AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು-ಅರವಿಂದ್​ ಸ್ಟ್ರಾಂಗ್​​ ಎಂದು ಒಪ್ಪಿಕೊಂಡ ಬಿಗ್​ಬಾಸ್​ ಸ್ಪರ್ಧಿಗಳಿಗೆ ಕಠಿಣ ಶಿಕ್ಷೆ

ಮನೆಯಲ್ಲಿ ಸ್ಪರ್ಧಿಗಳು ಬಳಕೆ ಮಾಡುವ ವಸ್ತುಗಳ ಮೌಲ್ಯವನ್ನು ತಿಳಿಸುವ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಇದರಿಂದ ಮನೆಯ ಸದಸ್ಯರು ಕಷ್ಟ ಅನುಭವಿಸುತ್ತಿದ್ದಾರೆ.

ಮಂಜು-ಅರವಿಂದ್​ ಸ್ಟ್ರಾಂಗ್​​ ಎಂದು ಒಪ್ಪಿಕೊಂಡ ಬಿಗ್​ಬಾಸ್​ ಸ್ಪರ್ಧಿಗಳಿಗೆ ಕಠಿಣ ಶಿಕ್ಷೆ
ಅರವಿಂದ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 22, 2021 | 5:07 PM

Share

ಬಿಗ್​ ಬಾಸ್​ ಮನೆಯಲ್ಲಿ ಪ್ರತಿ ಸ್ಪರ್ಧಿಯೂ ತಾವು ಸ್ಟ್ರಾಂಗ್​ ಎಂದು ಪ್ರೂವ್​ ಮಾಡಬೇಕು. ಇಲ್ಲವಾದರೆ ಅಂಥ ಸ್ಪರ್ಧಿ ವೀಕ್ಷಕರಿಂದ ಕಡಿಮೆ ವೋಟ್​ ಪಡೆದು ಮನೆಯಿಂದ ಹೊರಹೋಗುತ್ತಾರೆ. ಹೀಗಾಗಿ ಎಲ್ಲಾ ಟಾಸ್ಕ್​​ಗಳಲ್ಲಿ ತಮ್ಮನ್ನು ಹೈಲೈಟ್​ ಮಾಡಿಕೊಳ್ಳೋಕೆ ​ಮನೆಯವರು ಆದ್ಯತೆ ನೀಡುತ್ತಾರೆ. ಆದರೆ, ಈ ಬಾರಿ ಹಾಗಾಗಿಲ್ಲ. ಮಂಜು ಪಾವಗಡ, ಅರವಿಂದ್ ಕೆಪಿ ಹಾಗೂ ರಾಜೀವ್​ ಸ್ಟ್ರಾಂಗ್​ ಎಂದು ಮನೆ ಮಂದಿ ಒಪ್ಪಿಕೊಂಡಿದ್ದಾರೆ. ಇದಕ್ಕೆ ಬಿಗ್​ ಬಾಸ್​ ಶಿಕ್ಷೆ ನೀಡಿದ್ದಾರೆ!

ಮನೆಯಲ್ಲಿ ಸ್ಪರ್ಧಿಗಳು ಬಳಕೆ ಮಾಡುವ ವಸ್ತುಗಳ ಮೌಲ್ಯವನ್ನು ತಿಳಿಸುವ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಇದರಿಂದ ಮನೆಯ ಸದಸ್ಯರು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ. ಶುಭಾ ಪೂಂಜಾ ಸೇರಿದಂತೆ ಅನೇಕರು ಬಿಗ್​ ಬಾಸ್​ಗೆ ಹಿಡಿಶಾಪ ಹಾಕುತ್ತಿದ್ದಾರೆ. ಇದರ ಜತೆಗೆ ಅವರಿಗೆ ಮನೆಯಲ್ಲಿರುವ ವಸ್ತುಗಳ ಮೌಲ್ಯ ನಿಧಾನವಾಗಿ ತಿಳಿಯುತ್ತಿದೆ.

ಬಿಗ್​ ಬಾಸ್ ನೀಡುವ ಪ್ರತಿ ಸೌಲಭ್ಯಗಳನ್ನು ಟಾಸ್ಕ್​ ಮೂಲಕ ಪಡೆದುಕೊಳ್ಳಬೇಕು. ಇದನ್ನು ಸ್ಪರ್ಧಿಗಳು ಸವಾಲಾಗಿ ಸ್ವೀಕರಿಸಿದ್ದಾರೆ. ಯಾವುದು ಹೆಚ್ಚು ಮುಖ್ಯ. ಯಾವುದು ಮುಖ್ಯವಲ್ಲ ಎಂದು ವಿಂಗಡಿಸಿ ಟಾಸ್ಕ್​ ಸ್ವೀಕರಿಸುತ್ತಿದ್ದಾರೆ. ಈ ಮಧ್ಯೆ, ಸ್ಪರ್ಧಿಗಳು ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ನೀಡುವ ಟಾಸ್ಕ್​ ಗೆಲ್ಲಬೇಕು ಎನ್ನುವ ಕಾರಣಕ್ಕೆ ದೈಹಿಕವಾಗಿ ಬಲಾಢ್ಯರಾದ ಮಂಜು ಪಾವಗಡ, ರಾಜೀವ್​ ಹಾಗೂ ಅರವಿಂದ್​ ಟಾಸ್ಕ್​ನಲ್ಲಿ ಹೆಚ್ಚೆಚ್ಚು ಪಾಲ್ಗೊಂಡಿದ್ದಾರೆ. ಐದು ಟಾಸ್ಕ್​ಗಳ ಪೈಕಿ ಮೂರು ಟಾಸ್ಕ್​ನಲ್ಲಿ ಇವರೇ ಆಟವಾಡಿದ್ದಾರೆ. ಇದನ್ನು ಬಿಗ್​ ಬಾಸ್​ ಗಮನಿಸಿದ್ದಾರೆ. ಅಲ್ಲದೆ, ಶಿಕ್ಷೆ ಕೂಡ ಘೋಷಣೆ ಮಾಡಿದ್ದಾರೆ.

ಐದರಲ್ಲಿ ಮೂರು ಟಾಸ್ಕ್​​ಅನ್ನು ರಾಜೀವ್​, ಮಂಜು ಹಾಗೂ ಅರವಿಂದ್​ ಆಡಿರುವುದರಿಂದ ಅವರೇ ಸ್ಟ್ರಾಂಗ್​ ಎಂದು ಮನೆಯವರು ಒಪ್ಪಿಕೊಂಡಂತೆ ಆಗಿದೆ. ಹೀಗಾಗಿ, ಗ್ಯಾಸ್​ಅನ್ನು ಈ ಮೂವರು ಮಾತ್ರ ಬಳಕೆ ಮಾಡಬೇಕು ಎಂದು ಹೇಳಿದ್ದಾರೆ. ಇದನ್ನು ಕೇಳಿ ಮನೆ ಮಂದಿ ಶಾಕ್​ ಆಗಿದ್ದಾರೆ.

ಇದನ್ನೂ ಓದಿ:  Kichcha Sudeep Salary: ಬಿಗ್​ ಬಾಸ್​ ಸೀಸನ್​ 8ಗೆ ಕಿಚ್ಚ ಸುದೀಪ್​ ಪಡೆದ ಸಂಭಾವನೆ ಎಷ್ಟು?

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ