AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?

‘ಒಂದು ವಾರದಲ್ಲಿ ನಿಮ್ಮಿಬ್ಬರೊಳಗೆ ಯಾರಾದರೂ ಒಬ್ಬರು ಹೊರಗಡೆ ಹೋಗಬೇಕು ಎನ್ನುವಂತಹ ಪರಿಸ್ಥಿತಿ ಬಂದರೆ ಏನು ಮಾಡುತ್ತೀರಿ’ ಎಂದು ಸುದೀಪ್​ ಪ್ರಶ್ನೆ ಕೇಳಿದರು. ದಿವ್ಯಾ ಉರುಡುಗ ಅವರಿಗೆ ಮೊದಲು ಈ ಪ್ರಶ್ನೆ ಕೇಳಲಾಯಿತು.

Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?
ಅರವಿಂದ್​ ಕೆಪಿ, ದಿವ್ಯಾ ಉರುಡುಗ
Follow us
ಮದನ್​ ಕುಮಾರ್​
|

Updated on:Jun 27, 2021 | 9:00 AM

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಅತಿ ಹೆಚ್ಚು ಗಮನ ಸೆಳೆದ ಜೋಡಿ ಎಂದರೆ ಅದು ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆಪಿ. ಆರಂಭದಲ್ಲಿ ಅಷ್ಟೇನೂ ಆಪ್ತವಾಗಿಲ್ಲದ ಅವರು ‘ಜೋಡಿ ಟಾಸ್ಕ್​’ ಮುಗಿದ ಬಳಿಕ ತುಂಬ ಆತ್ಮೀಯರಾಗಿಬಿಟ್ಟರು. 42 ದಿನಗಳ ಗ್ಯಾಪ್​ ಬಳಿಕ ಈಗ ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ ಆರಂಭ ಆಗಿದೆ. ಹಾಗಿದ್ದರೂ ಇಬ್ಬರ ನಡುವಿನ ಬಾಂಧವ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇದನ್ನು ತಿಳಿದುಕೊಳ್ಳುವ ಸಲುವಾಗಿಯೇ ಕಿಚ್ಚ ಸುದೀಪ್​ ಒಂದು ಪ್ರಶ್ನೆ ಕೇಳಿದರು. ಅದಕ್ಕೆ ಇಬ್ಬರಿಂದಲೂ ಬೇರೆ ಬೇರೆ ಉತ್ತರಗಳು ಬಂದವು.

‘ಒಂದು ವಾರದಲ್ಲಿ ನಿಮ್ಮಿಬ್ಬರೊಳಗೆ ಯಾರಾದರೂ ಒಬ್ಬರು ಹೊರಗಡೆ ಹೋಗಬೇಕು ಎನ್ನುವಂತಹ ಪರಿಸ್ಥಿತಿ ಬಂದರೆ ಏನು ಮಾಡುತ್ತೀರಿ’ ಎಂದು ಸುದೀಪ್​ ಪ್ರಶ್ನೆ ಕೇಳಿದರು. ದಿವ್ಯಾ ಉರುಡುಗ ಅವರಿಗೆ ಮೊದಲು ಈ ಪ್ರಶ್ನೆ ಕೇಳಲಾಯಿತು. ಅದಕ್ಕೆ ದಿವ್ಯಾ ಉತ್ತರಿಸುವ ಬದಲು ತಬ್ಬಿಬ್ಬಾದರು. ‘ಇದೊಂದು ಆಟ ಎಂದು ಪರಿಗಣಿಸಿ… ನಾನು..’ ಎಂದು ದಿವ್ಯಾ ವಿವರಣೆ ನೀಡಲು ಮುಂದಾದರು. ‘ನನಗೆ ವಿವರಣೆ ಬೇಡ. ಉತ್ತರ ಬೇಕು’ ಎಂದು ಸುದೀಪ್​ ಖಡಕ್​ ಆಗಿ ಹೇಳಿದರು.

ಆಗ ದಿವ್ಯಾ ಅವರಿಗೆ ಅನಿವಾರ್ಯ ಆಯಿತು. ‘ನಾನೇ ಉಳಿದುಕೊಳ್ಳುತ್ತೇನೆ’ ಎಂದು ಅವರು ಉತ್ತರಿಸಿದರು. ಅದೇ ಪ್ರಶ್ನೆಯನ್ನು ಅರವಿಂದ್​ಗೆ ಕೇಳಲಾಯಿತು. ಅವರು ನೇರವಾಗಿ ಉತ್ತರ ನೀಡಿದರು. ‘ನಾನು ಹೋಗ್ತೀನಿ ಸರ್​. ನಾನು ಬಿಟ್ಟುಕೊಡ್ತೀನಿ. ಅವರು ಇರಲಿ’ ಎಂದು ಹೇಳುವ ಮೂಲಕ ಅವರು ಎಲ್ಲರಿಗೂ ಅಚ್ಚರಿ ಮೂಡಿಸಿದರು. ಈ ಉತ್ತರ ಕೇಳಿಸಿಕೊಂಡ ದಿವ್ಯಾ ಎಮೋಷನಲ್​ ಆದರು.

ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆಪಿ ನಡುವಿನ ಆಪ್ತತೆ ಕಂಡು ಎಲ್ಲರಿಗೂ ಕೆಲವು ಅನುಮಾನಗಳು ಮೂಡಿವೆ. ಅವರಿಬ್ಬರು ನಿಜಜೀವನದಲ್ಲಿ ಮದುವೆ ಆಗುತ್ತಾರೇನೋ ಎಂಬ ಗುಮಾನಿ ಕೂಡ ಹರಡಿದೆ. ಬಿಗ್​ ಬಾಸ್​ ಮನೆಯೊಳಗೆ ಈ ಬಗ್ಗೆ ಅನೇಕ ಬಾರಿ ಚರ್ಚೆ ಕೂಡ ನಡೆದಿದ್ದುಂಟು. ಆದರೆ ಈ ಕುರಿತು ಅವರಿಬ್ಬರು ಯಾವುದನ್ನೂ ಸ್ಪಷ್ಟವಾಗಿ ಹೇಳಿಲ್ಲ. 42 ದಿನಗಳ ಕಾಲ ಬಿಗ್​ ಬಾಸ್​ನಿಂದ ಹೊರಗಿದ್ದು ಬಂದ ಬಳಿಕವೂ ಅವರ ನಡುವಿನ ಆಪ್ತತೆ ಕಮ್ಮಿ ಆಗಿಲ್ಲ.

ಇದನ್ನೂ ಓದಿ:

Divya Uruduga: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ

Divya Uruduga: ಬಿಗ್​ ಬಾಸ್ ಟ್ರೋಫಿ ಅಥವಾ ದಿವ್ಯಾ ಉರುಡುಗ; ಇದರಲ್ಲಿ ಅರವಿಂದ್​ ಆಯ್ಕೆ ಯಾವುದು? ಹೊರಬಿತ್ತು ಅಚ್ಚರಿಯ ಉತ್ತರ

Published On - 8:52 am, Sun, 27 June 21

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!