AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಿನೇಷನ್​​ನಲ್ಲಿ ಅರವಿಂದ್ ಬಿಟ್ಟು ಶುಭಾ ಅವರನ್ನು ದಿವ್ಯಾ ಉರುಡುಗ ಸೇವ್​ ಮಾಡಿದ್ದೇಕೆ?

ದಿವ್ಯಾ ಉರುಡುಗ ಮನೆಯ ಕ್ಯಾಪ್ಟನ್​. ಅರವಿಂದ್ ಅವರು ನೇರವಾಗಿ ನಾಮಿನೇಟ್​ ಆಗಿದ್ದಾರೆ. ಈ ಇಬ್ಬರು ಸದಸ್ಯರನ್ನು ಬಿಟ್ಟು ಉಳಿದವರ ಹೆಸರನ್ನು ಆಯ್ಕೆ ಮಾಡಬೇಕಿತ್ತು.

ನಾಮಿನೇಷನ್​​ನಲ್ಲಿ ಅರವಿಂದ್ ಬಿಟ್ಟು ಶುಭಾ ಅವರನ್ನು ದಿವ್ಯಾ ಉರುಡುಗ ಸೇವ್​ ಮಾಡಿದ್ದೇಕೆ?
ಅರವಿಂದ್​ ಕೆಪಿ, ದಿವ್ಯಾ ಉರುಡುಗ
TV9 Web
| Edited By: |

Updated on: Jul 06, 2021 | 7:05 AM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಎರಡನೇ ಇನ್ನಿಂಗ್ಸ್​ನಲ್ಲಿ ಮೊದಲ ಎಲಿಮಿನೇಷನ್​​ ನಡೆದಿದೆ. ಇದಾದ ಮರುದಿನವೇ ಎರಡನೇ ಎಲಿಮಿನೇಷನ್​ಗೆ ನಾಮಿನೇಷನ್​​​ ನಡೆದಿದೆ. ಮನೆಯ ಬಹುತೇಕ ಸದಸ್ಯರು ಈ ವಾರ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ. ಈ ಮೂಲಕ ಎಲ್ಲಾ ಸ್ಪರ್ಧಿಗಳು ಅತ್ಯುತ್ತಮವಾಗಿ ಪರ್ಫಾರ್ಮೆನ್ಸ್​ ಮಾಡೋದು ಅನಿವಾರ್ಯವಾಗಿದೆ.  

ದಿವ್ಯಾ ಉರುಡುಗ ಮನೆಯ ಕ್ಯಾಪ್ಟನ್​. ಅರವಿಂದ್ ಅವರು ನೇರವಾಗಿ ನಾಮಿನೇಟ್​ ಆಗಿದ್ದಾರೆ. ಈ ಇಬ್ಬರು ಸದಸ್ಯರನ್ನು ಬಿಟ್ಟು ಉಳಿದವರ ಹೆಸರನ್ನು ಆಯ್ಕೆ ಮಾಡಬೇಕಿತ್ತು. ನಾಮಿನೇಷನ್​ ವೇಳೆ ಚಕ್ರವರ್ತಿ ಚಂದ್ರಚೂಡ್​ಗೆ ಹೆಚ್ಚು ಮತಗಳು ಬಿದ್ದವು. ಚಕ್ರವರ್ತಿ ಮನೆಯ ವಾತಾವರಣ ಹಾಳು ಮಾಡುತ್ತಿದ್ದಾರೆ, ಅವರಲ್ಲಿ ಕೋಪ ಜಾಸ್ತಿ ಎಂಬಿತ್ಯಾದಿ ಆರೋಪಗಳು ಬಂದವು.

ಮನೆಯಲ್ಲಿ ಸ್ಟ್ರಾಂಗ್​ ಸ್ಪರ್ಧಿ ಎನಿಸಿಕೊಂಡಿರುವ ಮಂಜು ಪಾವಗಡ ನಂತರದ ಸ್ಥಾನ ಪಡೆದುಕೊಂಡರು. ಅವರು ತಮ್ಮದೇ ನಿಯಮ ಮಾಡಿಕೊಂಡು ಆಡುತ್ತಿದ್ದಾರೆ, ಗುಂಪುಗಾರಿಕೆ ಹುಟ್ಟು ಹಾಕುತ್ತಿದ್ದಾರೆ, ಸ್ಟ್ರಾಂಗ್​ ಪ್ಲೇಯರ್​ ಎಂಬಿತ್ಯಾದಿ ಆರೋಪಗಳು ಅವರ ವಿರುದ್ಧ ಕೇಳಿ ಬಂದವು.

ಪ್ರಿಯಾಂಕಾ ತಿಮ್ಮೇಶ್ ತುಂಬಾ ಅವಕಾಶವಾದಿ, ಅವರು ಚೆನ್ನಾಗಿ ಆಡಬಹುದಿತ್ತು ಎಂದು ಕೆಲವರು ನಾಮಿನೇಟ್​ ಮಾಡಿದರು. ಪ್ರಶಾಂತ್​ ಸಂಬರಗಿ, ಶುಭಾ ಪೂಂಜಾ, ರಘು, ಶಮಂತ್, ದಿವ್ಯಾ ಸುರೇಶ್​, ವೈಷ್ಣವಿ ಅವರ ಹೆಸರು ನಾಮಿನೇಷನ್​ ಪಟ್ಟಿ ಸೇರಿಕೊಂಡವು.

ಕ್ಯಾಪ್ಟನ್​ ಆದ ಕಾರಣ ದಿವ್ಯಾ ಉರುಡುಗ ಅವರಿಗೆ ಒಬ್ಬರನ್ನು ಸೇವ್​ ಮಾಡೋಕೆ ಅವಕಾಶ ನೀಡಲಾಯಿತು. ಈ ವೇಳೆ ದಿವ್ಯಾ, ‘ಶುಭಾ ಪೂಂಜಾ ಸೇವ್​ ಮಾಡ್ತೀನಿ. ಅವರು ನನಗೆ ವೈಯಕ್ತಿಕವಾಗಿ ಇಷ್ಟ. ಅವರು ಇನ್ನೂ ಮುಂದೆ ಹೋಗಬೇಕು ಅಂತ ನಂಗೆ ಇಷ್ಟ’ ಎಂದು ಸೇವ್​ ಮಾಡಿದರು. ಅರವಿಂದ್​ ನೇರವಾಗಿ ನಾಮಿನೇಟ್​ ಆದ್ದರಿಂದ ಅವರನ್ನು ಸೇವ್​ ಮಾಡುವ ಅವಕಾಶವನ್ನು ಬಿಗ್​ ಬಾಸ್ ನೀಡಿಲ್ಲ.

ಹೀಗಾಗಿ ಈ ವಾರ ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​, ರಘು ಗೌಡ, ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ.

ಇದನ್ನೂ ಓದಿ:

‘ಮಂಜು ಬೆಂಬಲಿಗರ ವೋಟ್​ ನಂಗೆ ಸಿಗಲ್ಲ’; ದಿವ್ಯಾ ಸುರೇಶ್​ ಲೆಕ್ಕಾಚಾರ ಉಲ್ಟಾಪಲ್ಟಾ

Divya Uruduga: ಕನ್ನಡ ಬಿಗ್​ ಬಾಸ್​ ಸೀಸನ್​ 8ರಲ್ಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ