AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಿಂದ ರಘು ಎಲಿಮಿನೇಟ್​ ಆಗೋಕೆ ಕಾರಣವಾಯ್ತು ಈ ಒಂದು ವಿಚಾರ 

ಈ ವಾರ ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​, ರಘು ಗೌಡ, ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿತ್ತು.

ಬಿಗ್​ ಬಾಸ್​ನಿಂದ ರಘು ಎಲಿಮಿನೇಟ್​ ಆಗೋಕೆ ಕಾರಣವಾಯ್ತು ಈ ಒಂದು ವಿಚಾರ 
ರಘು - ಬಿಗ್ ಬಾಸ್​ ಕನ್ನಡ ಸೀಸನ್​ 8
TV9 Web
| Edited By: |

Updated on:Jul 12, 2021 | 3:51 PM

Share

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನ ಎರಡನೇ ಎಲಿಮಿನೇಷನ್​ ನಡೆದಿದೆ. ರಘು ಗೌಡ ಬಿಗ್​ ಬಾಸ್​​ನಿಂದ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ಬಿಗ್​ ಬಾಸ್​ನಲ್ಲಿ ಹನ್ನೊಂದು ಇದ್ದ ಸ್ಪರ್ಧಿಗಳ ಸಂಖ್ಯೆ ಹತ್ತಾಗಿದೆ. ಈ ವಾರ ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​, ರಘು ಗೌಡ, ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿತ್ತು.

ಮೊದಲು ಮಂಜು ಸೇವ್​ ಆದರು. ನಂತರ ಅರವಿಂದ್, ವೈಷ್ಣವಿ ಗೌಡ, ದಿವ್ಯಾ ಸುರೇಶ್​, ಪ್ರಶಾಂತ್​ ಸಂಬರಗಿ,  ಶಮಂತ್​ ಬ್ರೋ ಗೌಡ, ಪ್ರಿಯಾಂಕ ತಿಮ್ಮೇಶ್​ ಸೇವ್​ ಆದರು. ಕೊನೆಯಲ್ಲಿ ಚಕ್ರವರ್ತಿ ಹಾಗೂ ರಘು ಉಳಿದುಕೊಂಡರು. ಚಕ್ರವರ್ತಿ ಸೇವ್​ ಆಗಿ, ರಘು ಔಟ್​ ಆದರು.

ಈ ವಾರ ಬಿಗ್​ ಬಾಸ್​ ಮನೆಯಲ್ಲಿ ರಘು ಅಷ್ಟಾಗಿ ಆ್ಯಕ್ಟಿವ್​ ಆಗಿರಲಿಲ್ಲ. ಅವರು ಅರವಿಂದ್​ಗೆ ಹೆದರುತ್ತಾರೆ ಎನ್ನುವ ಮಾತು ಕೂಡ ಕೇಳಿಬಂತು. ಪ್ರಶಾಂತ್​ ಅವರು ರಘು ಪರ ಮಾತನಾಡಿದ್ದರೂ ರಘು ಈ ವಿಚಾರದಲ್ಲಿ ಮೌನ ವಹಿಸಿದ್ದರು. ಎಲ್ಲಿಯೂ ಅವರು ಅಷ್ಟಾಗಿ  ಮಾತನಾಡಿಲ್ಲ. ಈ ಕಾರಣಕ್ಕೆ ಅವರಿಗೆ ಕಡಿಮೆ ಮತ ಬಿದ್ದಿದೆ ಎನ್ನಲಾಗುತ್ತಿದೆ. ಈಗ ಎರಡನೇ ಇನ್ನಿಂಗ್ಸ್​ನ ಎರಡನೇ ಸ್ಪರ್ಧಿಯಾಗಿ ರಘು ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ಬಿಗ್​ ಬಾಸ್ ಮನೆಯಲ್ಲಿ ಅವರ 91 ದಿನಗಳ ಪ್ರಯಾಣ ಪೂರ್ಣಗೊಂಡಿದೆ.

ಇನ್ನು, ಉಳಿದ ಸ್ಪರ್ಧಿಗಳಿಗೆ ಹೋಲಿಸಿದರೆ ರಘು ಡಲ್​ ಆಗಿ ಕಾಣುತ್ತಿದ್ದರು. ಚಕ್ರವರ್ತಿ ಹಾಗೂ ಪ್ರಶಾಂತ್​ ಮನೆಯಲ್ಲಿ ಮಾತಿನ ಮೂಲಕ ಗಮನ ಸೆಳೆಯುತ್ತಿದ್ದಾರೆ. ಶಮಂತ್​, ಪ್ರಿಯಾಂಕಾ ತಿಮ್ಮೇಶ್​  ಕೂಡ ಎಲ್ಲರನ್ನೂ ಎಂಟರ್​ಟೇನ್​ ಮಾಡುತ್ತಿದ್ದಾರೆ. ಉಳಿದವರು ಸ್ಟ್ರಾಂಗ್​ ಸ್ಪರ್ಧಿ ಎನಿಸಿಕೊಂಡಿದ್ದಾರೆ.

ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​,  ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ, ದಿವ್ಯಾ ಉರುಡುಗ, ಶುಭಾ ಮನೆಯಲ್ಲಿ ಮುಂದುವರಿದಿದ್ದಾರೆ.  ಇನ್ನು ಕೆಲವೇ ವಾರಗಳಲ್ಲಿ ಬಿಗ್​ ಬಾಸ್​ ಫಿನಾಲೆ ನಡೆಯಲಿದೆ.  ಹೀಗಾಗಿ, ಮುಂದಿನ ದಿನಗಳಲ್ಲಿ ಫೈಟ್​ ಮತ್ತಷ್ಟು ಜೋರಾಗಲಿದೆ.

ಇದನ್ನೂ ಓದಿ: ‘72 ದಿನಗಳ ಕಾಲ ನೋಡಿದ ಕೆಪಿ ಹೀಗೆ ಇರಲಿಲ್ಲ’; ಚಕ್ರವರ್ತಿ ಪ್ರಭಾವಕ್ಕೊಳಗಾದ ಅರವಿಂದ್​ಗೆ ಸುದೀಪ್​ ಎಚ್ಚರಿಕೆ

ಈ ವಾರ ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗೋರು ಯಾರು?; ಇಬ್ಬರ ಮೇಲೆ ತೂಗುಗತ್ತಿ

Published On - 10:09 pm, Sun, 11 July 21

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ