AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?

‘ಒಂದು ವಾರದಲ್ಲಿ ನಿಮ್ಮಿಬ್ಬರೊಳಗೆ ಯಾರಾದರೂ ಒಬ್ಬರು ಹೊರಗಡೆ ಹೋಗಬೇಕು ಎನ್ನುವಂತಹ ಪರಿಸ್ಥಿತಿ ಬಂದರೆ ಏನು ಮಾಡುತ್ತೀರಿ’ ಎಂದು ಸುದೀಪ್​ ಪ್ರಶ್ನೆ ಕೇಳಿದರು. ದಿವ್ಯಾ ಉರುಡುಗ ಅವರಿಗೆ ಮೊದಲು ಈ ಪ್ರಶ್ನೆ ಕೇಳಲಾಯಿತು.

Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?
ಅರವಿಂದ್​ ಕೆಪಿ, ದಿವ್ಯಾ ಉರುಡುಗ
ಮದನ್​ ಕುಮಾರ್​
|

Updated on:Jun 27, 2021 | 9:00 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಅತಿ ಹೆಚ್ಚು ಗಮನ ಸೆಳೆದ ಜೋಡಿ ಎಂದರೆ ಅದು ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆಪಿ. ಆರಂಭದಲ್ಲಿ ಅಷ್ಟೇನೂ ಆಪ್ತವಾಗಿಲ್ಲದ ಅವರು ‘ಜೋಡಿ ಟಾಸ್ಕ್​’ ಮುಗಿದ ಬಳಿಕ ತುಂಬ ಆತ್ಮೀಯರಾಗಿಬಿಟ್ಟರು. 42 ದಿನಗಳ ಗ್ಯಾಪ್​ ಬಳಿಕ ಈಗ ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ ಆರಂಭ ಆಗಿದೆ. ಹಾಗಿದ್ದರೂ ಇಬ್ಬರ ನಡುವಿನ ಬಾಂಧವ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇದನ್ನು ತಿಳಿದುಕೊಳ್ಳುವ ಸಲುವಾಗಿಯೇ ಕಿಚ್ಚ ಸುದೀಪ್​ ಒಂದು ಪ್ರಶ್ನೆ ಕೇಳಿದರು. ಅದಕ್ಕೆ ಇಬ್ಬರಿಂದಲೂ ಬೇರೆ ಬೇರೆ ಉತ್ತರಗಳು ಬಂದವು.

‘ಒಂದು ವಾರದಲ್ಲಿ ನಿಮ್ಮಿಬ್ಬರೊಳಗೆ ಯಾರಾದರೂ ಒಬ್ಬರು ಹೊರಗಡೆ ಹೋಗಬೇಕು ಎನ್ನುವಂತಹ ಪರಿಸ್ಥಿತಿ ಬಂದರೆ ಏನು ಮಾಡುತ್ತೀರಿ’ ಎಂದು ಸುದೀಪ್​ ಪ್ರಶ್ನೆ ಕೇಳಿದರು. ದಿವ್ಯಾ ಉರುಡುಗ ಅವರಿಗೆ ಮೊದಲು ಈ ಪ್ರಶ್ನೆ ಕೇಳಲಾಯಿತು. ಅದಕ್ಕೆ ದಿವ್ಯಾ ಉತ್ತರಿಸುವ ಬದಲು ತಬ್ಬಿಬ್ಬಾದರು. ‘ಇದೊಂದು ಆಟ ಎಂದು ಪರಿಗಣಿಸಿ… ನಾನು..’ ಎಂದು ದಿವ್ಯಾ ವಿವರಣೆ ನೀಡಲು ಮುಂದಾದರು. ‘ನನಗೆ ವಿವರಣೆ ಬೇಡ. ಉತ್ತರ ಬೇಕು’ ಎಂದು ಸುದೀಪ್​ ಖಡಕ್​ ಆಗಿ ಹೇಳಿದರು.

ಆಗ ದಿವ್ಯಾ ಅವರಿಗೆ ಅನಿವಾರ್ಯ ಆಯಿತು. ‘ನಾನೇ ಉಳಿದುಕೊಳ್ಳುತ್ತೇನೆ’ ಎಂದು ಅವರು ಉತ್ತರಿಸಿದರು. ಅದೇ ಪ್ರಶ್ನೆಯನ್ನು ಅರವಿಂದ್​ಗೆ ಕೇಳಲಾಯಿತು. ಅವರು ನೇರವಾಗಿ ಉತ್ತರ ನೀಡಿದರು. ‘ನಾನು ಹೋಗ್ತೀನಿ ಸರ್​. ನಾನು ಬಿಟ್ಟುಕೊಡ್ತೀನಿ. ಅವರು ಇರಲಿ’ ಎಂದು ಹೇಳುವ ಮೂಲಕ ಅವರು ಎಲ್ಲರಿಗೂ ಅಚ್ಚರಿ ಮೂಡಿಸಿದರು. ಈ ಉತ್ತರ ಕೇಳಿಸಿಕೊಂಡ ದಿವ್ಯಾ ಎಮೋಷನಲ್​ ಆದರು.

ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆಪಿ ನಡುವಿನ ಆಪ್ತತೆ ಕಂಡು ಎಲ್ಲರಿಗೂ ಕೆಲವು ಅನುಮಾನಗಳು ಮೂಡಿವೆ. ಅವರಿಬ್ಬರು ನಿಜಜೀವನದಲ್ಲಿ ಮದುವೆ ಆಗುತ್ತಾರೇನೋ ಎಂಬ ಗುಮಾನಿ ಕೂಡ ಹರಡಿದೆ. ಬಿಗ್​ ಬಾಸ್​ ಮನೆಯೊಳಗೆ ಈ ಬಗ್ಗೆ ಅನೇಕ ಬಾರಿ ಚರ್ಚೆ ಕೂಡ ನಡೆದಿದ್ದುಂಟು. ಆದರೆ ಈ ಕುರಿತು ಅವರಿಬ್ಬರು ಯಾವುದನ್ನೂ ಸ್ಪಷ್ಟವಾಗಿ ಹೇಳಿಲ್ಲ. 42 ದಿನಗಳ ಕಾಲ ಬಿಗ್​ ಬಾಸ್​ನಿಂದ ಹೊರಗಿದ್ದು ಬಂದ ಬಳಿಕವೂ ಅವರ ನಡುವಿನ ಆಪ್ತತೆ ಕಮ್ಮಿ ಆಗಿಲ್ಲ.

ಇದನ್ನೂ ಓದಿ:

Divya Uruduga: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ

Divya Uruduga: ಬಿಗ್​ ಬಾಸ್ ಟ್ರೋಫಿ ಅಥವಾ ದಿವ್ಯಾ ಉರುಡುಗ; ಇದರಲ್ಲಿ ಅರವಿಂದ್​ ಆಯ್ಕೆ ಯಾವುದು? ಹೊರಬಿತ್ತು ಅಚ್ಚರಿಯ ಉತ್ತರ

Published On - 8:52 am, Sun, 27 June 21

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ