AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಲ್ಲಿ ದಿವ್ಯಾ ಉರುಡುಗ ಲಗೇಜ್​ ಪ್ಯಾಕ್​; ಕಣ್ಣೀರು ಹಾಕುತ್ತಿರುವ ಅರವಿಂದ್​

ಬೆಳಗ್ಗೆಯಿಂದ ರಾತ್ರಿತನಕ ಜೊತೆಯಲ್ಲೇ ಇರುತ್ತಿದ್ದಳು. ಖುಷಿ ಆದ್ರೂ ನಿಮ್ಮ ಜೊತೆ, ಹರ್ಟ್​ ಆದ್ರೂ ನಿಮ್ಮ ಜೊತೆಯೇ ಅಂತ ಹೇಳುತ್ತಿದ್ದಳು. ಈಗ ಎಲ್ಲವೂ ಹೋಯ್ತು ಎಂದು ಅರವಿಂದ್​ ಅಳುತ್ತ ಕೂತಿದ್ದಾರೆ.

ಬಿಗ್​ ಬಾಸ್​ನಲ್ಲಿ ದಿವ್ಯಾ ಉರುಡುಗ ಲಗೇಜ್​ ಪ್ಯಾಕ್​; ಕಣ್ಣೀರು ಹಾಕುತ್ತಿರುವ ಅರವಿಂದ್​
ದಿವ್ಯಾ ಉರುಡುಗ- ಅರವಿಂದ್​ ಕೆ.ಪಿ. - ನಿಧಿ ಸುಬ್ಬಯ್ಯ
ಮದನ್​ ಕುಮಾರ್​
|

Updated on: May 06, 2021 | 11:41 AM

Share

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್​ ಕೆ.ಪಿ. ಮತ್ತು ದಿವ್ಯಾ ಉರುಡುಗ ಅವರಿಗೆ ವಿರಹ ವೇದನೆ ಶುರುವಾಗಿದೆ. ಇಷ್ಟು ವಾರಗಳ ಕಾಲ ಕೈ ಕೈ ಹಿಡಿದುಕೊಂಡು ಓಡಾಡುತ್ತಿದ್ದ ಈ ಜೋಡಿಹಕ್ಕಿಗಳು ಈಗ ಬೇರಾಗಿವೆ. ದಿವ್ಯಾ ಉರುಡುಗ ಅವರ ಸ್ಯೂಟ್​ಕೇಸ್​ ಪ್ಯಾಕ್​ ಆಗಿದೆ. ಅವರೀಗ ಬಿಗ್​ ಬಾಸ್​ ಮನೆಯೊಳಗೆ ಇಲ್ಲ. ಅವರನ್ನು ಬಿಟ್ಟಿರಲು ಸಾಧ್ಯವಾಗದೇ ಅರವಿಂದ್​ ಕಣ್ಣೀರು ಹಾಕುತ್ತಿದ್ದಾರೆ. ಉಳಿದವರೆಲ್ಲರೂ ಅರವಿಂದ್​ಗೆ ಸಮಾಧಾನ ಮಾಡುತ್ತಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಇಲ್ಲ ಎಂದರೆ ಅವರು ಎಲಿಮಿನೇಟ್​ ಆಗಿದ್ದಾರೆ ಎಂದರ್ಥವಲ್ಲ. ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಹಾಗಾಗಿ ಚಿಕಿತ್ಸೆ ನೀಡಲು ವೈದ್ಯರ ಬಳಿಗೆ ಕರೆದುಕೊಂಡು ಹೋಗಲಾಗಿದೆ. ಇದರಿಂದಾಗಿ ಅರವಿಂದ್​ ಬೇಸರ ಮಾಡಿಕೊಂಡಿದ್ದಾರೆ. ಅಷ್ಟೂ ಸಾಲದೆಂಬಂತೆ ಬಿಗ್​ ಬಾಸ್​ ಕಡೆಯಿಂದ ಇನ್ನೊಂದು ಆದೇಶ ಬಂದಿದೆ. ದಿವ್ಯಾ ಉರುಡುಗ ಅವರ ಸ್ಯೂಟ್​ಕೇಸ್​ ಪ್ಯಾಕ್​ ಮಾಡಿ ಕೂಡಲೇ ಸ್ಟೋರ್​ ರೂಮ್​ಗೆ ತಂದು ಇರಿಸಿ ಎಂದು ಸೂಚಿಸಲಾಗಿದೆ.

ಬಿಗ್​ ಬಾಸ್ ಕಡೆಯಿಂದ ಈ ಆದೇಶ ಬಂದ ಬಳಿಕ ಅರವಿಂದ್​ ಸಂಪೂರ್ಣ ಡಲ್​ ಆಗಿದ್ದಾರೆ. ಒಮ್ಮೆ ಹೋದರೆ ದಿವ್ಯಾ ವಾಪಸ್​ ಬರುವುದಿಲ್ಲ ಎಂದು ಅವರಿಗೆ ಅನಿಸೋಕೆ ಶುರು ಆಗಿದೆ. ಹಾಗಾಗಿ ಪದೇಪದೇ ದಿವ್ಯಾರನ್ನು ನೆನಪು ಮಾಡಿಕೊಂಡು ಅವರು ಅಳುತ್ತಿದ್ದಾರೆ. ಅವರನ್ನು ಸಮಾಧಾನ ಪಡಿಸಲು ಎಲ್ಲರೂ ಪ್ರಯತ್ನಿಸಿದ್ದಾರೆ. ‘ನಂಗೆ ಅರವಿಂದ್​ನ ನೋಡೋಕೆ ಆಗ್ತಾ ಇಲ್ಲ’ ಎಂದು ಮಂಜು ಬೇಸರ ವ್ಯಕ್ತಪಡಿಸಿದ್ದಾರೆ.

‘ಬೆಳಗ್ಗೆಯಿಂದ ರಾತ್ರಿತನಕ ಜೊತೆಯಲ್ಲೇ ಇರುತ್ತಿದ್ದಳು. ಖುಷಿ ಆದ್ರೂ ನಿಮ್ಮ ಜೊತೆ, ಹರ್ಟ್​ ಆದ್ರೂ ನಿಮ್ಮ ಜೊತೆಯೇ ಎಂದು ಹೇಳುತ್ತಿದ್ದಳು. ಈಗ ಎಲ್ಲವೂ ಹೋಯ್ತು’ ಎಂದು ಅರವಿಂದ್​ ಅಳುತ್ತ ಕೂತಿರುವ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದೆ. ಮೇ 6ರ ಸಂಚಿಕೆಯಲ್ಲಿ ಇದು​ ಪ್ರಸಾರ ಆಗಲಿದೆ. ಚಿಕಿತ್ಸೆ ಪಡೆದು ದಿವ್ಯಾ ಉರುಡುಗ ವಾಪಸ್​ ಬರುತ್ತಾರಾ ಅಥವಾ ಅವರ ಬಿಗ್​ ಬಾಸ್​ ಪಯಣ ಇಲ್ಲಿಗೆ ಅಂತ್ಯವಾಗಲಿದೆಯಾ ಎಂಬ ಕೌತುಕದ ಪ್ರಶ್ನೆ ಎಲ್ಲರ ಮನದಲ್ಲಿ ಮೂಡಿದೆ.

ಇದನ್ನೂ ಓದಿ:

ನಂಗೆ ಒಂಥರಾ ಆಗ್ತಿದೆ; ಅರವಿಂದ್​ ಮಾಡಿದ ಸೇವೆ ನೋಡಿ ದಿವ್ಯಾ ಉರುಡುಗ ನಾಚಿ ನೀರಾದರು

ಅರವಿಂದ್​ಗೆ ಪ್ರೀತಿಯ ರಿಂಗ್​ ತೊಡಿಸಿದ ದಿವ್ಯಾ! ಮರುಕ್ಷಣವೇ ಇಬ್ಬರ ಲವ್​ನಲ್ಲಿ ಸುನಾಮಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ