AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ಬಿಗ್​ ಬಾಸ್ ಮನೆಯಲ್ಲಿ ರಹಸ್ಯವಾಗಿ ಸಿಗುವ ಸೌಲಭ್ಯಗಳೇನು? ಮಾತಿನ ಮಧ್ಯೆ ಸತ್ಯ ಬಾಯಿಬಿಟ್ಟ ರಘು!

Bigg Boss Kannada 8: ಟಾಸ್ಕ್​ ಇಲ್ಲದ ಸಂದರ್ಭದಲ್ಲಿ ಬಿಗ್​ ಬಾಸ್​ ಸ್ಪರ್ಧಿಗಳು ಹಲವು ವಿಚಾರಗಳ ಬಗ್ಗೆ ಹರಟೆ ಹೊಡೆಯುತ್ತಾರೆ. ಈ ಸಂದರ್ಭದಲ್ಲಿ ಬಿಗ್​ ಬಾಸ್​ ಬಗ್ಗೆ ತಮಗೆ ಇದ್ದ ಕೆಲವು ಕಲ್ಪನೆಗಳ ಬಗ್ಗೆ ರಘು ಗೌಡ ಮಾತನಾಡಿದ್ದಾರೆ.

BBK8: ಬಿಗ್​ ಬಾಸ್ ಮನೆಯಲ್ಲಿ ರಹಸ್ಯವಾಗಿ ಸಿಗುವ ಸೌಲಭ್ಯಗಳೇನು? ಮಾತಿನ ಮಧ್ಯೆ ಸತ್ಯ ಬಾಯಿಬಿಟ್ಟ ರಘು!
ರಘು ಗೌಡ - ಬಿಗ್​ ಬಾಸ್​ ಕನ್ನಡ ಸೀಸನ್​ 8
ಮದನ್​ ಕುಮಾರ್​
|

Updated on: Mar 25, 2021 | 12:11 PM

Share

ಬಿಗ್​ ಬಾಸ್​ ಕಾರ್ಯಕ್ರಮದ ಬಗ್ಗೆ ಜನರಿಗೆ ಅನೇಕ ಅನುಮಾನಗಳಿವೆ. ಈ ರಿಯಾಲಿಟಿ ಶೋ ನಿಜವೋ ಅಥವಾ ಸುಳ್ಳೋ ಎಂದು ಇಂದಿಗೂ ಹಲವರು ಪ್ರಶ್ನೆ ಮಾಡುತ್ತಲೇ ಇದ್ದಾರೆ. 7 ಸೀಸನ್​ ಕಳೆದು 8ನೇ ಸೀಸನ್​ಗೆ ಕಾಲಿಟ್ಟರೂ ಅನೇಕರಿಗೆ ಈ ಅನುಮಾನ ಬಗೆಹರಿದಿಲ್ಲ. ಈ ಬಾರಿ ಬಿಗ್​ ಬಾಸ್​ಗೆ ಕಾಲಿಟ್ಟಿರುವ ರಘು ಗೌಡ ಅವರಿಗೂ ಈ ಕುರಿತಾಗಿ ಕೆಲವು ಕಲ್ಪನೆಗಳು ಇದ್ದವಂತೆ. ಇತರೆ ಸ್ಪರ್ಧಿಗಳ ಜೊತೆ ಮಾತನಾಡುತ್ತಿರುವಾಗ ಅವರು ಈ ವಿಚಾರ ಹಂಚಿಕೊಂಡಿದ್ದಾರೆ.

ನಿಜಕ್ಕೂ ಬಿಗ್​ ಬಾಸ್​ ಸ್ಪರ್ಧಿಗಳು ಅಷ್ಟೆಲ್ಲ ಕಟ್ಟುನಿಟ್ಟಿನ ವಾತಾವರಣದಲ್ಲಿ ಇರುತ್ತಾರಾ? ರಹಸ್ಯವಾಗಿ ಅವರಿಗೆ ಮೊಬೈಲ್​ ಬಳಸಲು ಕೊಡುತ್ತಾರಾ? ಆಗಾಗ ಕುಟುಂಬದವರು ಬಂದು ಭೇಟಿ ಮಾಡುತ್ತಾರಾ? ಇಂತ ಹತ್ತಾರು ಪ್ರಶ್ನೆಗಳು ವೀಕ್ಷಕರ ಮನದಲ್ಲಿ ಕೊರೆಯುತ್ತಿರಬಹುದು. ನಿಜಕ್ಕೂ ಈ ರೀತಿಯ ಸೌಲಭ್ಯಗಳು ದೊಡ್ಮನೆ ಸದಸ್ಯರಿಗೆ ಸಿಗುತ್ತೋ ಇಲ್ಲವೋ ಎಂಬ ಬಗ್ಗೆ ರಘು ಬಾಯಿ ಬಿಟ್ಟಿದ್ದಾರೆ. ಅವರ ಮಾತಿಗೆ ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ಅರವಿಂದ್​ ಕೆ.ಪಿ. ಧ್ವನಿಗೂಡಿಸಿದ್ದಾರೆ.

‘ನಾವು ಆಡಿಯನ್ಸ್​ ಆಗಿದ್ದಾಗ ಎಷ್ಟೆಲ್ಲ ತಲೆ ಉಪಯೋಗಿಸುತ್ತಿದ್ವಿ ಅಲ್ವಾ? ಮೊಬೈಲ್​ ಕೊಡುತ್ತಾರೆ, ಸೀಕ್ರೆಟ್​ ರೂಮ್​ನಲ್ಲಿ ಫ್ಯಾಮಿಲಿಯವರು ಬಂದು ಮೀಟ್​ ಆಗ್ತಾರಾ ಎಂಥೆಲ್ಲ ಅಂದುಕೊಂಡಿದ್ವಿ’ ಎಂದು ರಘು ಹೇಳಿದ್ದಾರೆ. ‘ಆದರೆ ನನಗೆ ಆ ರೀತಿ ಯೋಚನೆಯೇ ಇರಲಿಲ್ಲ’ ಎಂದು ಅರವಿಂದ್​ ಪ್ರತಿಕ್ರಿಯಿಸಿದ್ದಾರೆ.

ಪ್ರಶಾಂತ್​ ಸಂಬರಗಿ ಕೂಡ ಆ ರೀತಿಯ ಆಲೋಚನೆಗಳನ್ನು ತಾವು ಇಟ್ಟುಕೊಂಡಿರಲಿಲ್ಲ ಎಂದು ಹೇಳಿದ್ದಾರೆ. ‘ಬಿಗ್​ ಬಾಸ್​ ಮನೆಯೊಳಗೆ ಹಾಗೆಲ್ಲ ಸೌಲಭ್ಯ ಇದೆಯಾ ಎಂದು ಯಾರಾದರೂ ಅನುಮಾನದಿಂದ ಕೇಳಿದರೆ ನಾನು ಕಾನ್ಫಿಡೆಂಟ್​ ಆಗಿ ಉತ್ತರ ಕೊಡ್ತೀನಿ. ನಾನೇ ಹೋಗಿ ಬಂದಿದ್ದೇನೆ. ಆ ಥರ ಏನೂ ಇರಲ್ಲ ಎನ್ನುತ್ತೇನೆ. ತುಂಬ ಜನ ಈ ಶೋ ಸ್ಕ್ರಿಪ್ಟೆಡ್​ ಅಂದುಕೊಳ್ಳುತ್ತಾರೆ’ ಎಂದಿದ್ದಾರೆ ದಿವ್ಯಾ ಉರುಡುಗ. ‘ಸ್ಕ್ರಿಪ್ಟ್​ ಮಾಡಿದರೂ ಕೂಡ ಶೋ ಇಷ್ಟು ಚೆನ್ನಾಗಿ ನಡೆಯಲು ಸಾಧ್ಯವೇ ಇಲ್ಲ’ ಎಂಬುದು ರಘು ಗೌಡ ಅಭಿಪ್ರಾಯ.

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಆಟ ಈಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಈ ವಾರ ಅರವಿಂದ್​ ಕೆಪಿ ಕ್ಯಾಪ್ಟನ್​ ಆಗಿದ್ದಾರೆ. ಅವರನ್ನು ಹೊರತುಪಡಿಸಿ ಉಳಿದ ಎಲ್ಲ 13 ಮಂದಿ ನಾಮಿನೇಟ್​ ಆಗಿದ್ದಾರೆ. ಹಾಗಾಗಿ ಯಾರು ಬೇಕಾದರೂ ಈ ವಾರ ಎಲಿಮಿನೇಟ್​ ಆಗಬಹುದು ಎಂಬ ಭೀತಿ ಶುರು ಆಗಿದೆ. ಮೊದಲ ವಾರ ಧನುಶ್ರೀ, ಎರಡನೇ ವಾರ ನಿರ್ಮಲಾ ಚೆನ್ನಪ್ಪ ಹಾಗೂ ಮೂರನೇ ವಾರ ಗೀತಾ ಭಾರತಿ ಭಟ್​ ಹೊರಬಂದಿರುವುದರಿಂದ ಮನೆಯಲ್ಲಿ ಹೆಣ್ಮಕ್ಕಳ ಸಂಖ್ಯಾ ಬಲ ಕುಸಿಯುತ್ತಿದೆ. 4ನೇ ವಾರವಾದರೂ ಪುರುಷ ಸ್ಪರ್ಧಿ ಎಲಿಮಿನೇಟ್​ ಆಗಬಹುದೇ ಎಂಬ ನಿರೀಕ್ಷೆಯಲ್ಲಿ ವೀಕ್ಷಕರು ವೀಕೆಂಡ್​ಗಾಗಿ ಕಾಯುತ್ತಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಗೆ ದೆವ್ವದ ಕಾಟ? ರಾಜೀವ್​ ಬಿಚ್ಚಿಟ್ರು ಭಯಾನಕ ಅನುಭವ

ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್