Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?

‘ಒಂದು ವಾರದಲ್ಲಿ ನಿಮ್ಮಿಬ್ಬರೊಳಗೆ ಯಾರಾದರೂ ಒಬ್ಬರು ಹೊರಗಡೆ ಹೋಗಬೇಕು ಎನ್ನುವಂತಹ ಪರಿಸ್ಥಿತಿ ಬಂದರೆ ಏನು ಮಾಡುತ್ತೀರಿ’ ಎಂದು ಸುದೀಪ್​ ಪ್ರಶ್ನೆ ಕೇಳಿದರು. ದಿವ್ಯಾ ಉರುಡುಗ ಅವರಿಗೆ ಮೊದಲು ಈ ಪ್ರಶ್ನೆ ಕೇಳಲಾಯಿತು.

Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?
ಅರವಿಂದ್​ ಕೆಪಿ, ದಿವ್ಯಾ ಉರುಡುಗ

Updated on: Jun 27, 2021 | 9:00 AM

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಅತಿ ಹೆಚ್ಚು ಗಮನ ಸೆಳೆದ ಜೋಡಿ ಎಂದರೆ ಅದು ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆಪಿ. ಆರಂಭದಲ್ಲಿ ಅಷ್ಟೇನೂ ಆಪ್ತವಾಗಿಲ್ಲದ ಅವರು ‘ಜೋಡಿ ಟಾಸ್ಕ್​’ ಮುಗಿದ ಬಳಿಕ ತುಂಬ ಆತ್ಮೀಯರಾಗಿಬಿಟ್ಟರು. 42 ದಿನಗಳ ಗ್ಯಾಪ್​ ಬಳಿಕ ಈಗ ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ ಆರಂಭ ಆಗಿದೆ. ಹಾಗಿದ್ದರೂ ಇಬ್ಬರ ನಡುವಿನ ಬಾಂಧವ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇದನ್ನು ತಿಳಿದುಕೊಳ್ಳುವ ಸಲುವಾಗಿಯೇ ಕಿಚ್ಚ ಸುದೀಪ್​ ಒಂದು ಪ್ರಶ್ನೆ ಕೇಳಿದರು. ಅದಕ್ಕೆ ಇಬ್ಬರಿಂದಲೂ ಬೇರೆ ಬೇರೆ ಉತ್ತರಗಳು ಬಂದವು.

‘ಒಂದು ವಾರದಲ್ಲಿ ನಿಮ್ಮಿಬ್ಬರೊಳಗೆ ಯಾರಾದರೂ ಒಬ್ಬರು ಹೊರಗಡೆ ಹೋಗಬೇಕು ಎನ್ನುವಂತಹ ಪರಿಸ್ಥಿತಿ ಬಂದರೆ ಏನು ಮಾಡುತ್ತೀರಿ’ ಎಂದು ಸುದೀಪ್​ ಪ್ರಶ್ನೆ ಕೇಳಿದರು. ದಿವ್ಯಾ ಉರುಡುಗ ಅವರಿಗೆ ಮೊದಲು ಈ ಪ್ರಶ್ನೆ ಕೇಳಲಾಯಿತು. ಅದಕ್ಕೆ ದಿವ್ಯಾ ಉತ್ತರಿಸುವ ಬದಲು ತಬ್ಬಿಬ್ಬಾದರು. ‘ಇದೊಂದು ಆಟ ಎಂದು ಪರಿಗಣಿಸಿ… ನಾನು..’ ಎಂದು ದಿವ್ಯಾ ವಿವರಣೆ ನೀಡಲು ಮುಂದಾದರು. ‘ನನಗೆ ವಿವರಣೆ ಬೇಡ. ಉತ್ತರ ಬೇಕು’ ಎಂದು ಸುದೀಪ್​ ಖಡಕ್​ ಆಗಿ ಹೇಳಿದರು.

ಆಗ ದಿವ್ಯಾ ಅವರಿಗೆ ಅನಿವಾರ್ಯ ಆಯಿತು. ‘ನಾನೇ ಉಳಿದುಕೊಳ್ಳುತ್ತೇನೆ’ ಎಂದು ಅವರು ಉತ್ತರಿಸಿದರು. ಅದೇ ಪ್ರಶ್ನೆಯನ್ನು ಅರವಿಂದ್​ಗೆ ಕೇಳಲಾಯಿತು. ಅವರು ನೇರವಾಗಿ ಉತ್ತರ ನೀಡಿದರು. ‘ನಾನು ಹೋಗ್ತೀನಿ ಸರ್​. ನಾನು ಬಿಟ್ಟುಕೊಡ್ತೀನಿ. ಅವರು ಇರಲಿ’ ಎಂದು ಹೇಳುವ ಮೂಲಕ ಅವರು ಎಲ್ಲರಿಗೂ ಅಚ್ಚರಿ ಮೂಡಿಸಿದರು. ಈ ಉತ್ತರ ಕೇಳಿಸಿಕೊಂಡ ದಿವ್ಯಾ ಎಮೋಷನಲ್​ ಆದರು.

ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆಪಿ ನಡುವಿನ ಆಪ್ತತೆ ಕಂಡು ಎಲ್ಲರಿಗೂ ಕೆಲವು ಅನುಮಾನಗಳು ಮೂಡಿವೆ. ಅವರಿಬ್ಬರು ನಿಜಜೀವನದಲ್ಲಿ ಮದುವೆ ಆಗುತ್ತಾರೇನೋ ಎಂಬ ಗುಮಾನಿ ಕೂಡ ಹರಡಿದೆ. ಬಿಗ್​ ಬಾಸ್​ ಮನೆಯೊಳಗೆ ಈ ಬಗ್ಗೆ ಅನೇಕ ಬಾರಿ ಚರ್ಚೆ ಕೂಡ ನಡೆದಿದ್ದುಂಟು. ಆದರೆ ಈ ಕುರಿತು ಅವರಿಬ್ಬರು ಯಾವುದನ್ನೂ ಸ್ಪಷ್ಟವಾಗಿ ಹೇಳಿಲ್ಲ. 42 ದಿನಗಳ ಕಾಲ ಬಿಗ್​ ಬಾಸ್​ನಿಂದ ಹೊರಗಿದ್ದು ಬಂದ ಬಳಿಕವೂ ಅವರ ನಡುವಿನ ಆಪ್ತತೆ ಕಮ್ಮಿ ಆಗಿಲ್ಲ.

ಇದನ್ನೂ ಓದಿ:

Divya Uruduga: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ

Divya Uruduga: ಬಿಗ್​ ಬಾಸ್ ಟ್ರೋಫಿ ಅಥವಾ ದಿವ್ಯಾ ಉರುಡುಗ; ಇದರಲ್ಲಿ ಅರವಿಂದ್​ ಆಯ್ಕೆ ಯಾವುದು? ಹೊರಬಿತ್ತು ಅಚ್ಚರಿಯ ಉತ್ತರ

Published On - 8:52 am, Sun, 27 June 21

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us