AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಕೊರೊನಾ ವಿಷಯ ಗೊತ್ತಾಗಿ ಕಣ್ಣೀರು ಹಾಕುತ್ತ ಬಿಗ್​ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು

BBK8: ರಾಜ್ಯದಲ್ಲಿ ಹೆಚ್ಚಿರುವ ಕೊರೊನಾ ಹಾವಳಿಯ ತೀವ್ರತೆಯನ್ನು ಸ್ಪರ್ಧಿಗಳಿಗೆ ತೋರಿಸಲಾಗಿದೆ. ಲಾಕ್​ಡೌನ್​ ಆಗಿರುವ ವಿಚಾರವನ್ನೂ ತಿಳಿಸಲಾಗಿದೆ. ಅದನ್ನು ಕಂಡು ಎಲ್ಲರಿಗೂ ದೊಡ್ಡ ಶಾಕ್​ ಆಗಿದೆ.

Bigg Boss Kannada: ಕೊರೊನಾ ವಿಷಯ ಗೊತ್ತಾಗಿ ಕಣ್ಣೀರು ಹಾಕುತ್ತ ಬಿಗ್​ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು
ಬಿಗ್​ ಬಾಸ್​ ಕನ್ನಡ ಸೀಸನ್​ 8
Follow us
ಮದನ್​ ಕುಮಾರ್​
|

Updated on:May 10, 2021 | 8:08 AM

ಯಾರೂ ಊಹಿಸಿರದ ರೀತಿಯಲ್ಲಿ ‘ಬಿಗ್​ ಬಾಸ್ ಕನ್ನಡ​ ಸೀಸನ್​ 8’ ಕಾರ್ಯಕ್ರಮ ಅಂತ್ಯವಾಗಿದೆ. ಕೊರೊನಾ ವೈರಸ್​ ಹರಡುತ್ತಿರುವ ಈ ಕಠಿಣ ಸಂದರ್ಭದಲ್ಲಿ ಅನಿವಾರ್ಯವಾಗಿ ಈ ರಿಯಾಲಿಟಿ ಮುಕ್ತಾಯ ಆಗಿದೆ. 70 ದಿನಗಳ ಕಾಲ ದೊಡ್ಮನೆಯೊಳಗೆ ಹಾಯಾಗಿ ಕಾಲ ಕಳೆಯುತ್ತಿದ್ದ ಸ್ಪರ್ಧಿಗಳಿಗೆ ಈಗ ಒಮ್ಮೆಲೇ ಶಾಕ್​ ಎದುರಾಗಿದೆ. ಇಡೀ ಜಗತ್ತು ಕೊರೊನಾದಿಂದ ಕಷ್ಟ ಅನುಭವಿಸುತ್ತಿದ್ದರೂ ಕೂಡ ಅದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ತಿಳಿದಿರಲಿಲ್ಲ. ಆದರೆ ಈಗ ಎಲ್ಲವೂ ಗೊತ್ತಾಗಿದೆ.

10ನೇ ವಾರದವರೆಗೆ ಬಿಗ್​ ಬಾಸ್​ ಮನೆಯಲ್ಲಿ 11 ಜನರು ತಮ್ಮ ಆಟ ಮುಂದುವರಿಸಿಕೊಂಡು ಬಂದಿದ್ದರು. 10ನೇ ವಾರದ ಎಲಿಮಿನೇಷನ್​ಗೆ ಅವರೆಲ್ಲರೂ ಕುತೂಹಲದಿಂದ ಕಾಯುತ್ತಿದ್ದರು. ಈ ಸಂದರ್ಭದಲ್ಲಿ ಮನೆಯಲ್ಲಿರುವ ಟಿವಿಯಲ್ಲಿ ಬ್ರೇಕಿಂಗ್​ ನ್ಯೂಸ್​ ಪ್ರಸಾರ ಮಾಡಲಾಗಿದೆ. ರಾಜ್ಯದಲ್ಲಿ ಹೆಚ್ಚಿರುವ ಕೊರೊನಾ ಹಾವಳಿಯ ತೀವ್ರತೆಯನ್ನು ಸ್ಪರ್ಧಿಗಳಿಗೆ ತೋರಿಸಲಾಗಿದೆ. ಲಾಕ್​ಡೌನ್​ ಆಗಿರುವ ವಿಚಾರವನ್ನೂ ತಿಳಿಸಲಾಗಿದೆ. ಅದನ್ನು ಕಂಡು ಎಲ್ಲರಿಗೂ ದೊಡ್ಡ ಶಾಕ್​ ಆಗಿದೆ.

ಈಗ ನಿಮ್ಮೆಲ್ಲರನ್ನೂ ಹೊರಗಡೆ ಕರೆಸುವ ಸಮಯ ಎಂದು ಬಿಗ್​ ಬಾಸ್​ ಘೋಷಣೆ ಮಾಡುತ್ತಿದ್ದಂತೆಯೇ ಎಲ್ಲರೂ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇಷ್ಟು ದಿನ ತಾನು ಗಟ್ಟಿ ಎಂದು ತೋರಿಸಿಕೊಳ್ಳುತ್ತಿದ್ದ ಪ್ರಶಾಂತ್​ ಸಂಬರಗಿ ಕೂಡ ಚಿಕ್ಕ ಮಕ್ಕಳಂತೆ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ತಿಮ್ಮೇಶ್​, ಶುಭಾ ಪೂಂಜಾ ಕೂಡ ಜೋರಾಗಿ ಅತ್ತಿದ್ದಾರೆ. ಇನ್ನೇನು ತಾವು ಮನೆಯಿಂದ ಹೊರಡುವುದು ಖಚಿತ ಎಂದಿ ಗೊತ್ತಾದ ಬಳಿಕ ಒಬ್ಬರನ್ನೊಬ್ಬರು ಆಲಿಂಗಿಸಿಕೊಂಡಿದ್ದಾರೆ.

ಇನ್ನೂ ಈ ಎಪಿಸೋಡ್​ ಪ್ರಸಾರ ಆಗಿಲ್ಲ. ಮೇ 9ರಂದು ಕೊನೇ ಸಂಚಿಕೆ ಪ್ರಸಾರ ಆಗಬಹುದು ಎಂದು ಪ್ರೇಕ್ಷಕರು ನಿರೀಕ್ಷಿಸಿದ್ದರು. ಆದರೆ ಈಗಾಗಲೇ ಚಿತ್ರೀಕರಣಗೊಂಡಿರುವ ಈ ದೃಶ್ಯಗಳ ಎಪಿಸೋಡ್​ ಅನ್ನು ಮೇ 11 ಮತ್ತು 12ರಂದು ಪ್ರಸಾರ ಮಾಡುವುದಾಗಿ ಕಲರ್ಸ್​ ಕನ್ನಡ ವಾಹಿನಿ ಒಂದು ಪ್ರೋಮೋದಲ್ಲಿ ತಿಳಿಸಿದೆ. ವಾಹಿನಿಯ ಬ್ಯುಸಿನೆಸ್​ ಹೆಡ್​ ಪರಮೇಶ್ವರ ಗುಂಡ್ಕಲ್​ ಅವರು ಪ್ರೋಮೋ ಹಂಚಿಕೊಂಡಿದ್ದು, ಅದರಲ್ಲಿ ಈ ಎಲ್ಲ ವಿಚಾರಗಳ ಝಲಕ್ ತೋರಿಸಲಾಗಿದೆ.

ಇದನ್ನೂ ಓದಿ:

Bigg Boss Kannada: ಬಿಗ್​ ಬಾಸ್​ ರದ್ದು; ವಿನ್ನರ್​ ಯಾರು ಎಂದು ತೀರ್ಮಾನ ಮಾಡಿದ ಪ್ರೇಕ್ಷಕರು

Bigg Boss Kannada: ಬಿಗ್​ ಬಾಸ್​ ರದ್ದಾಗಿದ್ದು ಯಾಕೆ? ಟ್ರೋಲ್​ ಮಂದಿ ಹುಡುಕಿದ 2 ಫನ್ನಿ ಕಾರಣ ಇಲ್ಲಿದೆ

Published On - 8:08 am, Mon, 10 May 21

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ