AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಮನೆಯೊಳಗಿನ ಕಷ್ಟ ತಾಳಲಾರದೆ ಬಿಕ್ಕಿ ಬಿಕ್ಕಿ ಅತ್ತ ನಿಧಿ ಸುಬ್ಬಯ್ಯ, ಶುಭಾ ಪೂಂಜಾ!

ಬಿಗ್​ ಬಾಸ್​ ಎಂದರೆ ಬರೀ ಮೋಜು ಮಸ್ತಿ ಅಲ್ಲ. ಅಪರಿಚಿತರ ಜೊತೆ ಕಾಲ ಕಳೆಯುವುದು ಸುಲಭವೇ ಅಲ್ಲ. ನಿಧಿ ಸುಬ್ಬಯ್ಯ ಮತ್ತು ಶುಭಾ ಪೂಂಜಾ ಕಣ್ಣೀರು ಹಾಕುವಂತಹ ಸ್ಥಿತಿ ನಿರ್ಮಾಣ ಆಗಿದೆ.

Bigg Boss Kannada: ಮನೆಯೊಳಗಿನ ಕಷ್ಟ ತಾಳಲಾರದೆ ಬಿಕ್ಕಿ ಬಿಕ್ಕಿ ಅತ್ತ ನಿಧಿ ಸುಬ್ಬಯ್ಯ, ಶುಭಾ ಪೂಂಜಾ!
ಶುಭಾ ಪೂಂಜಾ - ನಿಧಿ ಸುಬ್ಬಯ್ಯ
ಮದನ್​ ಕುಮಾರ್​
|

Updated on:Mar 17, 2021 | 6:24 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಒಂದು ಕಠಿಣ ಶಿಕ್ಷೆ ನೀಡಿದ್ದಾರೆ. ಶಮಂತ್ ಬ್ರೋ ಗೌಡ ಅವರನ್ನು ಸೇವ್​ ಮಾಡಿದ್ದಕ್ಕೆ ಪ್ರತಿಯಾಗಿ ಎಲ್ಲ ಸದಸ್ಯರು ಬೆಡ್​ ರೂಮ್​ ಬಿಟ್ಟುಕೊಡಬೇಕಾಯಿತು. ಅದರಿಂದ ಯಾರಿಗೂ ರಾತ್ರಿ ಸರಿಯಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಇದು ಯಾವ ಮಟ್ಟಕ್ಕೆ ತಲುಪಿದೆ ಎಂದರೆ, ನಿಧಿ ಸುಬ್ಬಯ್ಯ ಮತ್ತು ಶುಭಾ ಪೂಂಜಾ ಕಣ್ಣೀರು ಹಾಕಿ ಗೋಗರೆದಿದ್ದಾರೆ.

ಹಾಸಿಗೆ, ಹೊದಿಕೆ ಮತ್ತು ದಿಂಬು ಇಲ್ಲದೆ ಮಲಗಲು ಸಾಧ್ಯವೇ ಇಲ್ಲ ಎಂಬುದು ಈಗಾಗಲೇ ಮನೆಯ ಸದಸ್ಯರ ಅನುಭವಕ್ಕೆ ಬಂದಿದೆ. ಅದರಲ್ಲೂ ಹೆಣ್ಣು ಮಕ್ಕಳಿಗೆ ತುಂಬ ಕಷ್ಟ ಆಗುತ್ತಿದೆ. ಹಾಗಾಗಿ ಸಮಯ ಸಿಕ್ಕಾಗಲೆಲ್ಲ ಕ್ಯಾಮರಾ ಮುಂದೆ ಬಂದು ‘ಪ್ಲೀಸ್​ ಬಿಗ್​ ಬಾಸ್​.. ನಮಗೆ ಬೆಡ್​ ರೂಮ್​ ಕೊಡಿಸಿ..’ ಎಂದು ಅಂಗಲಾಚಿದ್ದಾರೆ. ಅದನ್ನು ಪರಿಗಣಿಸಿದ ಬಿಗ್​ ಬಾಸ್ ಒಂದು ಆಯ್ಕೆ ನೀಡಿದರು. ಆದರೆ ಅದರಲ್ಲಿಯೂ ಮನೆಯ ಸದಸ್ಯರಿಗೆ ತೀವ್ರ ನಿರಾಸೆ ಆಯಿತು.

ಏನದು ಆಯ್ಕೆ? ಟಾಸ್ಕ್​ವೊಂದರಲ್ಲಿ ಗೆದ್ದ ಅರವಿಂದ್​-ದಿವ್ಯಾ ಉರುಡುಗ ಜೋಡಿಗೆ ವಿಶೇಷವಾದ ಚಾರ್ಜರ್​ ಸಿಕ್ಕಿತು. ಅದನ್ನು ಅವರೇ ಇಟ್ಟುಕೊಳ್ಳಬಹುದು ಅಥವಾ ಅದನ್ನು ತ್ಯಾಗ ಮಾಡಿ ಮನೆಯ ಎಲ್ಲರಿಗೂ ಬೆಡ್​ ರೂಮ್​ ಕೊಡಿಸಬಹುದು. ಈ ಎರಡು ಅವಕಾಶಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಲು ದಿವ್ಯಾ ಮತ್ತು ಅರವಿಂದ್​ 10 ನಿಮಿಷ ಸಮಯಾವಕಾಶ ಕೇಳಿದರು. ಖಂಡಿತವಾಗಿಯೂ ಅವರು ಆ ಚಾರ್ಜರ್​ ತ್ಯಾಗ ಮಾಡಿ, ಮನೆಯ ಸದಸ್ಯರಿಗೆ ಬೆಡ್​ ರೂಮ್​ ಕೊಡಿಸುತ್ತಾರೆ ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಅವರ ಊಹೆ ತಪ್ಪಾಯಿತು.

ಇದು ಒಂದು ಗೇಮ್​. ಇಲ್ಲಿ ಭಾವನೆಗಳಿಗೆ ಬಲಿ ಆಗಬಾರದು ಎಂಬ ಕಾರಣಕ್ಕೆ ದಿವ್ಯಾ ಮತ್ತು ಅರವಿಂದ್​ ಚಾರ್ಜರ್​ ಅನ್ನು ತಮ್ಮ ಬಳಿಯೇ ಇಟ್ಟುಕೊಳ್ಳಲು ನಿರ್ಧರಿಸಿದರು. ಹಾಗಾಗಿ ಮನೆಯ ಎಲ್ಲ ಸದಸ್ಯರಿಗೂ ಬೆಡ್​ ರೂಮ್​ ಇಲ್ಲದೆ ಗಾರ್ಡನ್​ ಏರಿಯಾದಲ್ಲಿ ಮಲಗುವ ಶಿಕ್ಷೆ ಮುಂದುವರಿಯಿತು. ಭಾರಿ ಆಸೆ ಇಟ್ಟುಕೊಂಡಿದ್ದ ಶುಭಾ ಪೂಂಜಾ ಮತ್ತು ನಿಧಿ ಸುಬ್ಬಯ್ಯ ಅವರಿಗೆ ಸಿಕ್ಕಾಪಟ್ಟೆ ನಿರಾಸೆ ಆಯಿತು. ಅಲ್ಲದೆ, ದಿವ್ಯಾ-ಅರವಿಂದ್​ ಕಿಂಚಿತ್ತೂ ಮಾನವೀಯತೆ ತೋರಿಸಲಿಲ್ಲ ಎಂದು ಶುಭಾ ಹಾಗೂ ನಿಧಿ ನೊಂದುಕೊಂಡರು. ಹಾಗಾಗಿ ಇಬ್ಬರೂ ಬಿಕ್ಕಿ ಬಿಕ್ಕಿ ಅತ್ತರು.

ದಿವ್ಯಾ-ಅರವಿಂದ್​ ತೆಗೆದುಕೊಂಡ ನಿರ್ಧಾರದ ಬಗ್ಗೆ ಮನೆಯ ಸದಸ್ಯರಲ್ಲಿಯೇ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಅವರಿಬ್ಬರ ಪರವಾಗಿ ದಿವ್ಯಾ ಸುರೇಶ್​ ಮಾತನಾಡಿದ್ದಾರೆ. ಕ್ಯಾಪ್ಟನ್​ ರಾಜೀವ್​ ಕೂಡ ಅವರಿಬ್ಬರ ನಿರ್ಧಾರಕ್ಕೆ ಗೌರವ ನೀಡಿದ್ದಾರೆ.

ಇದನ್ನೂ ಓದಿ: ರಹಸ್ಯವಾಗಿ ಮೊಬೈಲ್​ ಬಳಸ್ತಿದ್ದಾರಾ ಬಿಗ್​ ಬಾಸ್​ ಸ್ಪರ್ಧಿಗಳು? ಜನರ ಅನುಮಾನಕ್ಕೆ ಇಲ್ಲಿದೆ ಉತ್ತರ!

ಶಮಂತ್ ಅವರನ್ನು ಮನೆಯಿಂದ ಹೊರಗೆ ಕಳುಹಿಸಿ; ಬಿಗ್​ ಬಾಸ್​ ಎದುರು ಸ್ಪರ್ಧಿಗಳ ಹೊಸ ಬೇಡಿಕೆ

Published On - 4:03 pm, Wed, 17 March 21

ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!