಗಿ ಕರುನಾಡಿನ ಘಟಾನುಘಟಿ ಸೆಲೆಬ್ರಿಟಿಗಳೆಲ್ಲ ಮಾತನಾಡಿದಂತಿರುವ ಒಂದು ವಿಡಿಯೋ ಸಖತ್​ ವೈರಲ್​ ಆಗಿದೆ!

ಈ ವಿಡಿಯೋನಲ್ಲಿ ಶಿವರಾಜ್​ಕುಮಾರ್​, ರಮೇಶ್​ ಅರವಿಂದ್​, ಮಾಜಿ ಕ್ರಿಕೆಟರ್​ ರಾಹುಲ್​ ದ್ರಾವಿಡ್​, ಡಾಲಿ ಧನಂಜಯ, ಮಾಸ್ಟರ್​ ಆನಂದ್, ಚಂದನ್​ ಶೆಟ್ಟಿ, ಪುನೀತ್​ ರಾಜ್​ಕುಮಾರ್​, ರವಿಶಂಕರ್​, ರವಿಚಂದ್ರನ್​ ಮುಂತಾದವರು ವೋಟ್​ ಮಾಡಿ ಎಂದು ಹೇಳಿದ್ದಾರೆ! ಈ ವಿಡಿಯೋವನ್ನು ರಘು ಅವರ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಶೇರ್​ ಮಾಡಿಕೊಳ್ಳಲಾಗಿದೆ. ಹಾಗಂತ ನಿಜಕ್ಕೂ ಅವರೆಲ್ಲರು ರಘುಗೆ ಓಟ್​ ಮಾಡಿ ಎಂದು ಕೇಳಿಕೊಂಡಿದ್ದಾರಾ? ಖಂಡಿತಾ ಇಲ್ಲ. ಅದರ ಅಸಲಿಯತ್ತು ಬೇರೆಯೇ ಇದೆ.

ಈ ಹಿಂದಿನ ಸಾರ್ವತ್ರಿಕ ಚುನಾವಣೆಗಳ ಸಮಯದಲ್ಲಿ ಬಹುತೇಕ ಎಲ್ಲ ಸೆಲೆಬ್ರಿಟಿಗಳು ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದರು. ಮತದಾನದ ಮಹತ್ವವನ್ನು ಜನರಿಗೆ ತಿಳಿಸಿ, ನೀವೂ ಕೂಡ ವೋಟ್​ ಮಾಡಿ ಎಂದು ವಿಡಿಯೋ ಮೂಲಕ ಸಂದೇಶ ನೀಡಿದ್ದರು. ಆ ವಿಡಿಯೋಗಳಲ್ಲಿ ಸೆಲೆಬ್ರಿಟಿಗಳು ಹೇಳಿದ ‘ತಪ್ಪದೇ ವೋಟ್​ ಮಾಡಿ..’ ಎಂಬ ತುಣುಕನ್ನು ಮಾತ್ರ ಇಟ್ಟುಕೊಂಡು, ರಘು ಪರವಾಗಿ ವೋಟ್​ ಮಾಡಿ ಎಂದು ಅರ್ಥ ಬರುವ ರೀತಿಯಲ್ಲಿ ಎಡಿಟ್​ ಮಾಡಲಾಗಿದೆ. ಆ ವಿಡಿಯೋ ಈಗ ರಘು ಅವರು ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಪೋಸ್ಟ್​ ಆಗಿದ್ದು, ಸಖತ್​ ವೈರಲ್​ ಆಗುತ್ತಿದೆ.

ಸದ್ಯ 15 ಜನರ ನಡುವೆ ಬಿಗ್​ ಬಾಸ್​ ಆಟ ಮುಂದುವರಿದಿದೆ. ಈ ವಾರ ರಾಜೀವ್​ ಕ್ಯಾಪ್ಟನ್​ ಆಗಿ ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಈ ವಾರ ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಗೀತಾ ಭಾರತಿ ಭಟ್​, ರಘು, ಅರವಿಂದ್, ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್ ಹಾಗೂ ಪ್ರಶಾಂತ್​ ಸಂಬರಗಿ ನಾಮಿನೇಟ್​ ಆಗಿದ್ದಾರೆ. ಹೇಗಾದರೂ ಮಾಡಿ ವೀಕ್ಷಕರಿಂದ ಹೆಚ್ಚಿನ ವೋಟ್​ ಪಡೆಯಬೇಕೆಂದು ಎಲ್ಲಿಲ್ಲದ ಕಸರತ್ತು ಮಾಡುತ್ತಿದ್ದಾರೆ.

ಇದನ್ನೂ ಓದಿ: ದಿವ್ಯಾ ಉರುಡುಗ ಮದುವೆ ಆಗುವ ಹುಡುಗ ಹೇಗಿರಬೇಕು​? ಬಿಗ್​ ಬಾಸ್​ನಲ್ಲಿ ಸತ್ಯ ಬಾಯ್ಬಿಟ್ಟ ಮಲೆನಾಡ ಹುಡುಗಿ!

ರಹಸ್ಯವಾಗಿ ಮೊಬೈಲ್​ ಬಳಸ್ತಿದ್ದಾರಾ ಬಿಗ್​ ಬಾಸ್​ ಸ್ಪರ್ಧಿಗಳು? ಜನರ ಅನುಮಾನಕ್ಕೆ ಇಲ್ಲಿದೆ ಉತ್ತರ!

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ