AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?

‘ಒಂದು ವಾರದಲ್ಲಿ ನಿಮ್ಮಿಬ್ಬರೊಳಗೆ ಯಾರಾದರೂ ಒಬ್ಬರು ಹೊರಗಡೆ ಹೋಗಬೇಕು ಎನ್ನುವಂತಹ ಪರಿಸ್ಥಿತಿ ಬಂದರೆ ಏನು ಮಾಡುತ್ತೀರಿ’ ಎಂದು ಸುದೀಪ್​ ಪ್ರಶ್ನೆ ಕೇಳಿದರು. ದಿವ್ಯಾ ಉರುಡುಗ ಅವರಿಗೆ ಮೊದಲು ಈ ಪ್ರಶ್ನೆ ಕೇಳಲಾಯಿತು.

Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?
ಅರವಿಂದ್​ ಕೆಪಿ, ದಿವ್ಯಾ ಉರುಡುಗ
ಮದನ್​ ಕುಮಾರ್​
|

Updated on:Jun 27, 2021 | 9:00 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಅತಿ ಹೆಚ್ಚು ಗಮನ ಸೆಳೆದ ಜೋಡಿ ಎಂದರೆ ಅದು ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆಪಿ. ಆರಂಭದಲ್ಲಿ ಅಷ್ಟೇನೂ ಆಪ್ತವಾಗಿಲ್ಲದ ಅವರು ‘ಜೋಡಿ ಟಾಸ್ಕ್​’ ಮುಗಿದ ಬಳಿಕ ತುಂಬ ಆತ್ಮೀಯರಾಗಿಬಿಟ್ಟರು. 42 ದಿನಗಳ ಗ್ಯಾಪ್​ ಬಳಿಕ ಈಗ ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ ಆರಂಭ ಆಗಿದೆ. ಹಾಗಿದ್ದರೂ ಇಬ್ಬರ ನಡುವಿನ ಬಾಂಧವ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇದನ್ನು ತಿಳಿದುಕೊಳ್ಳುವ ಸಲುವಾಗಿಯೇ ಕಿಚ್ಚ ಸುದೀಪ್​ ಒಂದು ಪ್ರಶ್ನೆ ಕೇಳಿದರು. ಅದಕ್ಕೆ ಇಬ್ಬರಿಂದಲೂ ಬೇರೆ ಬೇರೆ ಉತ್ತರಗಳು ಬಂದವು.

‘ಒಂದು ವಾರದಲ್ಲಿ ನಿಮ್ಮಿಬ್ಬರೊಳಗೆ ಯಾರಾದರೂ ಒಬ್ಬರು ಹೊರಗಡೆ ಹೋಗಬೇಕು ಎನ್ನುವಂತಹ ಪರಿಸ್ಥಿತಿ ಬಂದರೆ ಏನು ಮಾಡುತ್ತೀರಿ’ ಎಂದು ಸುದೀಪ್​ ಪ್ರಶ್ನೆ ಕೇಳಿದರು. ದಿವ್ಯಾ ಉರುಡುಗ ಅವರಿಗೆ ಮೊದಲು ಈ ಪ್ರಶ್ನೆ ಕೇಳಲಾಯಿತು. ಅದಕ್ಕೆ ದಿವ್ಯಾ ಉತ್ತರಿಸುವ ಬದಲು ತಬ್ಬಿಬ್ಬಾದರು. ‘ಇದೊಂದು ಆಟ ಎಂದು ಪರಿಗಣಿಸಿ… ನಾನು..’ ಎಂದು ದಿವ್ಯಾ ವಿವರಣೆ ನೀಡಲು ಮುಂದಾದರು. ‘ನನಗೆ ವಿವರಣೆ ಬೇಡ. ಉತ್ತರ ಬೇಕು’ ಎಂದು ಸುದೀಪ್​ ಖಡಕ್​ ಆಗಿ ಹೇಳಿದರು.

ಆಗ ದಿವ್ಯಾ ಅವರಿಗೆ ಅನಿವಾರ್ಯ ಆಯಿತು. ‘ನಾನೇ ಉಳಿದುಕೊಳ್ಳುತ್ತೇನೆ’ ಎಂದು ಅವರು ಉತ್ತರಿಸಿದರು. ಅದೇ ಪ್ರಶ್ನೆಯನ್ನು ಅರವಿಂದ್​ಗೆ ಕೇಳಲಾಯಿತು. ಅವರು ನೇರವಾಗಿ ಉತ್ತರ ನೀಡಿದರು. ‘ನಾನು ಹೋಗ್ತೀನಿ ಸರ್​. ನಾನು ಬಿಟ್ಟುಕೊಡ್ತೀನಿ. ಅವರು ಇರಲಿ’ ಎಂದು ಹೇಳುವ ಮೂಲಕ ಅವರು ಎಲ್ಲರಿಗೂ ಅಚ್ಚರಿ ಮೂಡಿಸಿದರು. ಈ ಉತ್ತರ ಕೇಳಿಸಿಕೊಂಡ ದಿವ್ಯಾ ಎಮೋಷನಲ್​ ಆದರು.

ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆಪಿ ನಡುವಿನ ಆಪ್ತತೆ ಕಂಡು ಎಲ್ಲರಿಗೂ ಕೆಲವು ಅನುಮಾನಗಳು ಮೂಡಿವೆ. ಅವರಿಬ್ಬರು ನಿಜಜೀವನದಲ್ಲಿ ಮದುವೆ ಆಗುತ್ತಾರೇನೋ ಎಂಬ ಗುಮಾನಿ ಕೂಡ ಹರಡಿದೆ. ಬಿಗ್​ ಬಾಸ್​ ಮನೆಯೊಳಗೆ ಈ ಬಗ್ಗೆ ಅನೇಕ ಬಾರಿ ಚರ್ಚೆ ಕೂಡ ನಡೆದಿದ್ದುಂಟು. ಆದರೆ ಈ ಕುರಿತು ಅವರಿಬ್ಬರು ಯಾವುದನ್ನೂ ಸ್ಪಷ್ಟವಾಗಿ ಹೇಳಿಲ್ಲ. 42 ದಿನಗಳ ಕಾಲ ಬಿಗ್​ ಬಾಸ್​ನಿಂದ ಹೊರಗಿದ್ದು ಬಂದ ಬಳಿಕವೂ ಅವರ ನಡುವಿನ ಆಪ್ತತೆ ಕಮ್ಮಿ ಆಗಿಲ್ಲ.

ಇದನ್ನೂ ಓದಿ:

Divya Uruduga: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ

Divya Uruduga: ಬಿಗ್​ ಬಾಸ್ ಟ್ರೋಫಿ ಅಥವಾ ದಿವ್ಯಾ ಉರುಡುಗ; ಇದರಲ್ಲಿ ಅರವಿಂದ್​ ಆಯ್ಕೆ ಯಾವುದು? ಹೊರಬಿತ್ತು ಅಚ್ಚರಿಯ ಉತ್ತರ

Published On - 8:52 am, Sun, 27 June 21

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ