AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಬಿಗ್​ ಬಾಸ್ ಟ್ರೋಫಿ ಅಥವಾ ದಿವ್ಯಾ ಉರುಡುಗ; ಇದರಲ್ಲಿ ಅರವಿಂದ್​ ಆಯ್ಕೆ ಯಾವುದು? ಹೊರಬಿತ್ತು ಅಚ್ಚರಿಯ ಉತ್ತರ

Bigg Boss Kannada: ಅರವಿಂದ್​ ಕೆಪಿ ಅವರಿಗೆ ಪ್ರೇಕ್ಷಕರು ಹಲವು ಪ್ರಶ್ನೆಗಳನ್ನು ಕೇಳಿದರು. ದಿವ್ಯಾ ಉರುಡುಗ ಅಥವಾ ಬಿಗ್​ ಬಾಸ್​ ಇವೆರಡರಲ್ಲಿ ನಿಮ್ಮ ಆಯ್ಕೆ ಯಾವುದು ಎಂದು ಅವರಿಗೆ ಕೇಳಲಾಯಿತು. ಅದಕ್ಕೆ ಅವರು ತುಂಬ ಜಾಣತನದ ಉತ್ತರ ನೀಡಿದರು.

Divya Uruduga: ಬಿಗ್​ ಬಾಸ್ ಟ್ರೋಫಿ ಅಥವಾ ದಿವ್ಯಾ ಉರುಡುಗ; ಇದರಲ್ಲಿ ಅರವಿಂದ್​ ಆಯ್ಕೆ ಯಾವುದು? ಹೊರಬಿತ್ತು ಅಚ್ಚರಿಯ ಉತ್ತರ
ಅರವಿಂದ್​ ಕೆಪಿ - ದಿವ್ಯಾ ಉರುಡುಗ
ಮದನ್​ ಕುಮಾರ್​
| Edited By: |

Updated on:May 13, 2021 | 11:38 AM

Share

ಹತ್ತು ವಾರಗಳ ಕಾಲ ಯಶಸ್ವಿಯಾಗಿ ನಡೆದುಕೊಂಡು ಬಂದಿದ್ದ ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಕೊರೊನಾ ಕಾರಣದಿಂದ ಅಂತ್ಯ ಕಂಡಿತು. ಅನಿರೀಕ್ಷಿತವಾಗಿ ಈ ರಿಲಿಯಾಟಿ ಶೋ ಕೊನೆಯಾಗುವಾಗ ಮನೆಯಲ್ಲಿ 11 ಜನ ಸ್ಪರ್ಧಿಗಳಿದ್ದರು. ಅದಕ್ಕೂ ಮುನ್ನವೇ ದಿವ್ಯಾ ಉರುಡುಗ ಅವರು ಅನಾರೋಗ್ಯದ ಕಾರಣದಿಂದ ಹೊರಬಂದಿದ್ದರು. ದಿವ್ಯಾ ನಿರ್ಗಮನದ ಬಳಿಕ, ಅವರನ್ನು ತುಂಬ ಹಚ್ಚಿಕೊಂಡಿದ್ದ ಅರವಿಂದ್​ ಕೆಪಿ ಕೊಂಚ ಡಲ್​ ಆದಂತೆ ಕಂಡರು. ಈಗ ಅವರು ಕೂಡ ಮನೆಯಿಂದ ಹೊರಬಂದಿದ್ದು, ದಿವ್ಯಾ ಬಗ್ಗೆ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ.

ಕಲರ್ಸ್​ ಕನ್ನಡ ವಾಹಿನಿಯ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಲೈವ್​ ಬಂದಿದ್ದ ಅರವಿಂದ್​ ಅವರಿಗೆ ಪ್ರೇಕ್ಷಕರು ಹಲವು ಪ್ರಶ್ನೆಗಳನ್ನು ಕೇಳಿದರು. ಅದರಲ್ಲಿ ದಿವ್ಯಾ ಉರುಡುಗ ಬಗ್ಗೆಯೂ ಪ್ರಶ್ನೆ ಎದುರಾಯಿತು. ದಿವ್ಯಾ ಉರುಡುಗ ಅಥವಾ ಬಿಗ್​ ಬಾಸ್​ ಇವೆರಡರಲ್ಲಿ ನಿಮ್ಮ ಆಯ್ಕೆ ಯಾವುದು ಎಂದು ಅರವಿಂದ್​ಗೆ ಕೇಳಲಾಯಿತು. ಅದಕ್ಕೆ ಅವರು ತುಂಬ ಜಾಣತನದ ಉತ್ತರ ನೀಡಿದರು.

‘ದಿವ್ಯಾ ಉರುಡುಗ ಈಗಾಗಲೇ ನನ್ನನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಮತ್ತೆ ನಾನು ಅವರನ್ನು ಆಯ್ಕೆ ಮಾಡಬೇಕಾಗಿಲ್ಲ. ನನ್ನ ಆಯ್ಕೆ ಬಿಗ್​ ಬಾಸ್​ ಆಗಿರುತ್ತದೆ. ಅಲ್ಲಿ ಎಲ್ಲರೂ ಬಂದಿದ್ದು ಕೂಡ ಬಿಗ್​ ಬಾಸ್​ ಗೆಲ್ಲೋದಕ್ಕೆ. ಅಲ್ಲಿ ಯಾರನ್ನೂ ಫ್ರೆಂಡ್ಸ್​ ಮಾಡಿಕೊಳ್ಳೋಕೆ ಅಲ್ಲ ಅಂತಾನೇ ನಾನು ಒಳಗಡೆ ಹೋಗಿದ್ದು. ಆಟ ಆಡುವಾಗ ಅದು ನಿಮಗೆ ಗೊತ್ತಾಗುತ್ತದೆ. ಆದರೆ ದಿವ್ಯಾ ಉರುಡುಗ ನನ್ನನ್ನು ಆಯ್ಕೆ ಮಾಡಿಕೊಂಡರು’ ಎಂದು ಅರವಿಂದ್​ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಒಮ್ಮೆ ದಿವ್ಯಾ ಅಡುಗೆ ಮಾಡಿದ್ದರು. ಅದನ್ನು ಸವಿದು ಅರವಿಂದ್​ ತುಂಬ ಖುಷಿಪಟ್ಟಿದ್ದರು. ಹಾಗಾಗಿ ನೀವು ಉಡುಪಿಯಲ್ಲಿ ಒಂದು ಹೋಟೆಲ್​ ಶುರು ಮಾಡಿದರೆ ಒಳ್ಳೆಯದು ಎಂದು ಅರವಿಂದ್​ ಸಲಹೆ ನೀಡಿದ್ದರಂತೆ. ಆ ವಿಚಾರ ಯಾರಿಗೂ ಗೊತ್ತಿರಲಿಲ್ಲ. ಅದನ್ನು​ ಲೈವ್​ನಲ್ಲಿ ಅವರು ತೆರೆದಿಟ್ಟರು. ‘ಹೊರಗೆ ಬಂದ ಬಳಿಕ ದಿವ್ಯಾಗೆ ಫೋನ್​ ಮಾಡಿದ್ದೆ. ಅವರು ಚೇತರಿಸಿಕೊಂಡಿದ್ದಾರೆ. ನಾರ್ಮಲ್​ ಆಗೋಕೆ ಇನ್ನೂ ಸ್ವಲ್ಪ ದಿನ ಬೇಕು. ದಿವ್ಯಾ ಕೊಟ್ಟ ರಿಂಗ್​ ಕೈಯಲ್ಲೇ ಇದೆ. ಅದನ್ನು ಯಾವಾಗಲೂ ತೆಗೆಯೋದಿಲ್ಲ’ ಎಂದು ಅರವಿಂದ್​ ಹೇಳಿದ್ದಾರೆ.

ಇದನ್ನೂ ಓದಿ:

ಬಿಗ್ ಬಾಸ್ ಮನೆ ಸೇರಿ ಕ್ಯಾಶ್​ ಪ್ರೈಜ್​ಗಿಂತ ಹೆಚ್ಚಿನದ್ದನ್ನೇ ಸಂಪಾದಿಸಿದ್ದಾರೆ ದಿವ್ಯಾ ಉರುಡುಗ

ನಂಗೆ ಒಂಥರಾ ಆಗ್ತಿದೆ; ಅರವಿಂದ್​ ಮಾಡಿದ ಸೇವೆ ನೋಡಿ ದಿವ್ಯಾ ಉರುಡುಗ ನಾಚಿ ನೀರಾದರು

Published On - 10:49 am, Thu, 13 May 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?