AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಟ್​ ಆಫ್​ ಆದಾಗ ಅರವಿಂದ್​-ದಿವ್ಯಾ ಕಣ್​ ಕಣ್ಣ ಸಲಿಗೆ! ಕದ್ದು ನೋಡಿದ ಶಮಂತ್​-ರಘು

Bigg Boss Kannada: ರಾತ್ರಿ ವೇಳೆ ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆ.ಪಿ. ಏನೆಲ್ಲ ಮಾಡುತ್ತಾರೆ ಎಂಬುದನ್ನು ಶಮಂತ್​ ಬ್ರೋ ಗೌಡ ಮತ್ತು ರಘು ಗೌಡ ಕದ್ದು ನೋಡಿದ್ದಾರೆ! ರಾತ್ರಿ ನಡೆದ ಸಂಗತಿಯ ಬಗ್ಗೆ ಬೆಳಗ್ಗೆ ಮನೆಯ ಇತರೆ ಸದಸ್ಯರಿಗೆ ಅವರು ವರದಿ ಒಪ್ಪಿಸಿದ್ದಾರೆ.

ಲೈಟ್​ ಆಫ್​ ಆದಾಗ ಅರವಿಂದ್​-ದಿವ್ಯಾ ಕಣ್​ ಕಣ್ಣ ಸಲಿಗೆ! ಕದ್ದು ನೋಡಿದ ಶಮಂತ್​-ರಘು
ಅರವಿಂದ್​ - ದಿವ್ಯಾ ಉರುಡುಗ
ಮದನ್​ ಕುಮಾರ್​
| Edited By: |

Updated on: Apr 10, 2021 | 3:31 PM

Share

ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಒಂದು ಕಡೆಯಾದರೆ, ಲವ್​ ಸ್ಟೋರಿಗಳು ಇನ್ನೊಂದು ಕಡೆ ಹೈಲೈಟ್ ಆಗುತ್ತಿವೆ. ಅದರಲ್ಲೂ ಅರವಿಂದ್​ ಕೆ.ಪಿ. ಹಾಗೂ ದಿವ್ಯಾ ಉರುಡುಗ ನಡುವಿನ ಆಪ್ತತತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದು ಮನೆಯ ಸದಸ್ಯರ ಕಣ್ಣು ಕುಕ್ಕುತ್ತಿದೆ. ವೀಕ್ಷಕರ ವಲಯದಲ್ಲೂ ಈ ಬಗ್ಗೆ ಚರ್ಚೆ ಜೋರಾಗಿದೆ. ಆದರೆ ಅದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಈ ಜೋಡಿಹಕ್ಕಿಗಳು ತಮ್ಮ ಪಾಡಿಗೆ ತಾವು ಹಾಯಾಗಿವೆ. ಇತ್ತೀಚೆಗೆ ದೊಡ್ಮನೆಯಲ್ಲಿ ಅವರಿಬ್ಬರ ಒಂದು ವಿಲಕ್ಷಣ ವರ್ತನೆ ಬೆಳಕಿಗೆ ಬಂದಿದೆ.

ಬಿಗ್​ ಬಾಸ್​ ಮನೆಯಲ್ಲಿ ರಾತ್ರಿ ಬೆಡ್​ ರೂಮ್​ ಲೈಟ್​ ಆಫ್​ ಆದ ಬಳಿಕ ಎಲ್ಲರೂ ಮಲಗುತ್ತಾರೆ. ಇನ್ನೊಬ್ಬರ ನಿದ್ರೆಗೆ ತೊಂದರೆ ಆಗಬಾರದು ಎಂದು ಪಿಸುಮಾತಿನಲ್ಲಿ ಸಂವಹನ ನಡೆಸುತ್ತಾರೆ. ಇಂಥ ಸಮಯದಲ್ಲಿ ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆ.ಪಿ. ಕಣ್ಸನ್ನೆಯಲ್ಲೇ ಏನೇನೋ ಮಾತನಾಡಿಕೊಂಡಿದ್ದಾರೆ. ಏ.9ರ ಎಪಿಸೋಡ್​ನಲ್ಲಿ ಈ ದೃಶ್ಯಗಳು ಪ್ರಸಾರ ಆಗಿವೆ. ಇಬ್ಬರ ನಡುವೆ ಆಪ್ತತೆ ಹೆಚ್ಚಿದೆ ಎಂಬುದಕ್ಕೆ ಈ ಸಂಗತಿಯೇ ಸಾಕ್ಷಿ ಒದಗಿಸುತ್ತಿದೆ.

ಅಷ್ಟೇ ಅಲ್ಲ, ರಾತ್ರಿ ವೇಳೆ ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆ.ಪಿ. ಏನೆಲ್ಲ ಮಾಡುತ್ತಾರೆ ಎಂಬುದನ್ನು ಶಮಂತ್​ ಬ್ರೋ ಗೌಡ ಮತ್ತು ರಘು ಗೌಡ ಕದ್ದು ನೋಡಿದ್ದಾರೆ! ರಾತ್ರಿ ನಡೆದ ಸಂಗತಿಯ ಬಗ್ಗೆ ಬೆಳಗ್ಗೆ ಮನೆಯ ಇತರೆ ಸದಸ್ಯರಿಗೆ ಅವರು ವರದಿ ಒಪ್ಪಿಸಿದ್ದಾರೆ. ‘ದಿವ್ಯಾ ಉರುಡುಗ ಪದೇ ಪದೇ ಹೋಗಿ ಅರವಿಂದ್​ರನ್ನು ಮುಟ್ಟಿ ಬರುತ್ತಿದ್ದರು. ಸೊಳ್ಳೆ ಇರಬಹುದು ಎಂದುಕೊಂಡು ಅರವಿಂದ್​ ತೋಳಿಗೆ ಹೊಡೆದುಕೊಂಡರು’ ಎಂದು ರಘು ಮತ್ತು ಶಮಂತ್​ ಎಲ್ಲವನ್ನೂ ಬಹಿರಂಗ ಮಾಡಿದ್ದಾರೆ.

‘ಮಸಲ್​ ತೋರಿಸುವ ಸಲುವಾಗಿ ಅರವಿಂದ್​ ಆ ರೀತಿ ತೋಳಿಗೆ ಹೊಡೆದುಕೊಂಡಿರುತ್ತಾರೆ. ಒಂದು ನವಿಲು ಇನ್ನೊಂದು ನವಿಲನ್ನು ಆಕರ್ಷಿಸಲು ಗರಿ ಬಿಚ್ಚುತ್ತದೆ. ಇದೂ ಕೂಡ ಹಂಗೆ. ಇಬ್ಬರೂ ಆಚೆ ಹೋಗಿ ಮಾತನಾಡಬಹುದು. ಆದರೆ ಬೆಡ್​ ಮೇಲೆ ಕುಳಿತು ಮಾತನಾಡುವ ಮಜವೇ ಬೇರೆ’ ಎಂದು ರಘು ಕಾಮಿಡಿ ಮಾಡಿದ್ದಾರೆ. ಇದನ್ನೆಲ್ಲ ಕೇಳಿಸಿಕೊಂಡು ದಿವ್ಯಾ ಉರುಡುಗ ನಾಚಿ ನೀರಾಗಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಸ್ಪರ್ಧಿಯ ಲಿಪ್​ಲಾಕ್​ ವಿಡಿಯೋ ವೈರಲ್! ಪೂರ್ತಿ ಎಪಿಸೋಡ್​ ಪ್ರಸಾರ ಯಾವಾಗ?

ಮಂಜು ಬೇಡಿಕೆ ಈಡೇರಿಸಿದ ಬಿಗ್​ ಬಾಸ್​; ಒಂದೇ ದಿನ ಇಬ್ಬರು ಹೆಣ್ಮಕ್ಳು ವೈಲ್ಡ್​ ಕಾರ್ಡ್​ ಎಂಟ್ರಿ!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ