Bigg Boss Kannada: ಮನೆಯೊಳಗಿನ ಕಷ್ಟ ತಾಳಲಾರದೆ ಬಿಕ್ಕಿ ಬಿಕ್ಕಿ ಅತ್ತ ನಿಧಿ ಸುಬ್ಬಯ್ಯ, ಶುಭಾ ಪೂಂಜಾ!

ಬಿಗ್​ ಬಾಸ್​ ಎಂದರೆ ಬರೀ ಮೋಜು ಮಸ್ತಿ ಅಲ್ಲ. ಅಪರಿಚಿತರ ಜೊತೆ ಕಾಲ ಕಳೆಯುವುದು ಸುಲಭವೇ ಅಲ್ಲ. ನಿಧಿ ಸುಬ್ಬಯ್ಯ ಮತ್ತು ಶುಭಾ ಪೂಂಜಾ ಕಣ್ಣೀರು ಹಾಕುವಂತಹ ಸ್ಥಿತಿ ನಿರ್ಮಾಣ ಆಗಿದೆ.

Bigg Boss Kannada: ಮನೆಯೊಳಗಿನ ಕಷ್ಟ ತಾಳಲಾರದೆ ಬಿಕ್ಕಿ ಬಿಕ್ಕಿ ಅತ್ತ ನಿಧಿ ಸುಬ್ಬಯ್ಯ, ಶುಭಾ ಪೂಂಜಾ!
ಶುಭಾ ಪೂಂಜಾ - ನಿಧಿ ಸುಬ್ಬಯ್ಯ
Follow us
|

Updated on:Mar 17, 2021 | 6:24 PM

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಒಂದು ಕಠಿಣ ಶಿಕ್ಷೆ ನೀಡಿದ್ದಾರೆ. ಶಮಂತ್ ಬ್ರೋ ಗೌಡ ಅವರನ್ನು ಸೇವ್​ ಮಾಡಿದ್ದಕ್ಕೆ ಪ್ರತಿಯಾಗಿ ಎಲ್ಲ ಸದಸ್ಯರು ಬೆಡ್​ ರೂಮ್​ ಬಿಟ್ಟುಕೊಡಬೇಕಾಯಿತು. ಅದರಿಂದ ಯಾರಿಗೂ ರಾತ್ರಿ ಸರಿಯಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಇದು ಯಾವ ಮಟ್ಟಕ್ಕೆ ತಲುಪಿದೆ ಎಂದರೆ, ನಿಧಿ ಸುಬ್ಬಯ್ಯ ಮತ್ತು ಶುಭಾ ಪೂಂಜಾ ಕಣ್ಣೀರು ಹಾಕಿ ಗೋಗರೆದಿದ್ದಾರೆ.

ಹಾಸಿಗೆ, ಹೊದಿಕೆ ಮತ್ತು ದಿಂಬು ಇಲ್ಲದೆ ಮಲಗಲು ಸಾಧ್ಯವೇ ಇಲ್ಲ ಎಂಬುದು ಈಗಾಗಲೇ ಮನೆಯ ಸದಸ್ಯರ ಅನುಭವಕ್ಕೆ ಬಂದಿದೆ. ಅದರಲ್ಲೂ ಹೆಣ್ಣು ಮಕ್ಕಳಿಗೆ ತುಂಬ ಕಷ್ಟ ಆಗುತ್ತಿದೆ. ಹಾಗಾಗಿ ಸಮಯ ಸಿಕ್ಕಾಗಲೆಲ್ಲ ಕ್ಯಾಮರಾ ಮುಂದೆ ಬಂದು ‘ಪ್ಲೀಸ್​ ಬಿಗ್​ ಬಾಸ್​.. ನಮಗೆ ಬೆಡ್​ ರೂಮ್​ ಕೊಡಿಸಿ..’ ಎಂದು ಅಂಗಲಾಚಿದ್ದಾರೆ. ಅದನ್ನು ಪರಿಗಣಿಸಿದ ಬಿಗ್​ ಬಾಸ್ ಒಂದು ಆಯ್ಕೆ ನೀಡಿದರು. ಆದರೆ ಅದರಲ್ಲಿಯೂ ಮನೆಯ ಸದಸ್ಯರಿಗೆ ತೀವ್ರ ನಿರಾಸೆ ಆಯಿತು.

ಏನದು ಆಯ್ಕೆ? ಟಾಸ್ಕ್​ವೊಂದರಲ್ಲಿ ಗೆದ್ದ ಅರವಿಂದ್​-ದಿವ್ಯಾ ಉರುಡುಗ ಜೋಡಿಗೆ ವಿಶೇಷವಾದ ಚಾರ್ಜರ್​ ಸಿಕ್ಕಿತು. ಅದನ್ನು ಅವರೇ ಇಟ್ಟುಕೊಳ್ಳಬಹುದು ಅಥವಾ ಅದನ್ನು ತ್ಯಾಗ ಮಾಡಿ ಮನೆಯ ಎಲ್ಲರಿಗೂ ಬೆಡ್​ ರೂಮ್​ ಕೊಡಿಸಬಹುದು. ಈ ಎರಡು ಅವಕಾಶಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಲು ದಿವ್ಯಾ ಮತ್ತು ಅರವಿಂದ್​ 10 ನಿಮಿಷ ಸಮಯಾವಕಾಶ ಕೇಳಿದರು. ಖಂಡಿತವಾಗಿಯೂ ಅವರು ಆ ಚಾರ್ಜರ್​ ತ್ಯಾಗ ಮಾಡಿ, ಮನೆಯ ಸದಸ್ಯರಿಗೆ ಬೆಡ್​ ರೂಮ್​ ಕೊಡಿಸುತ್ತಾರೆ ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಅವರ ಊಹೆ ತಪ್ಪಾಯಿತು.

ಇದು ಒಂದು ಗೇಮ್​. ಇಲ್ಲಿ ಭಾವನೆಗಳಿಗೆ ಬಲಿ ಆಗಬಾರದು ಎಂಬ ಕಾರಣಕ್ಕೆ ದಿವ್ಯಾ ಮತ್ತು ಅರವಿಂದ್​ ಚಾರ್ಜರ್​ ಅನ್ನು ತಮ್ಮ ಬಳಿಯೇ ಇಟ್ಟುಕೊಳ್ಳಲು ನಿರ್ಧರಿಸಿದರು. ಹಾಗಾಗಿ ಮನೆಯ ಎಲ್ಲ ಸದಸ್ಯರಿಗೂ ಬೆಡ್​ ರೂಮ್​ ಇಲ್ಲದೆ ಗಾರ್ಡನ್​ ಏರಿಯಾದಲ್ಲಿ ಮಲಗುವ ಶಿಕ್ಷೆ ಮುಂದುವರಿಯಿತು. ಭಾರಿ ಆಸೆ ಇಟ್ಟುಕೊಂಡಿದ್ದ ಶುಭಾ ಪೂಂಜಾ ಮತ್ತು ನಿಧಿ ಸುಬ್ಬಯ್ಯ ಅವರಿಗೆ ಸಿಕ್ಕಾಪಟ್ಟೆ ನಿರಾಸೆ ಆಯಿತು. ಅಲ್ಲದೆ, ದಿವ್ಯಾ-ಅರವಿಂದ್​ ಕಿಂಚಿತ್ತೂ ಮಾನವೀಯತೆ ತೋರಿಸಲಿಲ್ಲ ಎಂದು ಶುಭಾ ಹಾಗೂ ನಿಧಿ ನೊಂದುಕೊಂಡರು. ಹಾಗಾಗಿ ಇಬ್ಬರೂ ಬಿಕ್ಕಿ ಬಿಕ್ಕಿ ಅತ್ತರು.

ದಿವ್ಯಾ-ಅರವಿಂದ್​ ತೆಗೆದುಕೊಂಡ ನಿರ್ಧಾರದ ಬಗ್ಗೆ ಮನೆಯ ಸದಸ್ಯರಲ್ಲಿಯೇ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಅವರಿಬ್ಬರ ಪರವಾಗಿ ದಿವ್ಯಾ ಸುರೇಶ್​ ಮಾತನಾಡಿದ್ದಾರೆ. ಕ್ಯಾಪ್ಟನ್​ ರಾಜೀವ್​ ಕೂಡ ಅವರಿಬ್ಬರ ನಿರ್ಧಾರಕ್ಕೆ ಗೌರವ ನೀಡಿದ್ದಾರೆ.

ಇದನ್ನೂ ಓದಿ: ರಹಸ್ಯವಾಗಿ ಮೊಬೈಲ್​ ಬಳಸ್ತಿದ್ದಾರಾ ಬಿಗ್​ ಬಾಸ್​ ಸ್ಪರ್ಧಿಗಳು? ಜನರ ಅನುಮಾನಕ್ಕೆ ಇಲ್ಲಿದೆ ಉತ್ತರ!

ಶಮಂತ್ ಅವರನ್ನು ಮನೆಯಿಂದ ಹೊರಗೆ ಕಳುಹಿಸಿ; ಬಿಗ್​ ಬಾಸ್​ ಎದುರು ಸ್ಪರ್ಧಿಗಳ ಹೊಸ ಬೇಡಿಕೆ

Published On - 4:03 pm, Wed, 17 March 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!