ಬಿಗ್​ ಬಾಸ್​ ಕೊನೆಯ ಎಪಿಸೋಡ್​ನಲ್ಲಿ ವಿನ್ನರ್​ ಘೋಷಿಸಿದ ಸುದೀಪ್​; ಅಚ್ಚರಿ ಮೂಡಿಸಿದ ಕಿಚ್ಚನ ಮಾತು

Bigg Boss Kannada 8 Winner: ಪ್ರತಿಬಾರಿ ಬಿಗ್​ ಬಾಸ್​ ಕೊನೆಯ ದಿನ ಗ್ರ್ಯಾಂಡ್​ ಆಗಿ ಫಿನಾಲೆ ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲಿಸಲಾಗುತ್ತಿರುವುದರಿಂದ ಯಾವುದೇ ರೀತಿಯ ಸಂಭ್ರಮ ಇಲ್ಲ.

ಬಿಗ್​ ಬಾಸ್​ ಕೊನೆಯ ಎಪಿಸೋಡ್​ನಲ್ಲಿ ವಿನ್ನರ್​ ಘೋಷಿಸಿದ ಸುದೀಪ್​; ಅಚ್ಚರಿ ಮೂಡಿಸಿದ ಕಿಚ್ಚನ ಮಾತು
ಕಿಚ್ಚ ಸುದೀಪ್​
Follow us
|

Updated on: May 12, 2021 | 3:57 PM

 ಕನ್ನಡ ಬಿಗ್​ ಬಾಸ್ ಸೀಸನ್​ 8 ಶೋನ​ ಕೊನೆಯ ದಿನ ಏನೆಲ್ಲ ಆಯಿತು ಎಂಬುದನ್ನು ಕಲರ್ಸ್​ ಕನ್ನಡ ವಾಹಿನಿ ಮಂಗಳವಾರ ಹಾಗೂ ಬುಧವಾರ ಪ್ರಸಾರ ಮಾಡುತ್ತಿದೆ. ಇಂದು (ಮೇ 12) ಕೊನೆಯ ಎಪಿಸೋಡ್​ ಪ್ರಸಾರವಾಗುತ್ತಿದೆ. ಬಿಗ್​ ಬಾಸ್​ ಶೋ ಸುದೀಪ್​ ಮಾತಿಲ್ಲದೆ ಕೊನೆಗೊಳ್ಳುವುದೇ ಇಲ್ಲ. ಸೀಸನ್​ 8 ಅರ್ಧಕ್ಕೆ ನಿಂತರೂ ಕೊನೆಯಲ್ಲಿ ಸುದೀಪ್​ ಮಾತನಾಡಿದ್ದಾರೆ. ಅಷ್ಟೇ ಅಲ್ಲ, ಅವರು ಕುತೂಹಲ ಎನಿಸುವ ಮಾತೊಂದನ್ನು ಹೇಳಿದ್ದಾರೆ.

ಕೊರೊನಾ ವೈರಸ್ ಎರಡನೇ ಅಲೆ​ ಮಿತಿಮೀರಿದ್ದರಿಂದ ಬಿಗ್​ ಬಾಸ್​ ಶೋ ನಿಲ್ಲಿಸುವುದಾಗಿ ಕಲರ್ಸ್​ ಕನ್ನಡ ವಾಹಿನಿ ಶನಿವಾರ ಘೋಷಣೆ ಮಾಡಿತ್ತು. ಭಾನುವಾರ ಶೂಟ್​ ಮಾಡಲಾದ ಕೊನೆಯ ದಿನದ ಎಪಿಸೋಡ್​ನ ಕೆಲ ಪ್ರಮುಖ ಘಟನೆಗಳನ್ನು ಮಂಗಳವಾರ ಪ್ರಸಾರ ಮಾಡಲಾಗಿದೆ. ಬುಧವಾರವೂ ಇದು ಮುಂದುವರಿಯಲಿದೆ.

ಪ್ರತಿಬಾರಿ ಬಿಗ್​ ಬಾಸ್​ ಕೊನೆಯ ದಿನ ಗ್ರ್ಯಾಂಡ್​ ಆಗಿ ಫಿನಾಲೆ ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲಿಸಲಾಗುತ್ತಿರುವುದರಿಂದ ಯಾವುದೇ ರೀತಿಯ ಸಂಭ್ರಮ ಇಲ್ಲ. ಎಷ್ಟು ಸಾಧ್ಯವೋ ಅಷ್ಟು ಅಚ್ಚುಕಟ್ಟಾಗಿ ಕೊನೆಯ ದಿನದ ಕಾರ್ಯಕ್ರಮವನ್ನು ಮಾಡಲಾಗಿದೆ. ಕೊನೆಯ ದಿನ ಸುದೀಪ್​ ಮಾತನಾಡಿದ್ದಾರೆ. ಅವರ ಮಾತಿನಲ್ಲಿ ಅಚ್ಚರಿ ವಿಚಾರವೊಂದಿತ್ತು.

ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಸುದೀಪ್​ ಮಾತನಾಡಿದ್ದಾರೆ. ಎಲ್ಲರಿಗೂ ಕಿಚ್ಚನ ನಮಸ್ಕಾರ. ಒಂದೆರಡು ವಾರ ಕಾಲ ನಾನು ಬರಲಿಲ್ಲ. ಆಮೇಲೆ ಪ್ರೋಟೋಕಾಲ್​ ಇರುವ ಕಾರಣ ಶೋ ನಡೆಸೋಕೆ ಆಗಿಲ್ಲ. ಈ ಪರಿಸ್ಥಿತಿಯಿಂದ ನನಗೆ ಬಹಳ ಬೇಸರವಾಗುತ್ತಿದೆ. ನನ್ನ ಪ್ರಕಾರ ನೀವೆಲ್ಲರೂ ವಿನ್ನರ್​ಗಳು ಎಂದು ಸುದೀಪ್​ ಹೇಳಿದ್ದಾರೆ.

ಕಳೆದ ಬಾರಿ ಕೊರೊನಾ ಮೊದಲನೇ ಅಲೆ ಕಾಣಿಸಿಕೊಂಡಾಗ ಮಲಯಾಳಂ ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಆ ವೇಳೆ ಅಲ್ಲಿ ವಿನ್ನರ್​ ಯಾರು ಎಂಬುದನ್ನು ಘೋಷಣೆ ಮಾಡಿರಲಿಲ್ಲ. ಈಗ ಕನ್ನಡ ಬಿಗ್​ ಬಾಸ್​ ಸೀಸನ್​ 8 ಕೂಡ ಅದೇ ರೀತಿಯಲ್ಲಿ ಅಂತ್ಯಕಂಡಿದೆ. ಹೊರ ಜಗತ್ತಿನಲ್ಲಿ ಏನಾಗುತ್ತಿದೆ ಎಂಬುದನ್ನು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಟಿವಿ ಮೂಲಕ ತೋರಿಸಲಾಯಿತು. ಅಲ್ಲದೆ, ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲುತ್ತಿದೆ ಎಂಬುದನ್ನು ಘೋಷಿಸಲಾಗಿದೆ.

ಇದನ್ನೂ ಓದಿ: Manju Pavagada: ಉಳಿದವರು ಸೆಟಲ್​ ಆಗಿರಬಹುದು, ಆದರೆ ನನ್ನ ಜೀವನ ಹಾಗಲ್ಲ; ಇದು ಮಂಜು ದುರಾದೃಷ್ಟ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ