AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಮಂಜು ಪಾವಗಡ ಅಲ್ಲ, ಬಿಗ್​ ಬಾಸ್​ ಗೆಲ್ಲೋದು ಇವರು!

ಮಂಜು ಅವರನ್ನು ಕುಗ್ಗಿಸಬೇಕು ಎಂದು ಪ್ರಶಾಂತ್​ ಸಂಬರಗಿ ಸಾಕಷ್ಟು ಪ್ಲ್ಯಾನ್​ ಮಾಡಿದ್ದಾರೆ. ಇದು ವರ್ಕ್​ ಆಗಿದೆ ಕೂಡ. ದಿವ್ಯಾ ಸುರೇಶ್​ ಕೂಡ ನಿಧಾನವಾಗಿ ಮಂಜು ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದಾರೆ.

Bigg Boss Kannada: ಮಂಜು ಪಾವಗಡ ಅಲ್ಲ, ಬಿಗ್​ ಬಾಸ್​ ಗೆಲ್ಲೋದು ಇವರು!
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
| Edited By: |

Updated on: Apr 18, 2021 | 8:22 AM

Share

ಬಿಗ್​ ಬಾಸ್​ ಆರಂಭವಾದಾಗ ಮಂಜು ಪಾವಗಡ ಸ್ಟ್ರಾಂಗ್​ ಸ್ಪರ್ಧಿ​ ಎಂದು ಹೇಳಲಾಗಿತ್ತು. ಆದರೆ, ದಿನ ಕಳೆದಂತೆ ಅದು ಬದಲಾಗುತ್ತಾ ಬಂದಿದೆ. ಮಂಜುಗೆ ಕಾಂಪಿಟೇಷನ್​ ಕೊಡೋಕೆ ಮನೆಯಲ್ಲಿ ಸಾಕಷ್ಟು ಸ್ಪರ್ಧಿಗಳು ರೆಡಿ ಆಗಿದ್ದಾರೆ. ಹೀಗಾಗಿ ಈ ಬಾರಿ ಬಿಗ್​ ಬಾಸ್​ ಗೆಲ್ಲೋದು ಯಾರು ಎಂದು ಕೇಳಿದರೆ ಅದಕ್ಕೆ ಉತ್ತರ ಬೇರೆಯದೇ ಸಿಗುತ್ತದೆ. ಮಂಜು ಅವರನ್ನು ಕುಗ್ಗಿಸಬೇಕು ಎಂದು ಪ್ರಶಾಂತ್​ ಸಂಬರಗಿ ಸಾಕಷ್ಟು ಪ್ಲ್ಯಾನ್​ ಮಾಡಿದ್ದಾರೆ. ಇದು ವರ್ಕ್​ ಆಗಿದೆ ಕೂಡ. ದಿವ್ಯಾ ಸುರೇಶ್​ ಕೂಡ ನಿಧಾನವಾಗಿ ಮಂಜು ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇನ್ನು, ಅರವಿಂದ್ ಸಾಕಷ್ಟು ಶೈನ್​ ಆಗುತ್ತಿದ್ದಾರೆ. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಚರ್ಚೆ ಆಗಿದೆ. ರಘು ಗೌಡ ಹೀಗೊಂದು ಅಭಿಪ್ರಾಯ ಹೊರ ಹಾಕಿದ್ದಾರೆ.

ಶಮಂತ್​ ಅವರ ಜತೆಗೆ ಮಾತನಾಡುತ್ತಾ ಬಿಗ್​ ಬಾಸ್​ ಮನೆಯಲ್ಲಿ ಟಫ್​ ಕಾಂಪಿಟೇಷನ್​ ಎಂದರೆ ಯಾರು ಎಂದು ನಿನಗೆ ಅನಿಸುತ್ತದೆ ಎಂಬ ಬಗ್ಗೆ ರಘು ಚರ್ಚೆ ಮಾಡಿದ್ದಾರೆ. ಆಗ ಇಬ್ಬರೂ ಅರವಿಂದ್​ ಕೆ.ಪಿ. ಹೆಸರು ಹೇಳಿದ್ದಾರೆ. ‘ನನಗೆ ಹಾಗೆ ಅನಿಸುತ್ತದೆ. ಅವನು ಸ್ಟ್ರಾಂಗ್​ ಇದಾನೆ. ಸುದೀಪ್​ ಅವರು ಏನಾದರೂ ತಪ್ಪು ಹೇಳಿದರೆ ಅದನ್ನು ತಿದ್ದಿಕೊಂಡು ಮುಂದಿನ ವಾರಕ್ಕೆ ಬದಲಾಗುತ್ತಾನೆ. ಸ್ಟ್ರಾಂಗ್​ ಕೂಡ ಇದಾನೆ. ಅರವಿಂದ್​ ಬಿಗ್​ ಬಾಸ್​ ಮನೆಯಲ್ಲಿ ಗೆಲ್ಲೋ ಚಾನ್ಸ್​ ಇದೆ’ ಎಂದು ರಘು ಹೇಳಿದ್ದಾರೆ.

ಅರವಿಂದ್ ಮನೆಯಲ್ಲಿ ತುಂಬಾನೇ ಹೈಲೈಟ್​ ಆಗುತ್ತಿದ್ದಾರೆ. ದಿವ್ಯಾ ಉರುಡುಗ ಜತೆಗಿನ ಪ್ರೀತಿ ವಿಚಾರ ಸಾಕಷ್ಟು ಸುದ್ದಿಯಾಗುತ್ತಿದ್ದಾರೆ. ಹಾಗಂತ ಇದೊಂದೇ ವಿಚಾರಕ್ಕೆ ಅವರು ಹೈಲೈಟ್​ ಆಗಿಲ್ಲ. ಆಟದಲ್ಲೂ ಅರವಿಂದ್​ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಎರಡನೇ ಬಾರಿ ಕ್ಯಾಪ್ಟನ್​ ಕೂಡ ಆಗಿದ್ದಾರೆ.

ಇದನ್ನೂ ಓದಿ: Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ

Kannada Bigg Boss 8 Elimination: ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ?

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್