Bigg Boss Kannada: ಕೊರೊನಾ ವಿಷಯ ಗೊತ್ತಾಗಿ ಕಣ್ಣೀರು ಹಾಕುತ್ತ ಬಿಗ್​ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು

BBK8: ರಾಜ್ಯದಲ್ಲಿ ಹೆಚ್ಚಿರುವ ಕೊರೊನಾ ಹಾವಳಿಯ ತೀವ್ರತೆಯನ್ನು ಸ್ಪರ್ಧಿಗಳಿಗೆ ತೋರಿಸಲಾಗಿದೆ. ಲಾಕ್​ಡೌನ್​ ಆಗಿರುವ ವಿಚಾರವನ್ನೂ ತಿಳಿಸಲಾಗಿದೆ. ಅದನ್ನು ಕಂಡು ಎಲ್ಲರಿಗೂ ದೊಡ್ಡ ಶಾಕ್​ ಆಗಿದೆ.

Bigg Boss Kannada: ಕೊರೊನಾ ವಿಷಯ ಗೊತ್ತಾಗಿ ಕಣ್ಣೀರು ಹಾಕುತ್ತ ಬಿಗ್​ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು
ಬಿಗ್​ ಬಾಸ್​ ಕನ್ನಡ ಸೀಸನ್​ 8
Follow us
|

Updated on:May 10, 2021 | 8:08 AM

ಯಾರೂ ಊಹಿಸಿರದ ರೀತಿಯಲ್ಲಿ ‘ಬಿಗ್​ ಬಾಸ್ ಕನ್ನಡ​ ಸೀಸನ್​ 8’ ಕಾರ್ಯಕ್ರಮ ಅಂತ್ಯವಾಗಿದೆ. ಕೊರೊನಾ ವೈರಸ್​ ಹರಡುತ್ತಿರುವ ಈ ಕಠಿಣ ಸಂದರ್ಭದಲ್ಲಿ ಅನಿವಾರ್ಯವಾಗಿ ಈ ರಿಯಾಲಿಟಿ ಮುಕ್ತಾಯ ಆಗಿದೆ. 70 ದಿನಗಳ ಕಾಲ ದೊಡ್ಮನೆಯೊಳಗೆ ಹಾಯಾಗಿ ಕಾಲ ಕಳೆಯುತ್ತಿದ್ದ ಸ್ಪರ್ಧಿಗಳಿಗೆ ಈಗ ಒಮ್ಮೆಲೇ ಶಾಕ್​ ಎದುರಾಗಿದೆ. ಇಡೀ ಜಗತ್ತು ಕೊರೊನಾದಿಂದ ಕಷ್ಟ ಅನುಭವಿಸುತ್ತಿದ್ದರೂ ಕೂಡ ಅದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ತಿಳಿದಿರಲಿಲ್ಲ. ಆದರೆ ಈಗ ಎಲ್ಲವೂ ಗೊತ್ತಾಗಿದೆ.

10ನೇ ವಾರದವರೆಗೆ ಬಿಗ್​ ಬಾಸ್​ ಮನೆಯಲ್ಲಿ 11 ಜನರು ತಮ್ಮ ಆಟ ಮುಂದುವರಿಸಿಕೊಂಡು ಬಂದಿದ್ದರು. 10ನೇ ವಾರದ ಎಲಿಮಿನೇಷನ್​ಗೆ ಅವರೆಲ್ಲರೂ ಕುತೂಹಲದಿಂದ ಕಾಯುತ್ತಿದ್ದರು. ಈ ಸಂದರ್ಭದಲ್ಲಿ ಮನೆಯಲ್ಲಿರುವ ಟಿವಿಯಲ್ಲಿ ಬ್ರೇಕಿಂಗ್​ ನ್ಯೂಸ್​ ಪ್ರಸಾರ ಮಾಡಲಾಗಿದೆ. ರಾಜ್ಯದಲ್ಲಿ ಹೆಚ್ಚಿರುವ ಕೊರೊನಾ ಹಾವಳಿಯ ತೀವ್ರತೆಯನ್ನು ಸ್ಪರ್ಧಿಗಳಿಗೆ ತೋರಿಸಲಾಗಿದೆ. ಲಾಕ್​ಡೌನ್​ ಆಗಿರುವ ವಿಚಾರವನ್ನೂ ತಿಳಿಸಲಾಗಿದೆ. ಅದನ್ನು ಕಂಡು ಎಲ್ಲರಿಗೂ ದೊಡ್ಡ ಶಾಕ್​ ಆಗಿದೆ.

ಈಗ ನಿಮ್ಮೆಲ್ಲರನ್ನೂ ಹೊರಗಡೆ ಕರೆಸುವ ಸಮಯ ಎಂದು ಬಿಗ್​ ಬಾಸ್​ ಘೋಷಣೆ ಮಾಡುತ್ತಿದ್ದಂತೆಯೇ ಎಲ್ಲರೂ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇಷ್ಟು ದಿನ ತಾನು ಗಟ್ಟಿ ಎಂದು ತೋರಿಸಿಕೊಳ್ಳುತ್ತಿದ್ದ ಪ್ರಶಾಂತ್​ ಸಂಬರಗಿ ಕೂಡ ಚಿಕ್ಕ ಮಕ್ಕಳಂತೆ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ತಿಮ್ಮೇಶ್​, ಶುಭಾ ಪೂಂಜಾ ಕೂಡ ಜೋರಾಗಿ ಅತ್ತಿದ್ದಾರೆ. ಇನ್ನೇನು ತಾವು ಮನೆಯಿಂದ ಹೊರಡುವುದು ಖಚಿತ ಎಂದಿ ಗೊತ್ತಾದ ಬಳಿಕ ಒಬ್ಬರನ್ನೊಬ್ಬರು ಆಲಿಂಗಿಸಿಕೊಂಡಿದ್ದಾರೆ.

ಇನ್ನೂ ಈ ಎಪಿಸೋಡ್​ ಪ್ರಸಾರ ಆಗಿಲ್ಲ. ಮೇ 9ರಂದು ಕೊನೇ ಸಂಚಿಕೆ ಪ್ರಸಾರ ಆಗಬಹುದು ಎಂದು ಪ್ರೇಕ್ಷಕರು ನಿರೀಕ್ಷಿಸಿದ್ದರು. ಆದರೆ ಈಗಾಗಲೇ ಚಿತ್ರೀಕರಣಗೊಂಡಿರುವ ಈ ದೃಶ್ಯಗಳ ಎಪಿಸೋಡ್​ ಅನ್ನು ಮೇ 11 ಮತ್ತು 12ರಂದು ಪ್ರಸಾರ ಮಾಡುವುದಾಗಿ ಕಲರ್ಸ್​ ಕನ್ನಡ ವಾಹಿನಿ ಒಂದು ಪ್ರೋಮೋದಲ್ಲಿ ತಿಳಿಸಿದೆ. ವಾಹಿನಿಯ ಬ್ಯುಸಿನೆಸ್​ ಹೆಡ್​ ಪರಮೇಶ್ವರ ಗುಂಡ್ಕಲ್​ ಅವರು ಪ್ರೋಮೋ ಹಂಚಿಕೊಂಡಿದ್ದು, ಅದರಲ್ಲಿ ಈ ಎಲ್ಲ ವಿಚಾರಗಳ ಝಲಕ್ ತೋರಿಸಲಾಗಿದೆ.

ಇದನ್ನೂ ಓದಿ:

Bigg Boss Kannada: ಬಿಗ್​ ಬಾಸ್​ ರದ್ದು; ವಿನ್ನರ್​ ಯಾರು ಎಂದು ತೀರ್ಮಾನ ಮಾಡಿದ ಪ್ರೇಕ್ಷಕರು

Bigg Boss Kannada: ಬಿಗ್​ ಬಾಸ್​ ರದ್ದಾಗಿದ್ದು ಯಾಕೆ? ಟ್ರೋಲ್​ ಮಂದಿ ಹುಡುಕಿದ 2 ಫನ್ನಿ ಕಾರಣ ಇಲ್ಲಿದೆ

Published On - 8:08 am, Mon, 10 May 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ