AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಿಂದ ರಘು ಎಲಿಮಿನೇಟ್​ ಆಗೋಕೆ ಕಾರಣವಾಯ್ತು ಈ ಒಂದು ವಿಚಾರ 

ಈ ವಾರ ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​, ರಘು ಗೌಡ, ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿತ್ತು.

ಬಿಗ್​ ಬಾಸ್​ನಿಂದ ರಘು ಎಲಿಮಿನೇಟ್​ ಆಗೋಕೆ ಕಾರಣವಾಯ್ತು ಈ ಒಂದು ವಿಚಾರ 
ರಘು - ಬಿಗ್ ಬಾಸ್​ ಕನ್ನಡ ಸೀಸನ್​ 8
TV9 Web
| Edited By: |

Updated on:Jul 12, 2021 | 3:51 PM

Share

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನ ಎರಡನೇ ಎಲಿಮಿನೇಷನ್​ ನಡೆದಿದೆ. ರಘು ಗೌಡ ಬಿಗ್​ ಬಾಸ್​​ನಿಂದ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ಬಿಗ್​ ಬಾಸ್​ನಲ್ಲಿ ಹನ್ನೊಂದು ಇದ್ದ ಸ್ಪರ್ಧಿಗಳ ಸಂಖ್ಯೆ ಹತ್ತಾಗಿದೆ. ಈ ವಾರ ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​, ರಘು ಗೌಡ, ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿತ್ತು.

ಮೊದಲು ಮಂಜು ಸೇವ್​ ಆದರು. ನಂತರ ಅರವಿಂದ್, ವೈಷ್ಣವಿ ಗೌಡ, ದಿವ್ಯಾ ಸುರೇಶ್​, ಪ್ರಶಾಂತ್​ ಸಂಬರಗಿ,  ಶಮಂತ್​ ಬ್ರೋ ಗೌಡ, ಪ್ರಿಯಾಂಕ ತಿಮ್ಮೇಶ್​ ಸೇವ್​ ಆದರು. ಕೊನೆಯಲ್ಲಿ ಚಕ್ರವರ್ತಿ ಹಾಗೂ ರಘು ಉಳಿದುಕೊಂಡರು. ಚಕ್ರವರ್ತಿ ಸೇವ್​ ಆಗಿ, ರಘು ಔಟ್​ ಆದರು.

ಈ ವಾರ ಬಿಗ್​ ಬಾಸ್​ ಮನೆಯಲ್ಲಿ ರಘು ಅಷ್ಟಾಗಿ ಆ್ಯಕ್ಟಿವ್​ ಆಗಿರಲಿಲ್ಲ. ಅವರು ಅರವಿಂದ್​ಗೆ ಹೆದರುತ್ತಾರೆ ಎನ್ನುವ ಮಾತು ಕೂಡ ಕೇಳಿಬಂತು. ಪ್ರಶಾಂತ್​ ಅವರು ರಘು ಪರ ಮಾತನಾಡಿದ್ದರೂ ರಘು ಈ ವಿಚಾರದಲ್ಲಿ ಮೌನ ವಹಿಸಿದ್ದರು. ಎಲ್ಲಿಯೂ ಅವರು ಅಷ್ಟಾಗಿ  ಮಾತನಾಡಿಲ್ಲ. ಈ ಕಾರಣಕ್ಕೆ ಅವರಿಗೆ ಕಡಿಮೆ ಮತ ಬಿದ್ದಿದೆ ಎನ್ನಲಾಗುತ್ತಿದೆ. ಈಗ ಎರಡನೇ ಇನ್ನಿಂಗ್ಸ್​ನ ಎರಡನೇ ಸ್ಪರ್ಧಿಯಾಗಿ ರಘು ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ಬಿಗ್​ ಬಾಸ್ ಮನೆಯಲ್ಲಿ ಅವರ 91 ದಿನಗಳ ಪ್ರಯಾಣ ಪೂರ್ಣಗೊಂಡಿದೆ.

ಇನ್ನು, ಉಳಿದ ಸ್ಪರ್ಧಿಗಳಿಗೆ ಹೋಲಿಸಿದರೆ ರಘು ಡಲ್​ ಆಗಿ ಕಾಣುತ್ತಿದ್ದರು. ಚಕ್ರವರ್ತಿ ಹಾಗೂ ಪ್ರಶಾಂತ್​ ಮನೆಯಲ್ಲಿ ಮಾತಿನ ಮೂಲಕ ಗಮನ ಸೆಳೆಯುತ್ತಿದ್ದಾರೆ. ಶಮಂತ್​, ಪ್ರಿಯಾಂಕಾ ತಿಮ್ಮೇಶ್​  ಕೂಡ ಎಲ್ಲರನ್ನೂ ಎಂಟರ್​ಟೇನ್​ ಮಾಡುತ್ತಿದ್ದಾರೆ. ಉಳಿದವರು ಸ್ಟ್ರಾಂಗ್​ ಸ್ಪರ್ಧಿ ಎನಿಸಿಕೊಂಡಿದ್ದಾರೆ.

ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​,  ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ, ದಿವ್ಯಾ ಉರುಡುಗ, ಶುಭಾ ಮನೆಯಲ್ಲಿ ಮುಂದುವರಿದಿದ್ದಾರೆ.  ಇನ್ನು ಕೆಲವೇ ವಾರಗಳಲ್ಲಿ ಬಿಗ್​ ಬಾಸ್​ ಫಿನಾಲೆ ನಡೆಯಲಿದೆ.  ಹೀಗಾಗಿ, ಮುಂದಿನ ದಿನಗಳಲ್ಲಿ ಫೈಟ್​ ಮತ್ತಷ್ಟು ಜೋರಾಗಲಿದೆ.

ಇದನ್ನೂ ಓದಿ: ‘72 ದಿನಗಳ ಕಾಲ ನೋಡಿದ ಕೆಪಿ ಹೀಗೆ ಇರಲಿಲ್ಲ’; ಚಕ್ರವರ್ತಿ ಪ್ರಭಾವಕ್ಕೊಳಗಾದ ಅರವಿಂದ್​ಗೆ ಸುದೀಪ್​ ಎಚ್ಚರಿಕೆ

ಈ ವಾರ ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗೋರು ಯಾರು?; ಇಬ್ಬರ ಮೇಲೆ ತೂಗುಗತ್ತಿ

Published On - 10:09 pm, Sun, 11 July 21

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !