AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ನಮಗೆ ಒತ್ತಡ ಹೇರುತ್ತಾರೆ! ಶಂಕರ್​ ಅಶ್ವತ್ಥ್​ ಹೀಗೆ ಹೇಳಿದ್ದು ಯಾಕೆ?

ಬಿಗ್​ ಬಾಸ್​ ಮನೆಯಲ್ಲಿ ಯಾವುದು ನಿಜ? ಯಾವುದು ನಾಟಕ ಎಂಬ ಬಗ್ಗೆ ಶಂಕರ್​ ಅಶ್ವತ್ಥ್​ ವಿವರ ನೀಡಿದ್ದಾರೆ. ಟಿವಿ9 ಜೊತೆ ಮಾತನಾಡಿರುವ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ನಮಗೆ ಒತ್ತಡ ಹೇರುತ್ತಾರೆ! ಶಂಕರ್​ ಅಶ್ವತ್ಥ್​ ಹೀಗೆ ಹೇಳಿದ್ದು ಯಾಕೆ?
ಬಿಗ್​ ಬಾಸ್​ನಲ್ಲಿ ಶಂಕರ್​ ಅಶ್ವತ್ಥ್​
ಮದನ್​ ಕುಮಾರ್​
| Edited By: |

Updated on: Apr 07, 2021 | 7:32 AM

Share

ಹಿರಿಯ ನಟ ಶಂಕರ್ ಅಶ್ವತ್ಥ್​ ಅವರ ಬಿಗ್​ ಬಾಸ್​ ಜರ್ನಿ ಅಂತ್ಯವಾಗಿದೆ. ಐದು ವಾರಗಳ ಕಾಲ ಸಕ್ರಿಯವಾಗಿದ್ದ ಅವರು ಈಗ ಎಲಿಮಿನೇಟ್​ ಆಗಿ ಹೊರಬಂದಿದ್ದಾರೆ. ದೊಡ್ಮನೆಯಿಂದ ಔಟ್​ ಆದ ಬಳಿಕ ಟಿವಿ9 ಜೊತೆ ಮಾತನಾಡಿರುವ ಶಂಕರ್​ ಅಶ್ವತ್ಥ್​ ಅವರು ಅನೇಕ ವಿಚಾರಗಳ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಏನೆಲ್ಲ ನಡೆಯುತ್ತದೆ ಎಂಬುದನ್ನು ಅವರು ತಿಳಿಸಿದ್ದಾರೆ. ನಮ್ಮ ಮೇಲೆ ಅಸ್ವಾಭಾವಿಕವಾದ ಒತ್ತಡ ಹೇರಲಾಗುತ್ತದೆ ಎಂದಿದ್ದಾರೆ ಶಂಕರ್​ ಅಶ್ವತ್ಥ್​.

ಅಷ್ಟಕ್ಕೂ ಶಂಕರ್​ ಅಶ್ವತ್ಥ್​ ಹೀಗೆ ಹೇಳಲು ಕಾರಣ ಇದೆ. ಬಿಗ್​ ಬಾಸ್​ಮನೆಯಲ್ಲಿ ನೀವು ಕಲಿತ ವಿಷಯ ಏನು ಎಂಬ ಪ್ರಶ್ನೆಗೆ ಉತ್ತರವಾಗಿ ಅವರು ಈ ವಿಚಾರ ಹಂಚಿಕೊಂಡಿದ್ದಾರೆ. ‘ಅಸ್ವಾಭಾವಿಕವಾದ ಒತ್ತಡವನ್ನು ನಮ್ಮ ಮೇಲೆ ಹೇರುತ್ತಾರೆ. ಆದರೆ ಆ ಒತ್ತಡವನ್ನು ನಾವೇ ಕಡಿಮೆ ಮಾಡಿಕೊಳ್ಳುವುದು ಹೇಗೆ ಎಂಬ ಮಾರ್ಗವನ್ನೂ ಬಿಗ್​ ಬಾಸ್​ ತೋರಿಸುತ್ತಾರೆ. ಊಟ-ತಿಂಡಿ, ಟಾಸ್ಕ್​ ಮತ್ತು ಇತರೆ ಸೌಲಭ್ಯಗಳ ವಿಚಾರದಲ್ಲಿ ಒತ್ತಡ ಹೇರುತ್ತಾರೆ. ಆ ಒತ್ತಡದಿಂದ ನಾವೇ ಹೊರಗೆ ಬರಬೇಕು. ಬೇರೆ ಎಲ್ಲಿಯೂ ಈ ರೀತಿ ಮಾಡುವುದಿಲ್ಲ. ಇಂಥ ಪರಿಸ್ಥಿತಿಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಒತ್ತಡ ಹೇಗೆ ನಿಭಾಯಿಸಿಕೊಳ್ಳಬೇಕು ಎಂಬ ಪಾಠವನ್ನು ಪ್ರತಿಯೊಬ್ಬರೂ ಕಲಿಯುತ್ತಾರೆ’ ಎಂದು ಶಂಕರ್​ ಅಶ್ವತ್ಥ್​ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ನಡೆಯುವ ಲವ್​ ಸ್ಟೋರಿಗಳೆಲ್ಲ ನಿಜವೇ? ಈ ಪ್ರಶ್ನೆಗೆ ಶಂಕರ್​ ಅಶ್ವತ್ಥ್​ ಉತ್ತರಿಸಿದ್ದಾರೆ. ‘ಎಲ್ಲರೂ ಕಳ್ಳರೇ. ಲವ್​ ಮಾಡುತ್ತೀನಿ ಅಂತ ಹೇಳ್ತಾರೆ. ಆಮೇಲೆ ನಾಮ ಹಾಕ್ತಾರೆ. ಗೆಲ್ಲುವ ಕುದುರೆಯ ಬಾಲ ಹಿಡಿಯುವವರು ಇರುತ್ತಾರೆ. ಕ್ಯಾಮರಾ ಕಣ್ಣಿಗೆ ಮೋಸ ಮಾಡಲು ಹೋಗುತ್ತಾರೆ. ಆದರೆ ಆಮೇಲೆ ಅವರು ತೆಗೆದುಕೊಳ್ಳುವ ನಿರ್ಣಯವನ್ನು ಪ್ರೇಕ್ಷಕರು ನೋಡುತ್ತಿರುತ್ತಾರೆ. ಅದನ್ನು ಗಮನಿಸಿದರೆ ಪ್ರೇಕ್ಷಕರಿಗೆ ಎಲ್ಲವೂ ಗೊತ್ತಾಗುತ್ತದೆ’ ಎಂಬುದು ಶಂಕರ್​ ಅಶ್ವತ್ಥ್​ ಅಭಿಪ್ರಾಯ.

‘ಬಿಗ್​ ಬಾಸ್​ ಮನೆಯೊಳಗೆ ಇರುವ ಕೆಲವರು ನನ್ನನ್ನು ತಂದೆ ಸ್ಥಾನದಲ್ಲಿ ನೋಡಿದರು. ಅದೇ ದೃಷ್ಟಿಯಿಂದ ಮಾತನಾಡಿಸಿದರು. ಆ ಭಾಗ್ಯ ನನಗೆ ಸಿಕ್ಕಿತು. ನಾನೂ ಒಬ್ಬ ನಟ. ಹಾಗಾಗಿ ನನ್ನ ಎದುರು ಯಾರು ನಾಟಕ ಮಾಡುತ್ತಿದ್ದಾರೆ? ಯಾರು ಎಷ್ಟು ಡೋಂಗಿ ಎಂಬುದು ನನಗೆ ಗೊತ್ತಾಗುತ್ತದೆ. ಒಂದು ಹಂತದಲ್ಲಾದರೂ ಒಳ್ಳೆಯ ಸಂಸ್ಕೃತಿಯ ಜನರು ಎಂಬುದು ಗೊತ್ತಾಯಿತು. ಹಾಗಾಗಿ ನನಗೆ ಬಾಂಧವ್ಯ ಬೆಳೆಯಿತು’ ಎಂದು ಶಂಕರ್​ ಅಶ್ವತ್ಥ್​ ಹೇಳಿದ್ದಾರೆ.

ಇದನ್ನೂ ಓದಿ: Shankar Ashwath: ಸುದೀಪ್​ ಎದುರಲ್ಲೇ ಹೆಂಡತಿ ಬಳಿ ಕ್ಷಮೆ ಕೇಳಿದ ಶಂಕರ್​ ಅಶ್ವತ್ಥ್​! ಅಂಥ ತಪ್ಪು ಏನಾಯ್ತು?

ಬಿಗ್​ ಬಾಸ್​ ಮನೆಯಲ್ಲಿರುವ ಮಹಿಳಾ ಸ್ಪರ್ಧಿಗಳ ಬಗ್ಗೆ ಶಂಕರ್​ ಅಶ್ವತ್ಥ್ ಬೇಸರ!

(Bigg Boss Kannada : Actor Shankar Ashwath Talks about his experience of BBK8)

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ