AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಕೊರೊನಾ ವಿಷಯ ಗೊತ್ತಾಗಿ ಕಣ್ಣೀರು ಹಾಕುತ್ತ ಬಿಗ್​ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು

BBK8: ರಾಜ್ಯದಲ್ಲಿ ಹೆಚ್ಚಿರುವ ಕೊರೊನಾ ಹಾವಳಿಯ ತೀವ್ರತೆಯನ್ನು ಸ್ಪರ್ಧಿಗಳಿಗೆ ತೋರಿಸಲಾಗಿದೆ. ಲಾಕ್​ಡೌನ್​ ಆಗಿರುವ ವಿಚಾರವನ್ನೂ ತಿಳಿಸಲಾಗಿದೆ. ಅದನ್ನು ಕಂಡು ಎಲ್ಲರಿಗೂ ದೊಡ್ಡ ಶಾಕ್​ ಆಗಿದೆ.

Bigg Boss Kannada: ಕೊರೊನಾ ವಿಷಯ ಗೊತ್ತಾಗಿ ಕಣ್ಣೀರು ಹಾಕುತ್ತ ಬಿಗ್​ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು
ಬಿಗ್​ ಬಾಸ್​ ಕನ್ನಡ ಸೀಸನ್​ 8
ಮದನ್​ ಕುಮಾರ್​
|

Updated on:May 10, 2021 | 8:08 AM

Share

ಯಾರೂ ಊಹಿಸಿರದ ರೀತಿಯಲ್ಲಿ ‘ಬಿಗ್​ ಬಾಸ್ ಕನ್ನಡ​ ಸೀಸನ್​ 8’ ಕಾರ್ಯಕ್ರಮ ಅಂತ್ಯವಾಗಿದೆ. ಕೊರೊನಾ ವೈರಸ್​ ಹರಡುತ್ತಿರುವ ಈ ಕಠಿಣ ಸಂದರ್ಭದಲ್ಲಿ ಅನಿವಾರ್ಯವಾಗಿ ಈ ರಿಯಾಲಿಟಿ ಮುಕ್ತಾಯ ಆಗಿದೆ. 70 ದಿನಗಳ ಕಾಲ ದೊಡ್ಮನೆಯೊಳಗೆ ಹಾಯಾಗಿ ಕಾಲ ಕಳೆಯುತ್ತಿದ್ದ ಸ್ಪರ್ಧಿಗಳಿಗೆ ಈಗ ಒಮ್ಮೆಲೇ ಶಾಕ್​ ಎದುರಾಗಿದೆ. ಇಡೀ ಜಗತ್ತು ಕೊರೊನಾದಿಂದ ಕಷ್ಟ ಅನುಭವಿಸುತ್ತಿದ್ದರೂ ಕೂಡ ಅದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ತಿಳಿದಿರಲಿಲ್ಲ. ಆದರೆ ಈಗ ಎಲ್ಲವೂ ಗೊತ್ತಾಗಿದೆ.

10ನೇ ವಾರದವರೆಗೆ ಬಿಗ್​ ಬಾಸ್​ ಮನೆಯಲ್ಲಿ 11 ಜನರು ತಮ್ಮ ಆಟ ಮುಂದುವರಿಸಿಕೊಂಡು ಬಂದಿದ್ದರು. 10ನೇ ವಾರದ ಎಲಿಮಿನೇಷನ್​ಗೆ ಅವರೆಲ್ಲರೂ ಕುತೂಹಲದಿಂದ ಕಾಯುತ್ತಿದ್ದರು. ಈ ಸಂದರ್ಭದಲ್ಲಿ ಮನೆಯಲ್ಲಿರುವ ಟಿವಿಯಲ್ಲಿ ಬ್ರೇಕಿಂಗ್​ ನ್ಯೂಸ್​ ಪ್ರಸಾರ ಮಾಡಲಾಗಿದೆ. ರಾಜ್ಯದಲ್ಲಿ ಹೆಚ್ಚಿರುವ ಕೊರೊನಾ ಹಾವಳಿಯ ತೀವ್ರತೆಯನ್ನು ಸ್ಪರ್ಧಿಗಳಿಗೆ ತೋರಿಸಲಾಗಿದೆ. ಲಾಕ್​ಡೌನ್​ ಆಗಿರುವ ವಿಚಾರವನ್ನೂ ತಿಳಿಸಲಾಗಿದೆ. ಅದನ್ನು ಕಂಡು ಎಲ್ಲರಿಗೂ ದೊಡ್ಡ ಶಾಕ್​ ಆಗಿದೆ.

ಈಗ ನಿಮ್ಮೆಲ್ಲರನ್ನೂ ಹೊರಗಡೆ ಕರೆಸುವ ಸಮಯ ಎಂದು ಬಿಗ್​ ಬಾಸ್​ ಘೋಷಣೆ ಮಾಡುತ್ತಿದ್ದಂತೆಯೇ ಎಲ್ಲರೂ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇಷ್ಟು ದಿನ ತಾನು ಗಟ್ಟಿ ಎಂದು ತೋರಿಸಿಕೊಳ್ಳುತ್ತಿದ್ದ ಪ್ರಶಾಂತ್​ ಸಂಬರಗಿ ಕೂಡ ಚಿಕ್ಕ ಮಕ್ಕಳಂತೆ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ತಿಮ್ಮೇಶ್​, ಶುಭಾ ಪೂಂಜಾ ಕೂಡ ಜೋರಾಗಿ ಅತ್ತಿದ್ದಾರೆ. ಇನ್ನೇನು ತಾವು ಮನೆಯಿಂದ ಹೊರಡುವುದು ಖಚಿತ ಎಂದಿ ಗೊತ್ತಾದ ಬಳಿಕ ಒಬ್ಬರನ್ನೊಬ್ಬರು ಆಲಿಂಗಿಸಿಕೊಂಡಿದ್ದಾರೆ.

ಇನ್ನೂ ಈ ಎಪಿಸೋಡ್​ ಪ್ರಸಾರ ಆಗಿಲ್ಲ. ಮೇ 9ರಂದು ಕೊನೇ ಸಂಚಿಕೆ ಪ್ರಸಾರ ಆಗಬಹುದು ಎಂದು ಪ್ರೇಕ್ಷಕರು ನಿರೀಕ್ಷಿಸಿದ್ದರು. ಆದರೆ ಈಗಾಗಲೇ ಚಿತ್ರೀಕರಣಗೊಂಡಿರುವ ಈ ದೃಶ್ಯಗಳ ಎಪಿಸೋಡ್​ ಅನ್ನು ಮೇ 11 ಮತ್ತು 12ರಂದು ಪ್ರಸಾರ ಮಾಡುವುದಾಗಿ ಕಲರ್ಸ್​ ಕನ್ನಡ ವಾಹಿನಿ ಒಂದು ಪ್ರೋಮೋದಲ್ಲಿ ತಿಳಿಸಿದೆ. ವಾಹಿನಿಯ ಬ್ಯುಸಿನೆಸ್​ ಹೆಡ್​ ಪರಮೇಶ್ವರ ಗುಂಡ್ಕಲ್​ ಅವರು ಪ್ರೋಮೋ ಹಂಚಿಕೊಂಡಿದ್ದು, ಅದರಲ್ಲಿ ಈ ಎಲ್ಲ ವಿಚಾರಗಳ ಝಲಕ್ ತೋರಿಸಲಾಗಿದೆ.

ಇದನ್ನೂ ಓದಿ:

Bigg Boss Kannada: ಬಿಗ್​ ಬಾಸ್​ ರದ್ದು; ವಿನ್ನರ್​ ಯಾರು ಎಂದು ತೀರ್ಮಾನ ಮಾಡಿದ ಪ್ರೇಕ್ಷಕರು

Bigg Boss Kannada: ಬಿಗ್​ ಬಾಸ್​ ರದ್ದಾಗಿದ್ದು ಯಾಕೆ? ಟ್ರೋಲ್​ ಮಂದಿ ಹುಡುಕಿದ 2 ಫನ್ನಿ ಕಾರಣ ಇಲ್ಲಿದೆ

Published On - 8:08 am, Mon, 10 May 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು