ಬಿಗ್​ ಬಾಸ್​ನಿಂದ ರಘು ಎಲಿಮಿನೇಟ್​ ಆಗೋಕೆ ಕಾರಣವಾಯ್ತು ಈ ಒಂದು ವಿಚಾರ 

ಈ ವಾರ ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​, ರಘು ಗೌಡ, ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿತ್ತು.

ಬಿಗ್​ ಬಾಸ್​ನಿಂದ ರಘು ಎಲಿಮಿನೇಟ್​ ಆಗೋಕೆ ಕಾರಣವಾಯ್ತು ಈ ಒಂದು ವಿಚಾರ 
ರಘು - ಬಿಗ್ ಬಾಸ್​ ಕನ್ನಡ ಸೀಸನ್​ 8
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 12, 2021 | 3:51 PM

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನ ಎರಡನೇ ಎಲಿಮಿನೇಷನ್​ ನಡೆದಿದೆ. ರಘು ಗೌಡ ಬಿಗ್​ ಬಾಸ್​​ನಿಂದ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ಬಿಗ್​ ಬಾಸ್​ನಲ್ಲಿ ಹನ್ನೊಂದು ಇದ್ದ ಸ್ಪರ್ಧಿಗಳ ಸಂಖ್ಯೆ ಹತ್ತಾಗಿದೆ. ಈ ವಾರ ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​, ರಘು ಗೌಡ, ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿತ್ತು.

ಮೊದಲು ಮಂಜು ಸೇವ್​ ಆದರು. ನಂತರ ಅರವಿಂದ್, ವೈಷ್ಣವಿ ಗೌಡ, ದಿವ್ಯಾ ಸುರೇಶ್​, ಪ್ರಶಾಂತ್​ ಸಂಬರಗಿ,  ಶಮಂತ್​ ಬ್ರೋ ಗೌಡ, ಪ್ರಿಯಾಂಕ ತಿಮ್ಮೇಶ್​ ಸೇವ್​ ಆದರು. ಕೊನೆಯಲ್ಲಿ ಚಕ್ರವರ್ತಿ ಹಾಗೂ ರಘು ಉಳಿದುಕೊಂಡರು. ಚಕ್ರವರ್ತಿ ಸೇವ್​ ಆಗಿ, ರಘು ಔಟ್​ ಆದರು.

ಈ ವಾರ ಬಿಗ್​ ಬಾಸ್​ ಮನೆಯಲ್ಲಿ ರಘು ಅಷ್ಟಾಗಿ ಆ್ಯಕ್ಟಿವ್​ ಆಗಿರಲಿಲ್ಲ. ಅವರು ಅರವಿಂದ್​ಗೆ ಹೆದರುತ್ತಾರೆ ಎನ್ನುವ ಮಾತು ಕೂಡ ಕೇಳಿಬಂತು. ಪ್ರಶಾಂತ್​ ಅವರು ರಘು ಪರ ಮಾತನಾಡಿದ್ದರೂ ರಘು ಈ ವಿಚಾರದಲ್ಲಿ ಮೌನ ವಹಿಸಿದ್ದರು. ಎಲ್ಲಿಯೂ ಅವರು ಅಷ್ಟಾಗಿ  ಮಾತನಾಡಿಲ್ಲ. ಈ ಕಾರಣಕ್ಕೆ ಅವರಿಗೆ ಕಡಿಮೆ ಮತ ಬಿದ್ದಿದೆ ಎನ್ನಲಾಗುತ್ತಿದೆ. ಈಗ ಎರಡನೇ ಇನ್ನಿಂಗ್ಸ್​ನ ಎರಡನೇ ಸ್ಪರ್ಧಿಯಾಗಿ ರಘು ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ಬಿಗ್​ ಬಾಸ್ ಮನೆಯಲ್ಲಿ ಅವರ 91 ದಿನಗಳ ಪ್ರಯಾಣ ಪೂರ್ಣಗೊಂಡಿದೆ.

ಇನ್ನು, ಉಳಿದ ಸ್ಪರ್ಧಿಗಳಿಗೆ ಹೋಲಿಸಿದರೆ ರಘು ಡಲ್​ ಆಗಿ ಕಾಣುತ್ತಿದ್ದರು. ಚಕ್ರವರ್ತಿ ಹಾಗೂ ಪ್ರಶಾಂತ್​ ಮನೆಯಲ್ಲಿ ಮಾತಿನ ಮೂಲಕ ಗಮನ ಸೆಳೆಯುತ್ತಿದ್ದಾರೆ. ಶಮಂತ್​, ಪ್ರಿಯಾಂಕಾ ತಿಮ್ಮೇಶ್​  ಕೂಡ ಎಲ್ಲರನ್ನೂ ಎಂಟರ್​ಟೇನ್​ ಮಾಡುತ್ತಿದ್ದಾರೆ. ಉಳಿದವರು ಸ್ಟ್ರಾಂಗ್​ ಸ್ಪರ್ಧಿ ಎನಿಸಿಕೊಂಡಿದ್ದಾರೆ.

ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​,  ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ, ದಿವ್ಯಾ ಉರುಡುಗ, ಶುಭಾ ಮನೆಯಲ್ಲಿ ಮುಂದುವರಿದಿದ್ದಾರೆ.  ಇನ್ನು ಕೆಲವೇ ವಾರಗಳಲ್ಲಿ ಬಿಗ್​ ಬಾಸ್​ ಫಿನಾಲೆ ನಡೆಯಲಿದೆ.  ಹೀಗಾಗಿ, ಮುಂದಿನ ದಿನಗಳಲ್ಲಿ ಫೈಟ್​ ಮತ್ತಷ್ಟು ಜೋರಾಗಲಿದೆ.

ಇದನ್ನೂ ಓದಿ: ‘72 ದಿನಗಳ ಕಾಲ ನೋಡಿದ ಕೆಪಿ ಹೀಗೆ ಇರಲಿಲ್ಲ’; ಚಕ್ರವರ್ತಿ ಪ್ರಭಾವಕ್ಕೊಳಗಾದ ಅರವಿಂದ್​ಗೆ ಸುದೀಪ್​ ಎಚ್ಚರಿಕೆ

ಈ ವಾರ ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗೋರು ಯಾರು?; ಇಬ್ಬರ ಮೇಲೆ ತೂಗುಗತ್ತಿ

Published On - 10:09 pm, Sun, 11 July 21

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ