AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಶುಭಾ ಪೂಂಜಾ ಬಾಯ್​ಫ್ರೆಂಡ್​ ಧ್ವನಿ ಕೇಳಿ ಗಳಗಳನೆ ಅತ್ತ ವಿಶ್ವನಾಥ್​! ಇದೆಂಥಾ ಕನೆಕ್ಷನ್​?

BBK8: ಕಣ್ಣೀರನ್ನು ತಡೆದುಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ವಿಶ್ವನಾಥ್​ಗೆ ಸಾಧ್ಯವಾಗಲಿಲ್ಲ. ಅಷ್ಟಕ್ಕೂ ಶುಭಾ ಪೂಂಜಾ ಅವರ ಬಾಯ್​ ಫ್ರೆಂಡ್​ ಧ್ವನಿ ಕೇಳಿ ಈ ಪುಟಾಣಿ ವಿಶ್ವ ಯಾಕೆ ಅಳುತ್ತಿದ್ದಾನೆ ಎಂದು ಮನೆಯ ಎಲ್ಲ ಸದಸ್ಯರಿಗೂ ಪ್ರಶ್ನೆ ಮೂಡಿತು.

Bigg Boss Kannada: ಶುಭಾ ಪೂಂಜಾ ಬಾಯ್​ಫ್ರೆಂಡ್​ ಧ್ವನಿ ಕೇಳಿ ಗಳಗಳನೆ ಅತ್ತ ವಿಶ್ವನಾಥ್​! ಇದೆಂಥಾ ಕನೆಕ್ಷನ್​?
ವಿಶ್ವನಾಥ್​ - ಶುಭಾ ಪೂಂಜಾ
ಮದನ್​ ಕುಮಾರ್​
| Edited By: |

Updated on: Mar 28, 2021 | 4:15 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಭಾಗವಹಿಸಿರುವ ಅತಿ ಕಿರಿಯ ಸ್ಪರ್ಧಿ ವಿಶ್ವನಾಥ್​. ಚಿಕ್ಕವನು ಎಂಬ ಕಾರಣ ಪ್ರೀತಿ-ಪ್ರೇಮದ ಸಹವಾಸಕ್ಕೆ ವಿಶ್ವ ಕೈ ಹಾಕಿಲ್ಲ. ಮಹಿಳಾ ಸ್ಪರ್ಧಿಗಳನ್ನು ಅಕ್ಕ ಎಂದು ಕರೆಯುವ ಅವರು, ಟಾಸ್ಕ್​ನಲ್ಲಿಯೂ ಬಲು ಚೂಟಿ ಇದ್ದಾರೆ. ಆದರೆ ವೀಕೆಂಡ್​ ಎಪಿಸೋಡ್​ನಲ್ಲಿ ವಿಶ್ವ ಗಳಗಳನೆ ಅತ್ತಿದ್ದಾರೆ. ಅವರು ಹಾಗೆ ಬಿಕ್ಕಿ ಬಿಕ್ಕಿ ಅಳಲು ಕಾರಣ ಆಗಿರುವುದು ಶುಭ ಪೂಂಜಾ ಅವರ ಬಾಯ್​ ಫ್ರೆಂಡ್​ ಧ್ವನಿ!

ಬಿಗ್​ ಬಾಸ್​ನಲ್ಲಿ ಸ್ಪರ್ಧಿಸುತ್ತಿರುವವರು ತಮ್ಮ ಕುಟುಂಬದ ಎಲ್ಲರಿಂದಲೂ ದೂರ ಇರುತ್ತಾರೆ. ಹಾಗಾಗಿ ಬಿಗ್​ ಬಾಸ್​ ಆಗೊಮ್ಮೆ ಈಗೊಮ್ಮೆ ಒಂದು ಸರ್ಪ್ರೈಸ್​ ನೀಡುತ್ತಿರುತ್ತಾರೆ. ಸ್ಪರ್ಧಿಗಳ ಕುಟುಂಬದವರಿಂದ ಯಾರಾದರೊಬ್ಬರ ಧ್ವನಿಯನ್ನು ರೆಕಾರ್ಡ್​ ಮಾಡಿ ಕೇಳಿಸುತ್ತಾರೆ. ಈ ಬಾರಿ ಶುಭಾ ಪೂಂಜಾ ಅವರ ಬಾಯ್​ ಫ್ರೆಂಡ್​ ಧ್ವನಿ ಕೇಳಿಸಲಾಯಿತು. ಅದನ್ನು ಕೇಳಿಸಿಕೊಂಡು ಶುಭಾ ಪೂಂಜಾ ಅವರು ಸಿಕ್ಕಾಪಟ್ಟೆ ಖುಷಿ ಆದರು. ಆನಂದ ಭಾಷ್ಪ ಸುರಿಸಿದರು. ಆದರೆ ಅವರ ಜೊತೆಗೆ ವಿಶ್ವನಾಥ್​ ಕೂಡ ಅಳಲು ಶುರು ಮಾಡಿದರು!

‘ನೀನು ಬಿಗ್​ ಬಾಸ್​ಗೆ ಹೋಗುತ್ತಿದ್ದೀಯ ಅಂದಾಗ, ಅಬ್ಬಾ ಆರಾಮಾಗಿ ಇರೋಣ ಎಂದುಕೊಂಡಿದ್ದೆ. ಆದರೆ ನಿನ್ನನ್ನು ಎಷ್ಟು ಮಿಸ್​ ಮಾಡುತ್ತಿದ್ದೇನೆ ಅಂತ ನೀನು ಹೋದ ಮರುದಿನ ಗೊತ್ತಾಯಿತು. ಮನೆಯಲ್ಲಿ ತಲೆಹರಟೆ ಮಾಡುತ್ತಿದ್ದ ಮಗುವೇ ಕಾಣಿಸುತ್ತಿಲ್ಲ ಎಂಬಂತೆ ಅನಿಸುತ್ತಿದೆ. ಮೌನ ಆವರಿಸಿದೆ. ಕಳೆದ ವರ್ಷ ಲಾಕ್​ಡೌನ್​ನಲ್ಲಿ ನಾವು ಮಂಗಳೂರಿನಲ್ಲಿ ಇದ್ವಿ. ಬೇರೆ ಯಾರೂ ಇರಲಿಲ್ಲ. ಈಗ ಎಲ್ಲರೂ ಇದ್ದಾರೆ. ಆದರೆ ನೀನು ಇಲ್ಲ. ಇದೇ ನನಗೆ ಕಷ್ಟದ ಲಾಕ್​ಡೌನ್​ ಎನಿಸುತ್ತಿದೆ’ ಎಂದು ಶುಭಾ ಪೂಂಜಾ ಬಾಯ್​ಫ್ರೆಂಡ್​ ವಾಯ್ಸ್​ ಮೆಸೇಜ್​ ಕಳಿಸಿದ್ದರು.

ಇದನ್ನು ಕೇಳಿಸಿಕೊಂಡ ವಿಶ್ವ ಸಿಕ್ಕಾಪಟ್ಟೆ ಅತ್ತು ಬಿಟ್ಟರು. ಕಣ್ಣೀರನ್ನು ತಡೆದುಕೊಳ್ಳಲು ಅವರು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಅಷ್ಟಕ್ಕೂ ಶುಭಾ ಪೂಂಜಾ ಅವರ ಬಾಯ್​ ಫ್ರೆಂಡ್​ ಧ್ವನಿ ಕೇಳಿ ಈ ಪುಟಾಣಿ ವಿಶ್ವ ಯಾಕೆ ಅಳುತ್ತಿದ್ದಾನೆ ಎಂದು ಮನೆಯ ಎಲ್ಲ ಸದಸ್ಯರಿಗೂ ಪ್ರಶ್ನೆ ಮೂಡಿತು. ಅಷ್ಟೇ ಅಲ್ಲದೆ, ನಿರೂಪಕ ಕಿಚ್ಚ ಸುದೀಪ್​ ಕೂಡ ವಿಶ್ವನಿಗೆ ಈ ಪ್ರಶ್ನೆ ಕೇಳಿದರು. ಆಗ ವಿಶ್ವ ಅಸಲಿ ಕಾರಣ ಬಾಯಿ ಬಿಟ್ಟರು.

‘ಮೊದಲು ಶುಭ ಅಕ್ಕನ್ನ ನೋಡಿದೆ. ಸಡನ್​ ಆಗಿ ಅಮ್ಮ ನೆನಪಾದರು. ಕಳೆದ ಬಾರಿ ನನಗೆ ಅಮ್ಮನ ವಾಯ್ಸ್​ ಮೆಸೇಜ್​ ಬಂದಿತ್ತು. ನಂತರ ಅಪ್ಪ ಮಾತನಾಡುತ್ತಾರೆ ಎಂದು ಕಾಯುತ್ತಿದ್ದೆ. ಆದರೆ ಅವರ ಧ್ವನಿ ಬರಲೇ ಇಲ್ಲ. ಅಂದು ನಾನು ಎಲ್ಲರ ಮುಂದೆ ಅಳು ತಡೆದುಕೊಂಡಿದ್ದೆ. ಆದರೆ ಇವತ್ತು ಏನೋ ಕನೆಕ್ಟ್​ ಆದಂತೆ ಆಯಿತು. ಅಪ್ಪನ ಧ್ವನಿ ನೆನಪಿಗೆ ಬಂತು’ ಸುದೀಪ್​ ಎದುರಿನಲ್ಲಿ ಎಲ್ಲವನ್ನೂ ಒಪ್ಪಿಕೊಂಡರು ವಿಶ್ವ.

ಇದನ್ನೂ ಓದಿ: Bigg Boss Elimination: ಬಿಗ್​ ಬಾಸ್​ನಿಂದ ಹೊರಬಿದ್ದ ಚಂದ್ರಕಲಾ ಮೋಹನ್​? ಎಲಿಮಿನೇಷನ್​ಗೆ ಆ ಒಂದು ವರ್ತನೆಯೇ ಕಾರಣ

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!