AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು-ಅರವಿಂದ್​ ಸ್ಟ್ರಾಂಗ್​​ ಎಂದು ಒಪ್ಪಿಕೊಂಡ ಬಿಗ್​ಬಾಸ್​ ಸ್ಪರ್ಧಿಗಳಿಗೆ ಕಠಿಣ ಶಿಕ್ಷೆ

ಮನೆಯಲ್ಲಿ ಸ್ಪರ್ಧಿಗಳು ಬಳಕೆ ಮಾಡುವ ವಸ್ತುಗಳ ಮೌಲ್ಯವನ್ನು ತಿಳಿಸುವ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಇದರಿಂದ ಮನೆಯ ಸದಸ್ಯರು ಕಷ್ಟ ಅನುಭವಿಸುತ್ತಿದ್ದಾರೆ.

ಮಂಜು-ಅರವಿಂದ್​ ಸ್ಟ್ರಾಂಗ್​​ ಎಂದು ಒಪ್ಪಿಕೊಂಡ ಬಿಗ್​ಬಾಸ್​ ಸ್ಪರ್ಧಿಗಳಿಗೆ ಕಠಿಣ ಶಿಕ್ಷೆ
ಅರವಿಂದ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Apr 22, 2021 | 5:07 PM

Share

ಬಿಗ್​ ಬಾಸ್​ ಮನೆಯಲ್ಲಿ ಪ್ರತಿ ಸ್ಪರ್ಧಿಯೂ ತಾವು ಸ್ಟ್ರಾಂಗ್​ ಎಂದು ಪ್ರೂವ್​ ಮಾಡಬೇಕು. ಇಲ್ಲವಾದರೆ ಅಂಥ ಸ್ಪರ್ಧಿ ವೀಕ್ಷಕರಿಂದ ಕಡಿಮೆ ವೋಟ್​ ಪಡೆದು ಮನೆಯಿಂದ ಹೊರಹೋಗುತ್ತಾರೆ. ಹೀಗಾಗಿ ಎಲ್ಲಾ ಟಾಸ್ಕ್​​ಗಳಲ್ಲಿ ತಮ್ಮನ್ನು ಹೈಲೈಟ್​ ಮಾಡಿಕೊಳ್ಳೋಕೆ ​ಮನೆಯವರು ಆದ್ಯತೆ ನೀಡುತ್ತಾರೆ. ಆದರೆ, ಈ ಬಾರಿ ಹಾಗಾಗಿಲ್ಲ. ಮಂಜು ಪಾವಗಡ, ಅರವಿಂದ್ ಕೆಪಿ ಹಾಗೂ ರಾಜೀವ್​ ಸ್ಟ್ರಾಂಗ್​ ಎಂದು ಮನೆ ಮಂದಿ ಒಪ್ಪಿಕೊಂಡಿದ್ದಾರೆ. ಇದಕ್ಕೆ ಬಿಗ್​ ಬಾಸ್​ ಶಿಕ್ಷೆ ನೀಡಿದ್ದಾರೆ!

ಮನೆಯಲ್ಲಿ ಸ್ಪರ್ಧಿಗಳು ಬಳಕೆ ಮಾಡುವ ವಸ್ತುಗಳ ಮೌಲ್ಯವನ್ನು ತಿಳಿಸುವ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಇದರಿಂದ ಮನೆಯ ಸದಸ್ಯರು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ. ಶುಭಾ ಪೂಂಜಾ ಸೇರಿದಂತೆ ಅನೇಕರು ಬಿಗ್​ ಬಾಸ್​ಗೆ ಹಿಡಿಶಾಪ ಹಾಕುತ್ತಿದ್ದಾರೆ. ಇದರ ಜತೆಗೆ ಅವರಿಗೆ ಮನೆಯಲ್ಲಿರುವ ವಸ್ತುಗಳ ಮೌಲ್ಯ ನಿಧಾನವಾಗಿ ತಿಳಿಯುತ್ತಿದೆ.

ಬಿಗ್​ ಬಾಸ್ ನೀಡುವ ಪ್ರತಿ ಸೌಲಭ್ಯಗಳನ್ನು ಟಾಸ್ಕ್​ ಮೂಲಕ ಪಡೆದುಕೊಳ್ಳಬೇಕು. ಇದನ್ನು ಸ್ಪರ್ಧಿಗಳು ಸವಾಲಾಗಿ ಸ್ವೀಕರಿಸಿದ್ದಾರೆ. ಯಾವುದು ಹೆಚ್ಚು ಮುಖ್ಯ. ಯಾವುದು ಮುಖ್ಯವಲ್ಲ ಎಂದು ವಿಂಗಡಿಸಿ ಟಾಸ್ಕ್​ ಸ್ವೀಕರಿಸುತ್ತಿದ್ದಾರೆ. ಈ ಮಧ್ಯೆ, ಸ್ಪರ್ಧಿಗಳು ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ನೀಡುವ ಟಾಸ್ಕ್​ ಗೆಲ್ಲಬೇಕು ಎನ್ನುವ ಕಾರಣಕ್ಕೆ ದೈಹಿಕವಾಗಿ ಬಲಾಢ್ಯರಾದ ಮಂಜು ಪಾವಗಡ, ರಾಜೀವ್​ ಹಾಗೂ ಅರವಿಂದ್​ ಟಾಸ್ಕ್​ನಲ್ಲಿ ಹೆಚ್ಚೆಚ್ಚು ಪಾಲ್ಗೊಂಡಿದ್ದಾರೆ. ಐದು ಟಾಸ್ಕ್​ಗಳ ಪೈಕಿ ಮೂರು ಟಾಸ್ಕ್​ನಲ್ಲಿ ಇವರೇ ಆಟವಾಡಿದ್ದಾರೆ. ಇದನ್ನು ಬಿಗ್​ ಬಾಸ್​ ಗಮನಿಸಿದ್ದಾರೆ. ಅಲ್ಲದೆ, ಶಿಕ್ಷೆ ಕೂಡ ಘೋಷಣೆ ಮಾಡಿದ್ದಾರೆ.

ಐದರಲ್ಲಿ ಮೂರು ಟಾಸ್ಕ್​​ಅನ್ನು ರಾಜೀವ್​, ಮಂಜು ಹಾಗೂ ಅರವಿಂದ್​ ಆಡಿರುವುದರಿಂದ ಅವರೇ ಸ್ಟ್ರಾಂಗ್​ ಎಂದು ಮನೆಯವರು ಒಪ್ಪಿಕೊಂಡಂತೆ ಆಗಿದೆ. ಹೀಗಾಗಿ, ಗ್ಯಾಸ್​ಅನ್ನು ಈ ಮೂವರು ಮಾತ್ರ ಬಳಕೆ ಮಾಡಬೇಕು ಎಂದು ಹೇಳಿದ್ದಾರೆ. ಇದನ್ನು ಕೇಳಿ ಮನೆ ಮಂದಿ ಶಾಕ್​ ಆಗಿದ್ದಾರೆ.

ಇದನ್ನೂ ಓದಿ:  Kichcha Sudeep Salary: ಬಿಗ್​ ಬಾಸ್​ ಸೀಸನ್​ 8ಗೆ ಕಿಚ್ಚ ಸುದೀಪ್​ ಪಡೆದ ಸಂಭಾವನೆ ಎಷ್ಟು?

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ