AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಮಂಜು ಪಾವಗಡ ಅಲ್ಲ, ಬಿಗ್​ ಬಾಸ್​ ಗೆಲ್ಲೋದು ಇವರು!

ಮಂಜು ಅವರನ್ನು ಕುಗ್ಗಿಸಬೇಕು ಎಂದು ಪ್ರಶಾಂತ್​ ಸಂಬರಗಿ ಸಾಕಷ್ಟು ಪ್ಲ್ಯಾನ್​ ಮಾಡಿದ್ದಾರೆ. ಇದು ವರ್ಕ್​ ಆಗಿದೆ ಕೂಡ. ದಿವ್ಯಾ ಸುರೇಶ್​ ಕೂಡ ನಿಧಾನವಾಗಿ ಮಂಜು ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದಾರೆ.

Bigg Boss Kannada: ಮಂಜು ಪಾವಗಡ ಅಲ್ಲ, ಬಿಗ್​ ಬಾಸ್​ ಗೆಲ್ಲೋದು ಇವರು!
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
| Edited By: |

Updated on: Apr 18, 2021 | 8:22 AM

Share

ಬಿಗ್​ ಬಾಸ್​ ಆರಂಭವಾದಾಗ ಮಂಜು ಪಾವಗಡ ಸ್ಟ್ರಾಂಗ್​ ಸ್ಪರ್ಧಿ​ ಎಂದು ಹೇಳಲಾಗಿತ್ತು. ಆದರೆ, ದಿನ ಕಳೆದಂತೆ ಅದು ಬದಲಾಗುತ್ತಾ ಬಂದಿದೆ. ಮಂಜುಗೆ ಕಾಂಪಿಟೇಷನ್​ ಕೊಡೋಕೆ ಮನೆಯಲ್ಲಿ ಸಾಕಷ್ಟು ಸ್ಪರ್ಧಿಗಳು ರೆಡಿ ಆಗಿದ್ದಾರೆ. ಹೀಗಾಗಿ ಈ ಬಾರಿ ಬಿಗ್​ ಬಾಸ್​ ಗೆಲ್ಲೋದು ಯಾರು ಎಂದು ಕೇಳಿದರೆ ಅದಕ್ಕೆ ಉತ್ತರ ಬೇರೆಯದೇ ಸಿಗುತ್ತದೆ. ಮಂಜು ಅವರನ್ನು ಕುಗ್ಗಿಸಬೇಕು ಎಂದು ಪ್ರಶಾಂತ್​ ಸಂಬರಗಿ ಸಾಕಷ್ಟು ಪ್ಲ್ಯಾನ್​ ಮಾಡಿದ್ದಾರೆ. ಇದು ವರ್ಕ್​ ಆಗಿದೆ ಕೂಡ. ದಿವ್ಯಾ ಸುರೇಶ್​ ಕೂಡ ನಿಧಾನವಾಗಿ ಮಂಜು ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇನ್ನು, ಅರವಿಂದ್ ಸಾಕಷ್ಟು ಶೈನ್​ ಆಗುತ್ತಿದ್ದಾರೆ. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಚರ್ಚೆ ಆಗಿದೆ. ರಘು ಗೌಡ ಹೀಗೊಂದು ಅಭಿಪ್ರಾಯ ಹೊರ ಹಾಕಿದ್ದಾರೆ.

ಶಮಂತ್​ ಅವರ ಜತೆಗೆ ಮಾತನಾಡುತ್ತಾ ಬಿಗ್​ ಬಾಸ್​ ಮನೆಯಲ್ಲಿ ಟಫ್​ ಕಾಂಪಿಟೇಷನ್​ ಎಂದರೆ ಯಾರು ಎಂದು ನಿನಗೆ ಅನಿಸುತ್ತದೆ ಎಂಬ ಬಗ್ಗೆ ರಘು ಚರ್ಚೆ ಮಾಡಿದ್ದಾರೆ. ಆಗ ಇಬ್ಬರೂ ಅರವಿಂದ್​ ಕೆ.ಪಿ. ಹೆಸರು ಹೇಳಿದ್ದಾರೆ. ‘ನನಗೆ ಹಾಗೆ ಅನಿಸುತ್ತದೆ. ಅವನು ಸ್ಟ್ರಾಂಗ್​ ಇದಾನೆ. ಸುದೀಪ್​ ಅವರು ಏನಾದರೂ ತಪ್ಪು ಹೇಳಿದರೆ ಅದನ್ನು ತಿದ್ದಿಕೊಂಡು ಮುಂದಿನ ವಾರಕ್ಕೆ ಬದಲಾಗುತ್ತಾನೆ. ಸ್ಟ್ರಾಂಗ್​ ಕೂಡ ಇದಾನೆ. ಅರವಿಂದ್​ ಬಿಗ್​ ಬಾಸ್​ ಮನೆಯಲ್ಲಿ ಗೆಲ್ಲೋ ಚಾನ್ಸ್​ ಇದೆ’ ಎಂದು ರಘು ಹೇಳಿದ್ದಾರೆ.

ಅರವಿಂದ್ ಮನೆಯಲ್ಲಿ ತುಂಬಾನೇ ಹೈಲೈಟ್​ ಆಗುತ್ತಿದ್ದಾರೆ. ದಿವ್ಯಾ ಉರುಡುಗ ಜತೆಗಿನ ಪ್ರೀತಿ ವಿಚಾರ ಸಾಕಷ್ಟು ಸುದ್ದಿಯಾಗುತ್ತಿದ್ದಾರೆ. ಹಾಗಂತ ಇದೊಂದೇ ವಿಚಾರಕ್ಕೆ ಅವರು ಹೈಲೈಟ್​ ಆಗಿಲ್ಲ. ಆಟದಲ್ಲೂ ಅರವಿಂದ್​ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಎರಡನೇ ಬಾರಿ ಕ್ಯಾಪ್ಟನ್​ ಕೂಡ ಆಗಿದ್ದಾರೆ.

ಇದನ್ನೂ ಓದಿ: Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ

Kannada Bigg Boss 8 Elimination: ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ?

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!