AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಕೊನೆಯ ಎಪಿಸೋಡ್​ನಲ್ಲಿ ವಿನ್ನರ್​ ಘೋಷಿಸಿದ ಸುದೀಪ್​; ಅಚ್ಚರಿ ಮೂಡಿಸಿದ ಕಿಚ್ಚನ ಮಾತು

Bigg Boss Kannada 8 Winner: ಪ್ರತಿಬಾರಿ ಬಿಗ್​ ಬಾಸ್​ ಕೊನೆಯ ದಿನ ಗ್ರ್ಯಾಂಡ್​ ಆಗಿ ಫಿನಾಲೆ ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲಿಸಲಾಗುತ್ತಿರುವುದರಿಂದ ಯಾವುದೇ ರೀತಿಯ ಸಂಭ್ರಮ ಇಲ್ಲ.

ಬಿಗ್​ ಬಾಸ್​ ಕೊನೆಯ ಎಪಿಸೋಡ್​ನಲ್ಲಿ ವಿನ್ನರ್​ ಘೋಷಿಸಿದ ಸುದೀಪ್​; ಅಚ್ಚರಿ ಮೂಡಿಸಿದ ಕಿಚ್ಚನ ಮಾತು
ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
|

Updated on: May 12, 2021 | 3:57 PM

Share

 ಕನ್ನಡ ಬಿಗ್​ ಬಾಸ್ ಸೀಸನ್​ 8 ಶೋನ​ ಕೊನೆಯ ದಿನ ಏನೆಲ್ಲ ಆಯಿತು ಎಂಬುದನ್ನು ಕಲರ್ಸ್​ ಕನ್ನಡ ವಾಹಿನಿ ಮಂಗಳವಾರ ಹಾಗೂ ಬುಧವಾರ ಪ್ರಸಾರ ಮಾಡುತ್ತಿದೆ. ಇಂದು (ಮೇ 12) ಕೊನೆಯ ಎಪಿಸೋಡ್​ ಪ್ರಸಾರವಾಗುತ್ತಿದೆ. ಬಿಗ್​ ಬಾಸ್​ ಶೋ ಸುದೀಪ್​ ಮಾತಿಲ್ಲದೆ ಕೊನೆಗೊಳ್ಳುವುದೇ ಇಲ್ಲ. ಸೀಸನ್​ 8 ಅರ್ಧಕ್ಕೆ ನಿಂತರೂ ಕೊನೆಯಲ್ಲಿ ಸುದೀಪ್​ ಮಾತನಾಡಿದ್ದಾರೆ. ಅಷ್ಟೇ ಅಲ್ಲ, ಅವರು ಕುತೂಹಲ ಎನಿಸುವ ಮಾತೊಂದನ್ನು ಹೇಳಿದ್ದಾರೆ.

ಕೊರೊನಾ ವೈರಸ್ ಎರಡನೇ ಅಲೆ​ ಮಿತಿಮೀರಿದ್ದರಿಂದ ಬಿಗ್​ ಬಾಸ್​ ಶೋ ನಿಲ್ಲಿಸುವುದಾಗಿ ಕಲರ್ಸ್​ ಕನ್ನಡ ವಾಹಿನಿ ಶನಿವಾರ ಘೋಷಣೆ ಮಾಡಿತ್ತು. ಭಾನುವಾರ ಶೂಟ್​ ಮಾಡಲಾದ ಕೊನೆಯ ದಿನದ ಎಪಿಸೋಡ್​ನ ಕೆಲ ಪ್ರಮುಖ ಘಟನೆಗಳನ್ನು ಮಂಗಳವಾರ ಪ್ರಸಾರ ಮಾಡಲಾಗಿದೆ. ಬುಧವಾರವೂ ಇದು ಮುಂದುವರಿಯಲಿದೆ.

ಪ್ರತಿಬಾರಿ ಬಿಗ್​ ಬಾಸ್​ ಕೊನೆಯ ದಿನ ಗ್ರ್ಯಾಂಡ್​ ಆಗಿ ಫಿನಾಲೆ ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲಿಸಲಾಗುತ್ತಿರುವುದರಿಂದ ಯಾವುದೇ ರೀತಿಯ ಸಂಭ್ರಮ ಇಲ್ಲ. ಎಷ್ಟು ಸಾಧ್ಯವೋ ಅಷ್ಟು ಅಚ್ಚುಕಟ್ಟಾಗಿ ಕೊನೆಯ ದಿನದ ಕಾರ್ಯಕ್ರಮವನ್ನು ಮಾಡಲಾಗಿದೆ. ಕೊನೆಯ ದಿನ ಸುದೀಪ್​ ಮಾತನಾಡಿದ್ದಾರೆ. ಅವರ ಮಾತಿನಲ್ಲಿ ಅಚ್ಚರಿ ವಿಚಾರವೊಂದಿತ್ತು.

ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಸುದೀಪ್​ ಮಾತನಾಡಿದ್ದಾರೆ. ಎಲ್ಲರಿಗೂ ಕಿಚ್ಚನ ನಮಸ್ಕಾರ. ಒಂದೆರಡು ವಾರ ಕಾಲ ನಾನು ಬರಲಿಲ್ಲ. ಆಮೇಲೆ ಪ್ರೋಟೋಕಾಲ್​ ಇರುವ ಕಾರಣ ಶೋ ನಡೆಸೋಕೆ ಆಗಿಲ್ಲ. ಈ ಪರಿಸ್ಥಿತಿಯಿಂದ ನನಗೆ ಬಹಳ ಬೇಸರವಾಗುತ್ತಿದೆ. ನನ್ನ ಪ್ರಕಾರ ನೀವೆಲ್ಲರೂ ವಿನ್ನರ್​ಗಳು ಎಂದು ಸುದೀಪ್​ ಹೇಳಿದ್ದಾರೆ.

ಕಳೆದ ಬಾರಿ ಕೊರೊನಾ ಮೊದಲನೇ ಅಲೆ ಕಾಣಿಸಿಕೊಂಡಾಗ ಮಲಯಾಳಂ ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಆ ವೇಳೆ ಅಲ್ಲಿ ವಿನ್ನರ್​ ಯಾರು ಎಂಬುದನ್ನು ಘೋಷಣೆ ಮಾಡಿರಲಿಲ್ಲ. ಈಗ ಕನ್ನಡ ಬಿಗ್​ ಬಾಸ್​ ಸೀಸನ್​ 8 ಕೂಡ ಅದೇ ರೀತಿಯಲ್ಲಿ ಅಂತ್ಯಕಂಡಿದೆ. ಹೊರ ಜಗತ್ತಿನಲ್ಲಿ ಏನಾಗುತ್ತಿದೆ ಎಂಬುದನ್ನು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಟಿವಿ ಮೂಲಕ ತೋರಿಸಲಾಯಿತು. ಅಲ್ಲದೆ, ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲುತ್ತಿದೆ ಎಂಬುದನ್ನು ಘೋಷಿಸಲಾಗಿದೆ.

ಇದನ್ನೂ ಓದಿ: Manju Pavagada: ಉಳಿದವರು ಸೆಟಲ್​ ಆಗಿರಬಹುದು, ಆದರೆ ನನ್ನ ಜೀವನ ಹಾಗಲ್ಲ; ಇದು ಮಂಜು ದುರಾದೃಷ್ಟ

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ