AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು-ಅರವಿಂದ್​ ಸ್ಟ್ರಾಂಗ್​​ ಎಂದು ಒಪ್ಪಿಕೊಂಡ ಬಿಗ್​ಬಾಸ್​ ಸ್ಪರ್ಧಿಗಳಿಗೆ ಕಠಿಣ ಶಿಕ್ಷೆ

ಮನೆಯಲ್ಲಿ ಸ್ಪರ್ಧಿಗಳು ಬಳಕೆ ಮಾಡುವ ವಸ್ತುಗಳ ಮೌಲ್ಯವನ್ನು ತಿಳಿಸುವ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಇದರಿಂದ ಮನೆಯ ಸದಸ್ಯರು ಕಷ್ಟ ಅನುಭವಿಸುತ್ತಿದ್ದಾರೆ.

ಮಂಜು-ಅರವಿಂದ್​ ಸ್ಟ್ರಾಂಗ್​​ ಎಂದು ಒಪ್ಪಿಕೊಂಡ ಬಿಗ್​ಬಾಸ್​ ಸ್ಪರ್ಧಿಗಳಿಗೆ ಕಠಿಣ ಶಿಕ್ಷೆ
ಅರವಿಂದ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 22, 2021 | 5:07 PM

Share

ಬಿಗ್​ ಬಾಸ್​ ಮನೆಯಲ್ಲಿ ಪ್ರತಿ ಸ್ಪರ್ಧಿಯೂ ತಾವು ಸ್ಟ್ರಾಂಗ್​ ಎಂದು ಪ್ರೂವ್​ ಮಾಡಬೇಕು. ಇಲ್ಲವಾದರೆ ಅಂಥ ಸ್ಪರ್ಧಿ ವೀಕ್ಷಕರಿಂದ ಕಡಿಮೆ ವೋಟ್​ ಪಡೆದು ಮನೆಯಿಂದ ಹೊರಹೋಗುತ್ತಾರೆ. ಹೀಗಾಗಿ ಎಲ್ಲಾ ಟಾಸ್ಕ್​​ಗಳಲ್ಲಿ ತಮ್ಮನ್ನು ಹೈಲೈಟ್​ ಮಾಡಿಕೊಳ್ಳೋಕೆ ​ಮನೆಯವರು ಆದ್ಯತೆ ನೀಡುತ್ತಾರೆ. ಆದರೆ, ಈ ಬಾರಿ ಹಾಗಾಗಿಲ್ಲ. ಮಂಜು ಪಾವಗಡ, ಅರವಿಂದ್ ಕೆಪಿ ಹಾಗೂ ರಾಜೀವ್​ ಸ್ಟ್ರಾಂಗ್​ ಎಂದು ಮನೆ ಮಂದಿ ಒಪ್ಪಿಕೊಂಡಿದ್ದಾರೆ. ಇದಕ್ಕೆ ಬಿಗ್​ ಬಾಸ್​ ಶಿಕ್ಷೆ ನೀಡಿದ್ದಾರೆ!

ಮನೆಯಲ್ಲಿ ಸ್ಪರ್ಧಿಗಳು ಬಳಕೆ ಮಾಡುವ ವಸ್ತುಗಳ ಮೌಲ್ಯವನ್ನು ತಿಳಿಸುವ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಇದರಿಂದ ಮನೆಯ ಸದಸ್ಯರು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ. ಶುಭಾ ಪೂಂಜಾ ಸೇರಿದಂತೆ ಅನೇಕರು ಬಿಗ್​ ಬಾಸ್​ಗೆ ಹಿಡಿಶಾಪ ಹಾಕುತ್ತಿದ್ದಾರೆ. ಇದರ ಜತೆಗೆ ಅವರಿಗೆ ಮನೆಯಲ್ಲಿರುವ ವಸ್ತುಗಳ ಮೌಲ್ಯ ನಿಧಾನವಾಗಿ ತಿಳಿಯುತ್ತಿದೆ.

ಬಿಗ್​ ಬಾಸ್ ನೀಡುವ ಪ್ರತಿ ಸೌಲಭ್ಯಗಳನ್ನು ಟಾಸ್ಕ್​ ಮೂಲಕ ಪಡೆದುಕೊಳ್ಳಬೇಕು. ಇದನ್ನು ಸ್ಪರ್ಧಿಗಳು ಸವಾಲಾಗಿ ಸ್ವೀಕರಿಸಿದ್ದಾರೆ. ಯಾವುದು ಹೆಚ್ಚು ಮುಖ್ಯ. ಯಾವುದು ಮುಖ್ಯವಲ್ಲ ಎಂದು ವಿಂಗಡಿಸಿ ಟಾಸ್ಕ್​ ಸ್ವೀಕರಿಸುತ್ತಿದ್ದಾರೆ. ಈ ಮಧ್ಯೆ, ಸ್ಪರ್ಧಿಗಳು ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ನೀಡುವ ಟಾಸ್ಕ್​ ಗೆಲ್ಲಬೇಕು ಎನ್ನುವ ಕಾರಣಕ್ಕೆ ದೈಹಿಕವಾಗಿ ಬಲಾಢ್ಯರಾದ ಮಂಜು ಪಾವಗಡ, ರಾಜೀವ್​ ಹಾಗೂ ಅರವಿಂದ್​ ಟಾಸ್ಕ್​ನಲ್ಲಿ ಹೆಚ್ಚೆಚ್ಚು ಪಾಲ್ಗೊಂಡಿದ್ದಾರೆ. ಐದು ಟಾಸ್ಕ್​ಗಳ ಪೈಕಿ ಮೂರು ಟಾಸ್ಕ್​ನಲ್ಲಿ ಇವರೇ ಆಟವಾಡಿದ್ದಾರೆ. ಇದನ್ನು ಬಿಗ್​ ಬಾಸ್​ ಗಮನಿಸಿದ್ದಾರೆ. ಅಲ್ಲದೆ, ಶಿಕ್ಷೆ ಕೂಡ ಘೋಷಣೆ ಮಾಡಿದ್ದಾರೆ.

ಐದರಲ್ಲಿ ಮೂರು ಟಾಸ್ಕ್​​ಅನ್ನು ರಾಜೀವ್​, ಮಂಜು ಹಾಗೂ ಅರವಿಂದ್​ ಆಡಿರುವುದರಿಂದ ಅವರೇ ಸ್ಟ್ರಾಂಗ್​ ಎಂದು ಮನೆಯವರು ಒಪ್ಪಿಕೊಂಡಂತೆ ಆಗಿದೆ. ಹೀಗಾಗಿ, ಗ್ಯಾಸ್​ಅನ್ನು ಈ ಮೂವರು ಮಾತ್ರ ಬಳಕೆ ಮಾಡಬೇಕು ಎಂದು ಹೇಳಿದ್ದಾರೆ. ಇದನ್ನು ಕೇಳಿ ಮನೆ ಮಂದಿ ಶಾಕ್​ ಆಗಿದ್ದಾರೆ.

ಇದನ್ನೂ ಓದಿ:  Kichcha Sudeep Salary: ಬಿಗ್​ ಬಾಸ್​ ಸೀಸನ್​ 8ಗೆ ಕಿಚ್ಚ ಸುದೀಪ್​ ಪಡೆದ ಸಂಭಾವನೆ ಎಷ್ಟು?

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ