AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?

‘ಒಂದು ವಾರದಲ್ಲಿ ನಿಮ್ಮಿಬ್ಬರೊಳಗೆ ಯಾರಾದರೂ ಒಬ್ಬರು ಹೊರಗಡೆ ಹೋಗಬೇಕು ಎನ್ನುವಂತಹ ಪರಿಸ್ಥಿತಿ ಬಂದರೆ ಏನು ಮಾಡುತ್ತೀರಿ’ ಎಂದು ಸುದೀಪ್​ ಪ್ರಶ್ನೆ ಕೇಳಿದರು. ದಿವ್ಯಾ ಉರುಡುಗ ಅವರಿಗೆ ಮೊದಲು ಈ ಪ್ರಶ್ನೆ ಕೇಳಲಾಯಿತು.

Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?
ಅರವಿಂದ್​ ಕೆಪಿ, ದಿವ್ಯಾ ಉರುಡುಗ
ಮದನ್​ ಕುಮಾರ್​
|

Updated on:Jun 27, 2021 | 9:00 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಅತಿ ಹೆಚ್ಚು ಗಮನ ಸೆಳೆದ ಜೋಡಿ ಎಂದರೆ ಅದು ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆಪಿ. ಆರಂಭದಲ್ಲಿ ಅಷ್ಟೇನೂ ಆಪ್ತವಾಗಿಲ್ಲದ ಅವರು ‘ಜೋಡಿ ಟಾಸ್ಕ್​’ ಮುಗಿದ ಬಳಿಕ ತುಂಬ ಆತ್ಮೀಯರಾಗಿಬಿಟ್ಟರು. 42 ದಿನಗಳ ಗ್ಯಾಪ್​ ಬಳಿಕ ಈಗ ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ ಆರಂಭ ಆಗಿದೆ. ಹಾಗಿದ್ದರೂ ಇಬ್ಬರ ನಡುವಿನ ಬಾಂಧವ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇದನ್ನು ತಿಳಿದುಕೊಳ್ಳುವ ಸಲುವಾಗಿಯೇ ಕಿಚ್ಚ ಸುದೀಪ್​ ಒಂದು ಪ್ರಶ್ನೆ ಕೇಳಿದರು. ಅದಕ್ಕೆ ಇಬ್ಬರಿಂದಲೂ ಬೇರೆ ಬೇರೆ ಉತ್ತರಗಳು ಬಂದವು.

‘ಒಂದು ವಾರದಲ್ಲಿ ನಿಮ್ಮಿಬ್ಬರೊಳಗೆ ಯಾರಾದರೂ ಒಬ್ಬರು ಹೊರಗಡೆ ಹೋಗಬೇಕು ಎನ್ನುವಂತಹ ಪರಿಸ್ಥಿತಿ ಬಂದರೆ ಏನು ಮಾಡುತ್ತೀರಿ’ ಎಂದು ಸುದೀಪ್​ ಪ್ರಶ್ನೆ ಕೇಳಿದರು. ದಿವ್ಯಾ ಉರುಡುಗ ಅವರಿಗೆ ಮೊದಲು ಈ ಪ್ರಶ್ನೆ ಕೇಳಲಾಯಿತು. ಅದಕ್ಕೆ ದಿವ್ಯಾ ಉತ್ತರಿಸುವ ಬದಲು ತಬ್ಬಿಬ್ಬಾದರು. ‘ಇದೊಂದು ಆಟ ಎಂದು ಪರಿಗಣಿಸಿ… ನಾನು..’ ಎಂದು ದಿವ್ಯಾ ವಿವರಣೆ ನೀಡಲು ಮುಂದಾದರು. ‘ನನಗೆ ವಿವರಣೆ ಬೇಡ. ಉತ್ತರ ಬೇಕು’ ಎಂದು ಸುದೀಪ್​ ಖಡಕ್​ ಆಗಿ ಹೇಳಿದರು.

ಆಗ ದಿವ್ಯಾ ಅವರಿಗೆ ಅನಿವಾರ್ಯ ಆಯಿತು. ‘ನಾನೇ ಉಳಿದುಕೊಳ್ಳುತ್ತೇನೆ’ ಎಂದು ಅವರು ಉತ್ತರಿಸಿದರು. ಅದೇ ಪ್ರಶ್ನೆಯನ್ನು ಅರವಿಂದ್​ಗೆ ಕೇಳಲಾಯಿತು. ಅವರು ನೇರವಾಗಿ ಉತ್ತರ ನೀಡಿದರು. ‘ನಾನು ಹೋಗ್ತೀನಿ ಸರ್​. ನಾನು ಬಿಟ್ಟುಕೊಡ್ತೀನಿ. ಅವರು ಇರಲಿ’ ಎಂದು ಹೇಳುವ ಮೂಲಕ ಅವರು ಎಲ್ಲರಿಗೂ ಅಚ್ಚರಿ ಮೂಡಿಸಿದರು. ಈ ಉತ್ತರ ಕೇಳಿಸಿಕೊಂಡ ದಿವ್ಯಾ ಎಮೋಷನಲ್​ ಆದರು.

ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆಪಿ ನಡುವಿನ ಆಪ್ತತೆ ಕಂಡು ಎಲ್ಲರಿಗೂ ಕೆಲವು ಅನುಮಾನಗಳು ಮೂಡಿವೆ. ಅವರಿಬ್ಬರು ನಿಜಜೀವನದಲ್ಲಿ ಮದುವೆ ಆಗುತ್ತಾರೇನೋ ಎಂಬ ಗುಮಾನಿ ಕೂಡ ಹರಡಿದೆ. ಬಿಗ್​ ಬಾಸ್​ ಮನೆಯೊಳಗೆ ಈ ಬಗ್ಗೆ ಅನೇಕ ಬಾರಿ ಚರ್ಚೆ ಕೂಡ ನಡೆದಿದ್ದುಂಟು. ಆದರೆ ಈ ಕುರಿತು ಅವರಿಬ್ಬರು ಯಾವುದನ್ನೂ ಸ್ಪಷ್ಟವಾಗಿ ಹೇಳಿಲ್ಲ. 42 ದಿನಗಳ ಕಾಲ ಬಿಗ್​ ಬಾಸ್​ನಿಂದ ಹೊರಗಿದ್ದು ಬಂದ ಬಳಿಕವೂ ಅವರ ನಡುವಿನ ಆಪ್ತತೆ ಕಮ್ಮಿ ಆಗಿಲ್ಲ.

ಇದನ್ನೂ ಓದಿ:

Divya Uruduga: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ

Divya Uruduga: ಬಿಗ್​ ಬಾಸ್ ಟ್ರೋಫಿ ಅಥವಾ ದಿವ್ಯಾ ಉರುಡುಗ; ಇದರಲ್ಲಿ ಅರವಿಂದ್​ ಆಯ್ಕೆ ಯಾವುದು? ಹೊರಬಿತ್ತು ಅಚ್ಚರಿಯ ಉತ್ತರ

Published On - 8:52 am, Sun, 27 June 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ