AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್ ಹಿಟ್ ಧಾರಾವಾಹಿಗಳ ಟಿಆರ್​ಪಿಗೂ ಸೆಡ್ಡು ಹೊಡೆದ ಬಿಗ್ ಬಾಸ್; ತಗ್ಗೋ ಮಾತೇ ಇಲ್ಲ

‘ಬಿಗ್ ಬಾಸ್ ಕನ್ನಡ ಸೀಸನ್ 11’ ಹಲವು ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಸುದೀಪ್ ಇಲ್ಲದ ವಾರ ಹೊರತುಪಡಿಸಿ ಉಳಿದೆಲ್ಲಾ ಎಪಿಸೋಡ್​ಗಳಿಗೂ ಸಖತ್ ಟಿಆರ್​ಪಿ ಸಿಗುತ್ತಿದೆ. ಇದಕ್ಕೆ ಕಿಚ್ಚ ಸುದೀಪ್ ಅವರು ಕೂಡ ಕಾರಣ. ಯಾವಾ ಸೂಪರ್ ಹಿಟ್ ಧಾರಾವಾಹಿಗಳಿಗೂ ಸಿಗದಷ್ಟು ಟಿಆರ್​ಪಿ ಈ ಶೋಗೆ ಸಿಗುತ್ತಿದೆ.

ಸೂಪರ್ ಹಿಟ್ ಧಾರಾವಾಹಿಗಳ ಟಿಆರ್​ಪಿಗೂ ಸೆಡ್ಡು ಹೊಡೆದ ಬಿಗ್ ಬಾಸ್; ತಗ್ಗೋ ಮಾತೇ ಇಲ್ಲ
ರಾಜೇಶ್ ದುಗ್ಗುಮನೆ
|

Updated on: Dec 05, 2024 | 2:23 PM

Share

‘ಬಿಗ್ ಬಾಸ್ ಕನ್ನಡ’ ಇನ್ನು ಒಂದೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಸ್ಪರ್ಧಿಗಳ ಉತ್ತಮ ಆಟ ಹಾಗೂ ಸುದೀಪ್ ಅವರ ಖಡಕ್ ನಿರೂಪಣೆಯಿಂದ ಬಿಗ್ ಬಾಸ್ ಟಿಆರ್​ಪಿ ಕುಗ್ಗುತ್ತಿಲ್ಲ. ಸೂಪರ್ ಹಿಟ್ ಧಾರಾವಾಹಿಗಳ ಟಿಆರ್​ಪಿಗೂ ಸೆಡ್ಡು ಹೊಡೆಯುವಂತೆ ರೇಟಿಂಗ್ ಪಡೆಯುತ್ತಿದೆ ಈ ಶೋ. ಹಾಗಾದರೆ, ಬಿಗ್ ಬಾಸ್​ಗೆ ಸಿಕ್ಕ ಟಿಆರ್​ಪಿ ಎಷ್ಟು? ಧಾರಾವಾಹಿಗಳಿಗೆ ಸಿಕ್ಕ ಟಿಆರ್​ಪಿ ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಹಲವು ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಸುದೀಪ್ ಇಲ್ಲದ ವಾರ ಹೊರತುಪಡಿಸಿ ಉಳಿದೆಲ್ಲಾ ಎಪಿಸೋಡ್​ಗಳಿಗೂ ಸಖತ್ ಟಿಆರ್​ಪಿ ಸಿಗುತ್ತಿದೆ. ಇದಕ್ಕೆ ಕಿಚ್ಚ ಸುದೀಪ್ ಅವರು ಕೂಡ ಕಾರಣ. ಯಾವಾ ಸೂಪರ್ ಹಿಟ್ ಧಾರಾವಾಹಿಗಳಿಗೂ ಸಿಗದಷ್ಟು ಟಿಆರ್​ಪಿ ಈ ಶೋಗೆ ಸಿಗುತ್ತಿದೆ. ವಾರದ ದಿನಗಳಲ್ಲಿ ನಗರ ಭಾಗದಲ್ಲಿ 8.2 ಟಿಆರ್​ಪಿ ಸಿಕ್ಕರೆ, ಶನಿವಾರ ಬರೋಬ್ಬರಿ 9.9 ಟಿಆರ್​ಪಿ ದೊರೆತಿದೆ. ಭಾನುವಾರ 10.3 ಟಿಆರ್​ಪಿ ದೊರೆತಿದೆ. ರಜತ್ ಅವರು ಅವಾಚ್ಯ ಶಬ್ದ ಬಳಕೆ ಮಾಡಿ ಪಾಠ ಹೇಳಿಸಿಕೊಂಡ ವಾರದ ಟಿಆರ್​ಪಿ ಇದಾಗಿದೆ.

ಧಾರಾವಾಹಿಗಳ ಟಿಆರ್​ಪಿ ವಿಚಾರಕ್ಕೆ ಬಂದರೆ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿಗೆ ಬಿಗ್ ಬಾಸ್​ ಟಿಆರ್​ಪಿ ರೀಚ್ ಆಗುವಷ್ಟು ಟಿಆರ್​ಪಿ ಸಿಕ್ಕಿಲ್ಲ. ಎರಡನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಸ್ನೇಹಾ ಸಾವಿನ ನಂತರದಲ್ಲಿ ಟಿಆರ್​ಪಿ ಕೊಂಚ ತಗ್ಗಿದೆ. ಮೂರನೇ ಸ್ಥಾನದಲ್ಲಿ ‘ಅಮೃತಧಾರೆ’, ‘ಅಣ್ಣಯ್ಯ’ ಧಾರಾವಾಹಿಗಳು ಇವೆ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಹೇಗಿದೆ ನೋಡಿ ರಜತ್ ಹೊಸ ಲುಕ್; ಫೋಟೋ ವೈರಲ್

ನಾಲ್ಕನೇ ಸ್ಥಾನದಲ್ಲಿ ಕಲರ್ಸ್ ಕನ್ನಡ ಧಾರಾವಾಹಿಗಳ ಮಧ್ಯೆ ಸಮಾನ ಸ್ಪರ್ಧೆ ಏರ್ಪಟ್ಟಿದೆ. ಅಕ್ಕ-ತಂಗಿ ಧಾರಾವಾಹಿಗಳಾದ ‘ಲಕ್ಷ್ಮೀ ಬಾರಮ್ಮ’ ಹಾಗೂ ‘ಭಾಗ್ಯಲಕ್ಷ್ಮೀ’ ಧಾರಾವಾಹಿಗಳು ಇವೆ. ಐದನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ